📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!

    SMA ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಎರಡು ವರ್ಷದ ಕಂದಮ್ಮ ಸಾಯಿ ಚಿರಾಗ್‌ನನ್ನು ಬದುಕಿಸಲು, ಸಾಮಾಜಿಕ ಕಾರ್ಯಕರ್ತ ಫಯಾಝ್ ಮಾಡೂರು ಅವರು ನಡೆಸಿದ ನಿಸ್ವಾರ್ಥ ಹೋರಾಟ ಮತ್ತು ಇಡೀ ನಾಡಿನ ಜನತೆ ಸ್ಪಂದಿಸಿದ ರೀತಿ ಪ್ರತಿಯೊಬ್ಬರ ಕಣ್ಣಾಲಿಗಳನ್ನು ತುಂಬಿ ಬರುವಂತೆ ಮಾಡುತ್ತದೆ.

    ಹೆತ್ತವರ ಕಣ್ಣೀರು ಮತ್ತು ಫಯಾಝ್ ಮಾಡೂರು ಅವರ ಪ್ರವೇಶ

    ಎಂಟು ತಿಂಗಳಿನಿಂದ ಮಗುವಿನ ಜೀವ ಉಳಿಸಲು ಪೋಷಕರಾದ ಸಾಯಿ ಭಾರ್ಗವಿ ಹಾಗೂ ಚೇತನ್ ಗೌಡ ಪಡಬಾರದ ಕಷ್ಟ ಪಟ್ಟಿದ್ದರು. ಇಂಡೋನೇಷ್ಯಾದಲ್ಲಿ ನಡೆಯಬೇಕಿದ್ದ ದುಬಾರಿ ಚಿಕಿತ್ಸೆಗೆ ಬರೋಬ್ಬರಿ 2 ಕೋಟಿ ರೂಪಾಯಿ ಅಗತ್ಯವಿತ್ತು. ಮಧ್ಯಮ ವರ್ಗದ ಈ ಪೋಷಕರಿಗೆ ಅಷ್ಟೊಂದು ದೊಡ್ಡ ಮೊತ್ತವನ್ನು ಹೊಂದಿಸುವುದು ಅಸಾಧ್ಯದ ಮಾತಾಗಿತ್ತು. ಕಣ್ಣೆದುರೇ ಮಗು ದಿನ ದಿನವೂ ಸಾವು-ಬದುಕಿನ ನಡುವೆ ಹೋರಾಡುವುದನ್ನು ಕಂಡು ಪೋಷಕರು ಅಸಹಾಯಕರಾಗಿದ್ದಾಗ, ದೇವದೂತರಂತೆ ಎಂಟ್ರಿ ಕೊಟ್ಟವರೇ ಸಾಮಾಜಿಕ ಕಾರ್ಯಕರ್ತ ಫಯಾಝ್ ಮಾಡೂರು. ಹೆತ್ತವರ ಕಣ್ಣೀರನ್ನು ಕಂಡ ಫಯಾಝ್, “ನಿಮ್ಮ ಮಗುವನ್ನು ಉಳಿಸುವ ಜವಾಬ್ದಾರಿ ನಮ್ಮದು” ಎಂದು ಧೈರ್ಯ ತುಂಬಿ ಕಣಕ್ಕಿಳಿದರು.

    40 ದಿನಗಳ ಕಾಲ ದಣಿವರಿಯದ ಹೋರಾಟ

    2 ಕೋಟಿ ರೂಪಾಯಿ ಎಂಬುದು ಸಣ್ಣ ಮೊತ್ತವಲ್ಲದಿದ್ದರೂ ಫಯಾಝ್ ಧೃತಿಗೆಡಲಿಲ್ಲ. ಬಿಸಿಲು, ಮಳೆ ಎನ್ನದೆ ಫಯಾಝ್ ಮತ್ತು ಅವರ ತಂಡದವರು ರಾಜ್ಯದ ಬೇರೆ ಬೇರೆ ನಗರಗಳ ಬೀದಿ ಬೀದಿಗಳಲ್ಲಿ ಸಾರ್ವಜನಿಕ ಜಾಥಾ ನಡೆಸಿ ಪ್ರತಿಯೊಬ್ಬರ ಬಳಿಯೂ ಮಗುವಿನ ಪ್ರಾಣ ಭಿಕ್ಷೆ ಬೇಡುತ್ತಾ ಸಾಗಿದರು. ಇದರೊಂದಿಗೆ ಫೇಸ್‌ಬುಕ್, ವಾಟ್ಸಾಪ್‌ಗಳ ಮೂಲಕ ಮಗುವಿನ ಪರಿಸ್ಥಿತಿಯನ್ನು ನಾಡಿನ ಮೂಲೆ ಮೂಲೆಗೂ ತಲುಪಿಸಿದರು. ಸತತ 40 ದಿನಗಳ ಕಾಲ ಮನೆ, ಸಂಸಾರವನ್ನು ಮರೆತು ಕೇವಲ ಮಗುವಿನ ಚಿಕಿತ್ಸೆಯ ಹಣ ಸಂಗ್ರಹಿಸುವುದನ್ನೇ ಫಯಾಝ್ ತಮ್ಮ ದೈನಂದಿನ ಧ್ಯೇಯವಾಗಿಸಿಕೊಂಡಿದ್ದರು.

    ನಂಬಲಾಗದ ಪವಾಡ: 2 ಕೋಟಿ ರೂ. ಸಂಗ್ರಹ!

    ಫಯಾಝ್ ಅವರ ನಿಷ್ಕಲ್ಮಶ ಶ್ರಮಕ್ಕೆ ರಾಜ್ಯದ ಜನತೆ ಕೊಟ್ಟ ಕೊಡುಗೆ ಅಸಾನ್ಯವಾದದ್ದು. ದಿನಗೂಲಿ ನೌಕರರಿಂದ ಹಿಡಿದು ದೊಡ್ಡ ಉದ್ಯಮಿಗಳವರೆಗೆ, ಪ್ರತಿಯೊಬ್ಬರೂ ತಮಗೆ ತೋಚಿದ ಸಹಾಯ ಮಾಡಿದರು. ಒಂದು ಜೀವವನ್ನು ಉಳಿಸಲು ಧರ್ಮ, ಜಾತಿಯ ಬೇಲಿಗಳನ್ನು ಬದಿಗೊತ್ತಿ ಇಡೀ ಕರ್ನಾಟಕವೇ ಒಂದಾಗಿ ನಿಂತಿತ್ತು! ಅಂತಿಮವಾಗಿ ಅಂದುಕೊಂಡಂತೆ ಕೇವಲ 40 ದಿನಗಳಲ್ಲಿ ಬರೋಬ್ಬರಿ 2 ಕೋಟಿ ರೂಪಾಯಿ ಮೊತ್ತ ಸಂಗ್ರಹವಾಯಿತು. ಇಷ್ಟೊಂದು ಬೃಹತ್ ಮೊತ್ತ ಇಷ್ಟು ಕಡಿಮೆ ಅವಧಿಯಲ್ಲಿ ಸಂಗ್ರಹವಾಗಿದ್ದು ನಿಜಕ್ಕೂ ನಂಬಲಾಗದ ಮತ್ತು ಇತಿಹಾಸ ಸೃಷ್ಟಿಸಿದ ಘಟನೆಯಾಗಿದೆ.

    ಕೋಟಿ ಕೋಟಿ ಧನ್ಯವಾದಗಳು

    ಒಬ್ಬ ಅಪರಿಚಿತ ಮಗುವಿಗಾಗಿ ಫಯಾಝ್ ಮಾಡೂರು ಅವರು ತೋರಿದ ಕಾಳಜಿ ಮತ್ತು ನಿಸ್ವಾರ್ಥ ಸೇವೆಗೆ ಇಡೀ ನಾಡು ತಲೆಬಾಗಬೇಕಿದೆ. ತಮಗಿರುವ ಆರ್ಥಿಕ ಸಂಕಷ್ಟಗಳ ನಡುವೆಯೂ, ಮಗುವಿನ ಮುಖ ನೋಡಿ ಕೈಲಾದಷ್ಟು ಸಹಾಯ ಮಾಡಿದ ಪ್ರತಿಯೊಬ್ಬ ಸಹೃದಯಿ ಜನರಿಗೂ ಧನ್ಯವಾದಗಳು. ಹನಿ ಹನಿ ಸೇರಿದರೆ ಹಳ್ಳ ಎಂಬಂತೆ, ಜನರ ಒಂದೊಂದು ರೂಪಾಯಿಯೂ ಇಂದು ಮಗುವಿಗೆ ಮರುಜನ್ಮ ನೀಡಿದೆ. ಹಣದ ಕೊರತೆಯಿಂದ ಮಗು ಸತ್ತುಹೋಗಬಹುದು ಎಂಬ ಹೆದರಿಕೆಯಲ್ಲಿದ್ದ ಪೋಷಕರಿಗೆ ಇಂದು ಇಡೀ ನಾಡಿನ ಜನತೆ ಹೊಸ ಭರವಸೆ ನೀಡಿದ್ದಾರೆ. ಮಾನವೀಯತೆ ಎಂದಿಗೂ ಸಾಯುವುದಿಲ್ಲ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ.

    ##FayazMaduru #SaveSaiChirag #HumanityWins #MangaloreMiracle #KarnatakaUnites

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”