📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..

ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಒಂದು ಗಂಭೀರ ಹಣಕಾಸು ವಂಚನೆ ಮತ್ತು ನಕಲಿ ದಾಖಲೆಗಳ ಪ್ರಕರಣ ಇದೀಗ ಖಾಸಗಿ ದೂರಿನ ಆಧಾರದ ಮೇಲೆ ಅಪರಾಧ ಕ್ರಮಾಂಕ 72/2026ರಲ್ಲಿ ದಾಖಲಾಗಿ ತನಿಖೆಗೆ ಒಳಪಟ್ಟಿದೆ.

ಪಿರ್ಯಾದಿದಾರರಾದ ಎಸ್. ಬಾಲಕೃಷ್ಣ ಹೆಗ್ಡೆ (61) ಮತ್ತು ಗಂಗಾಧರ ಹೆಗ್ಡೆ ಅವರು ನೀಡಿದ ದೂರಿನ ಪ್ರಕಾರ, 2013ರ ಡಿಸೆಂಬರ್ 22ರಂದು ಹೊಸಾಳ ಗ್ರಾಮದ ಸರ್ವೋದಯ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಲಿಮಿಟೆಡ್‌ನಲ್ಲಿ ಜೆಸಿಬಿ ಯಂತ್ರ ಖರೀದಿಗಾಗಿ ಸಾಲ ಪಡೆದಂತೆ 1ನೇ ಆರೋಪಿ ಎನ್. ಹರೀಶ್ ಕಾರಂತ್ ತೋರಿಸಲಾಗಿದೆ. ಈ ಸಾಲದ ಪ್ರಸ್ತಾವನೆ ವೇಳೆ 2ನೇ ಆರೋಪಿ ನಿತ್ಯಾನಂದ ಕಾಮತ್ ಮತ್ತು 3ನೇ ಆರೋಪಿ ಬಾಬು ರಾಜೇಂದ್ರ ಪ್ರಸಾದ್ ಅವರು ಪಿರ್ಯಾದಿದಾರರಿಂದ ಕೇವಲ “ಸಾಕ್ಷಿ ಸಹಿ” ಪಡೆಯುವ ನೆಪದಲ್ಲಿ ಸಹಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಇದೆ.

ಆದರೆ ವಾಸ್ತವದಲ್ಲಿ, ಪಿರ್ಯಾದಿದಾರರನ್ನು ಜಾಮೀನುದಾರರಾಗಿ ತೋರಿಸುವಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅವರ ಅರಿವಿಲ್ಲದೇ ದೊಡ್ಡ ಪ್ರಮಾಣದ ಸಾಲದ ಹೊಣೆಗಾರಿಕೆಯಲ್ಲಿ ಸಿಲುಕಿಸಲಾಗಿದೆ ಎಂಬುದು ದೂರಿನ ಪ್ರಮುಖ ಅಂಶವಾಗಿದೆ. ಈ ಸುಳ್ಳು ದಾಖಲೆಗಳ ಆಧಾರದ ಮೇಲೆ ಸಹಕಾರ ಸಂಘಗಳ ಜಿಲ್ಲಾ ರಿಜಿಸ್ಟ್ರಾರ್ ಮುಂದೆ ಏಕಪಕ್ಷೀಯ ತೀರ್ಪು ಪಡೆದು, ಸುಮಾರು ₹33,89,899 ವಸೂಲಾತಿಗಾಗಿ ಪಿರ್ಯಾದಿದಾರರ ವಿರುದ್ಧ ಎಕ್ಸಿಕ್ಯೂಶನ್ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದಲ್ಲದೆ, ಅಡಮಾನವಿಟ್ಟ ಜೆಸಿಬಿ ಯಂತ್ರವನ್ನು ಪಿರ್ಯಾದಿದಾರರಿಗೆ ತಿಳಿಸದೇ ಅಕ್ರಮವಾಗಿ ಮಾರಾಟ ಮಾಡಿ, ಆ ಹಣವನ್ನು ಸಾಲದ ಖಾತೆಗೆ ಜಮಾ ಮಾಡದೇ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಭದ್ರತಾ ಆಸ್ತಿಯೇ ನಾಶವಾಗಿರುವಂತಾಗಿದೆ ಎಂದು ಹೇಳಲಾಗಿದೆ.

ಇನ್ನೊಂದು ಗಂಭೀರ ಅಂಶವೆಂದರೆ, ನಿಜವಾದ ಜಾಮೀನುದಾರಳಾದ 3ನೇ ಆರೋಪಿಯ ಪತ್ನಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ, ಉದ್ದೇಶಪೂರ್ವಕವಾಗಿ ಪಿರ್ಯಾದಿದಾರರನ್ನೇ ಗುರಿಯಾಗಿಸಲಾಗಿದೆ ಎಂಬ ಆರೋಪವೂ ಇದೆ. ಜೊತೆಗೆ ಒಂದೇ ಸಾಲದ ವಿಚಾರಕ್ಕೆ ಸಂಬಂಧಿಸಿ ವಿವಿಧ ನ್ಯಾಯಾಲಯಗಳಲ್ಲಿ ವಿಭಿನ್ನ ವಸೂಲಾತಿ ಪ್ರಕ್ರಿಯೆಗಳನ್ನು ಆರಂಭಿಸಿ, ಕಾನೂನು ವ್ಯವಸ್ಥೆಯನ್ನು ತಪ್ಪಾಗಿ ಬಳಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮತ್ತಷ್ಟು ಗಂಭೀರವಾಗಿ, ಹಿಂದಿನ ಸಾಲದ ವೇಳೆ ಪಡೆದಿದ್ದ ಚೆಕ್‌ಗಳನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಿರುವುದಾಗಿ ಪಿರ್ಯಾದಿದಾರರು ಆರೋಪಿಸಿದ್ದಾರೆ. ಕಾಲಮಿತಿ ಮೀರಿದ ಬಳಿಕವೂ ದಾವೆ ಹೂಡಿ ನ್ಯಾಯಾಲಯವನ್ನು ತಪ್ಪುದಾರಿಗೆಳೆಯಲಾಗಿದೆ ಎಂಬುದೂ ದೂರಿನ ಭಾಗವಾಗಿದೆ.

ಈ ಹಿನ್ನೆಲೆಯಲ್ಲಿ, ಸಂಬಂಧಿತ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿ, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ಆರಂಭವಾಗಿದೆ.

##ಬ್ರಹ್ಮಾವರ #ವಂಚನೆಕೇಸ್ #ನಕಲಿದಾಖಲೆ #ಸಹಕಾರಸಂಸ್ಥೆ #ಕಾನೂನುಕ್ರಮ #ಕ್ರೈಂನ್ಯೂಸ್

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್