📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!

ಹೈದರಾಬಾದ್‌ನ ಪ್ರಸಿದ್ಧ ಚಂಚಲ್‌ಗುಡ ಕೇಂದ್ರ ಕಾರಾಗೃಹ ಇದೀಗ ಹೊಸ ಪ್ರಯೋಗದ ಮೂಲಕ ದೇಶದ ಗಮನ ಸೆಳೆಯುತ್ತಿದೆ. “ಫೀಲ್ ದಿ ಜೈಲ್” ಎಂಬ ವಿನೂತನ ಯೋಜನೆಯಡಿ ಸಾಮಾನ್ಯ ನಾಗರಿಕರಿಗೂ ಜೈಲು ಜೀವನದ ಅನುಭವ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಅಪರಾಧದ ಪರಿಣಾಮ ಎಷ್ಟು ಕಠಿಣವಾಗಿರುತ್ತದೆ ಎಂಬುದನ್ನು ಜನರಿಗೆ ನೇರವಾಗಿ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ತೆಲಂಗಾಣ ಬಂಧಿಖಾನೆ ಇಲಾಖೆ ಈ ವಿಶೇಷ ಕಾರ್ಯಕ್ರಮ ಆರಂಭಿಸಿದೆ.

ಈ ಯೋಜನೆಗೆ ತೆಲಂಗಾಣ ರಾಜ್ಯಪಾಲ ಶಿವಪ್ರತಾಪ್ ಶುಕ್ಲಾ ಚಾಲನೆ ನೀಡಿದ್ದು, ಸಮಾಜದಲ್ಲಿ ಅಪರಾಧ ಮುಕ್ತ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಣಿಕ ಕೋಪ ಅಥವಾ ಆವೇಶದಲ್ಲಿ ಮಾಡುವ ತಪ್ಪು ವ್ಯಕ್ತಿಯ ಬದುಕನ್ನು ಹೇಗೆ ನಾಲ್ಕು ಗೋಡೆಗಳ ನಡುವೆ ಸೀಮಿತಗೊಳಿಸುತ್ತದೆ ಎಂಬ ಅನುಭವವನ್ನು ಜನರು ಇಲ್ಲಿ ನೇರವಾಗಿ ಅರಿಯಬಹುದು.

ಚಂಚಲ್‌ಗುಡ ಜೈಲು ಆವರಣದಲ್ಲಿ ನಿರ್ಮಿಸಲಾದ ವಿಶೇಷ ಮ್ಯೂಸಿಯಂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದು, ನಿಜಾಮರ ಕಾಲದ ಕಾರಾಗೃಹದ ಇತಿಹಾಸವನ್ನು ಇಲ್ಲಿ ಸಂಗ್ರಹಿಸಲಾಗಿದೆ. ಹಳೆಯ ಕಾಲದಲ್ಲಿ ಕೈದಿಗಳಿಗೆ ಹಾಕುತ್ತಿದ್ದ ಭಾರವಾದ ಬೇಡಿಗಳು, ಪುರಾತನ ಆಯುಧಗಳು, ಶಿಕ್ಷೆಗೆ ಬಳಸುತ್ತಿದ್ದ ನೇಣುಗಂಬ, ಅಪರೂಪದ ದಾಖಲೆಗಳು ಸೇರಿದಂತೆ ಅನೇಕ ಐತಿಹಾಸಿಕ ವಸ್ತುಗಳು ಪ್ರದರ್ಶನಕ್ಕಿಡಲಾಗಿದೆ.

ಇದಲ್ಲದೆ “ಒಂದು ದಿನದ ಜೈಲು ಅನುಭವ” ಎಂಬ ವಿಶೇಷ ವ್ಯವಸ್ಥೆಯೂ ಜನರಲ್ಲಿ ಕುತೂಹಲ ಮೂಡಿಸಿದೆ. ಭಾಗವಹಿಸುವವರು ಕೈದಿಗಳಂತೆ ವಿಶೇಷ ಕೊಠಡಿಗಳಲ್ಲಿ ವಾಸಿಸಬೇಕು. ಕೈದಿಗಳಿಗೆ ನೀಡುವ ಆಹಾರವೇ ಇಲ್ಲಿ ನೀಡಲಾಗುತ್ತದೆ. ಜೊತೆಗೆ ಲೋಹದ ತಟ್ಟೆ, ಕುಡಿಯುವ ನೀರಿನ ಗ್ಲಾಸ್, ಕಪ್ಪು ಬ್ಲಾಂಕೆಟ್‌ಗಳಂತಹ ಜೈಲು ಉಪಕರಣಗಳನ್ನು ಬಳಸಬೇಕಾಗುತ್ತದೆ.

ಜೈಲು ಜೀವನದ ಕಠಿಣತೆ ಹಾಗೂ ನಿಯಮಶಿಸ್ತಿನ ನೈಜ ಅನುಭವ ನೀಡುವ ಈ ಯೋಜನೆ ಯುವಜನತೆಯಲ್ಲಿ ವಿಶೇಷ ಆಸಕ್ತಿ ಮೂಡಿಸಿದ್ದು, “ಅಪರಾಧಕ್ಕಿಂತ ಜೀವನವೇ ಅಮೂಲ್ಯ” ಎಂಬ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ಪ್ರಯತ್ನವಾಗಿ ಕಾಣಲಾಗುತ್ತಿದೆ.

##FeelTheJail #ChanchalgudaJail #Hyderabad #JailExperience #Telangana #PrisonLife #ViralNews #KannadaNews #BreakingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಬಾಲಗರ್ಭಿಣಿಯರ ಸಂಖ್ಯೆ 5975….!!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?