📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ

ಕನಕಪುರ ಬಂಡೆ ಖ್ಯಾತಿಯ ಕರ್ನಾಟಕ ರಾಜ್ಯ ಉಪ ಮುಖ್ಯಮಂತ್ರಿ ಆಗೋ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂಬ ಮಾಹಿತಿಯು ಫೋಟೋ ಸಹಿತ ಸಾಮಾಜಿಕ ತಾಣದಲ್ಲಿ ಪ್ರಕಟವಾಗಿರುವುದು ಸಾಕಷ್ಟು ಜನರಿಗೆ ಗೊಂದಲ ತರಿಸಿದೆ. ಆದರೆ ಅದು ಸತ್ಯವಲ್ಲ ಭೋಗಸ್ ಸುದ್ದಿ.

ರಾಜಕೀಯದಲ್ಲಿ, ಯಾವುದೇ ಸಂದರ್ಭ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಈ ಹಿಂದೆ, ಪ್ರಧಾನಿ ಮೋದಿ ಹಾಗೂ ಬಿಜೆಪಿಯ ಬಗ್ಗೆ ಬಹಳ ಕಠಿಣವಾಗಿ ಮಾತನಾಡುತ್ತಿದ್ದ ರಾಘವ್ ಚಡ್ಡ ಬಿಜೆಪಿಗೆ ಸೇರ್ಪಡೆಯಾಗಿದ್ದೆ  ಸಾಕ್ಷಿ.

ಆದರೆ ಡಿಕೆ ಶಿವಕುಮಾರ್ ಕಾಂಗ್ರೆಸ್ನ ಭಕ್ತ, ಕಾಂಗ್ರೆಸಿಗಾಗಿ ಸಾಕಷ್ಟು ರಿಸ್ಕ್ ತೆಗೆದುಕೊಂಡು ಕೆಲಸ ಮಾಡಿದಂತಹ ವ್ಯಕ್ತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಭಕ್ತರಲ್ಲ. ಆದರೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಭಕ್ತ ಎಂಬ ವಿಚಾರ ಪಕ್ಷಕ್ಕೆ ಗೊತ್ತಿದೆ. ಆದ್ರೂ ಡಿಕೆಗೆ, ಅವರ ಕೆಲಸಕ್ಕೆ ಸರಿಸಮಾನವಾದ ಸ್ಥಾನಮಾನ ಸಿಗುತ್ತಿಲ್ಲ, ಕೆಲಸವನ್ನೇ ಮಾಡದವರು ಸ್ಥಾನಮಾನ ಪಡೆದು ಆನಂದಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಬೇಸರ ಹೊಂದಿದ್ದಾರೆ ಎನ್ನುವುದೂ ಸತ್ಯವೇ. ಆದ್ರೂ ಪಕ್ಷದ ಹೈಕಮಾಂಡ್, ಈ ವಿಚಾರದಲ್ಲಿ ಡಿಕೆ ಜೊತೆಗೆ ನಿಲ್ಲಲೂ ಸಿದ್ದವಿಲ್ಲ ಹಾಗೆಯೇ ಡಿಕೆಯನ್ನು ಬಿಟ್ಟುಕೊಡಲೂ ಅವರಿಂದ ಆಗುತ್ತಿಲ್ಲ.

ಹೆಚ್ಚು ಕಡಿಮೆ ಕಳೆದ ಆರು ತಿಂಗಳಿನಿಂದ ನಾಯಕತ್ವ ಬದಲಾವಣೆ ಆಗಬೇಕು ಎಂಬ ನಿರೀಕ್ಷೆಯಲ್ಲಿ ಡಿಕೆ ಶಿವಕುಮಾರ್ ಇದ್ದರು. ಆದರದು ಆಗುತ್ತಿಲ್ಲ. ಸಿದ್ದರಾಮಯ್ಯನವರ ಕೈ ಮೇಲಾಗುತ್ತಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ ವಿಚಾರದಲ್ಲಿ  ಸೇಫ್ ಜೋನ್ ಎಂದು ಭಾವಿಸಿದ್ದಾರೆ. ಡಿಕೆ, ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ, ಸ್ಥಾನ ಸಿಗದಿದ್ದರೂ ಪಕ್ಷಕ್ಕೆ ಡ್ಯಾಮೇಜ್ ಮಾಡುವುದಿಲ್ಲ ಎಂಬ ಧೈರ್ಯದಲ್ಲಿ ಸಿದ್ದರಾಮಯ್ಯರನ್ನು ಮುಂದುವರೆಸುತ್ತಿದ್ದಾರೆ. ಅತ್ತ ಸಿದ್ದರಾಮಯ್ಯರವರನ್ನು ತೆಗೆದರೆ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಾರೆಂಬ ಸಂಶಯ ಹೈಕಮಾಂಡ್ಗಿದೆ. ಈ ಕಾರಣದಿಂದಾಗಿ, ಡಿಕೆ ಶಿವಕುಮಾರ್ ಅವರ ಬೇಡಿಕೆಗೆ ಹೈಕಮಾಂಡ್ ತೇಪೆ ಹಾಕುತ್ತಿದೆಯಷ್ಟೇ.  ಯಾವುದೇ ನಿರ್ಧಾರವನ್ನು ಪ್ರಕಟಿಸುತ್ತಿಲ್ಲ. ನಿರ್ಧಾರ ಪ್ರಕಟಿಸುವ ಯೋಚನೆಯಲ್ಲೂ ಅದು ಇಲ್ಲ.

ಇದರ ಮಧ್ಯೆ, ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಡೆಯಿಂದ ಸ್ಪಷ್ಟ ಆಹ್ವಾನ ಹೋಗಿದೆ. ನೀವು ಪಕ್ಷಕ್ಕೆ ಬನ್ನಿ, ಮುಂದಿನ ಮುಖ್ಯಮಂತ್ರಿ ನೀವೇ ಆಗುತ್ತೀರಿ ಎಂಬುದನ್ನು ನಾವು ನಿಮಗೆ ಪ್ರಾಮಿಸ್ ಮಾಡುತ್ತೇವೆ. ಸುಮ್ಮನೆ ಮುಳುಗುತ್ತಿರುವ ಹಡಗಿನಲ್ಲಿ ಯಾಕೆ ಮುಂದುವರೆಯುತ್ತಿರಿ. ಆರ್ಥಿಕವಾಗಿ ಸಾಕಷ್ಟು ಬೆಳೆದಿದ್ದೀರಿ ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದಕ್ಕೆ ಬಲಿಷ್ಠ ಸರ್ಕಾರದ ಅಗತ್ಯತೆ ಇದೆ ಏನಂತೀರಿ ಎಂಬ ಪ್ರಶ್ನೆಯನ್ನು ಡಿಕೆ ಮುಂದೆ ಇಡಲಾಗಿದೆ. ಇದೆಲ್ಲಾ ಹಳೆಯ ಸುದ್ದಿಯೂ ಆಗಿದೆ. ಆ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆದಿದೆ ಕೂಡ. ಇದನ್ನು ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿಕೊಂಡಿದ್ದಾರೆ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ, ಡಿಕೆ ವಿಚಾರವಾಗಿ ಒಂದಷ್ಟು ಸಚಿವರು ನಡೆದುಕೊಳ್ಳುತ್ತಿರುವ ರೀತಿ ಮತ್ತು ಪಕ್ಷದ ಅಧ್ಯಕ್ಷ ಎಂಬುದನ್ನು ನೋಡದೆ ಗೌರವವನ್ನು ಕೊಡದೆ ಆಡಿಕೊಳ್ಳುತ್ತಿರುವ ರೀತಿ, ಡಿಕೆ ಮತ್ತು ಡಿಕೆ ಬೆಂಬಲಿಗರಲ್ಲಿ ಬೇಸರ ತರಿಸಿದ್ದರಲ್ಲಿ ಯಾವ ತಪ್ಪು ಇಲ್ಲ. ಈ ಹಿಂದೆ ರಾಜಣ್ಣ ಸಚಿವ ಸ್ಥಾನ ಕಳೆದುಕೊಂಡದ್ದು ಡಿಕೆ ವಿಚಾರದಲ್ಲಿ ನಡೆದುಕೊಂಡ ರೀತಿಗಲ್ಲ. ಬದಲಿಗೆ, ರಾಹುಲ್ ಗಾಂಧಿ ವಿಚಾರದಲ್ಲಿ ಮಾಡಿದ ಕಾಮೆಂಟ್ ಗಾಗಿ. ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧವಾಗಿ ಮಾತನಾಡಿದರೆ ಯಾವ ಕ್ರಮವೂ ಇಲ್ಲ ಅಂದರೆ, ಇಲ್ಲಿ ಪಕ್ಷ ಬೆಳೆಸಿದ್ದಕ್ಕೆ ಏನು ಕೊಡುಗೆ ಸಿಗುತ್ತಿದೆ ಎಂಬ ಪ್ರಶ್ನೆ ಡಿಕೆ ಬೆಂಬಲಿಗರಿಂದ ಬರುತ್ತಿರುವುದು ಸತ್ಯವೇ. ಇದೆಲ್ಲವೂ ಡಿಕೆ ಬಿಜೆಪಿಗೆ ಹೋದರು ಅಚ್ಚರಿ ಇಲ್ಲ ಎಂಬ ಮಾತುಗಳಿಗೆ ಇಂಬು ಕೊಡಬಹುದು, ಅದು ಸುಲಭವೇ?

ಹಾಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಹಾಲಿ ಉಪಮುಖ್ಯಮಂತ್ರಿ ಅಷ್ಟು ಈಜಿಯಾಗಿ ಇನ್ನೊಂದು ಪಕ್ಷದ ತೆಕ್ಕೆಗೆ ಹೋಗಲು ಸಾಧ್ಯವೇ? ಹೋದರೆ, ಆ ಪಕ್ಷದ ಆಡಳಿತ ಬರುತ್ತದೆಯೇ? ಸಿದ್ದರಾಮಯ್ಯನವರ ಪಕ್ಷ ಬಿದ್ದು ಹೋಗುತ್ತದೆಯೇ?  ಇನ್ನೂ ಎರಡು ವರ್ಷದ ಆಡಳಿತ ಬಾಕಿ ಇದೆ. ಹೀಗಿರುವಾಗ ಈಗಲೇ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋಗಿ ಹೊಸ ಸರ್ಕಾರ ಮಾಡಬೇಕು ಎಂದರೆ ಕನಿಷ್ಠ ನೂರರಷ್ಟು ಶಾಸಕರನ್ನು ತಮ್ಮ ಜೊತೆಗೆ ಕರೆದೊಯ್ಯ ಬೇಕಾಗುತ್ತದೆ. ಅದು ಸಾಧ್ಯವೇ ಅನ್ನುವುದು ಪ್ರಶ್ನೆ? ಸದ್ಯದ ಮಟ್ಟಿಗೆ ಅದು ಅಸಂಭವ. ಡಿಕೆ ಶಿವಕುಮಾರ್ ಪಕ್ಷ ತ್ಯಜಿಸಿದರೆ ಕಾಂಗ್ರೆಸ್ ಬಲ ನೂರಕ್ಕೆ ನೂರರಷ್ಟು ಕುಸಿಯುತ್ತದೆ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ಕಾಂಗ್ರೆಸ್ಸಿಗೆ ದೊಡ್ಡ ಡ್ಯಾಮೇಜ್ ಆಗುವುದು ಗ್ಯಾರಂಟಿ. ಆದರೆ ಈ ಕ್ಷಣಕ್ಕೆ ಡಿಕೆ ಶಿವಕುಮಾರ್ ಗೆ ಲಾಭವೇನು? ಸಿದ್ದರಾಮಯ್ಯರವರನ್ನು ಪದಚ್ಯುತಗೊಳಿಸಲು ಸಾಧ್ಯವಾಗಿಲ್ಲ ಅಂದರೆ, ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳಲಾಗಲಿಲ್ಲ ಅಂದರೆ ಈ ಒಂದು ಪಕ್ಷಾಂತರದಿಂದ ಏನು ಉಪಯೋಗ?

ಹಾಗಾಗಿ ಪದ್ಯಕ್ಕೆ ಡಿಕೆ ಶಿವಕುಮಾರ್ ಬಿಜೆಪಿಯ ತೆಕ್ಕೆಗೆ ಹೋಗಲಾರರು. 1 ಥರ್ಡ್ ಮೆಜಾರಿಟಿ ಶಾಸಕರ ಬೆಂಬಲ ಇಲ್ಲದೆ ಡಿಕೆ ಅಂತಹ ನಿರ್ಧಾರ ತೆಗೆದುಕೊಳ್ಳಲಾರರು. ಒಂದೊಮ್ಮೆ ಅಂತಹ ನಿರ್ಧಾರಕ್ಕೆ ಅವರು ಬರುತ್ತಾರೆಂದರೆ ಮುಂದಿನ ಚುನಾವಣೆಯ ಹೊತ್ತಿಗೆ ಬರಬಹುದು ಅಷ್ಟೇ. ಹಾಗಾಗಿ, ಈಗ ಪ್ರಕಟವಾಗಿರುವಂತಹ ಸುದ್ದಿ ಬೋಗಸ್ ಮತ್ತು ಆ ಫೋಟೋ ಕೂಡ ಅತ್ಯಂತ ಅಚ್ಚುಕಟ್ಟಾಗಿ ಮತ್ತು ಚಂದದಲ್ಲಿ ತಯಾರು ಮಾಡಲಾದ ನಕಲಿ ಫೋಟೋ. ಸೇಮ್ ಫೋಟೋವನ್ನು ಕಾಂಗ್ರೆಸ್ಸಿಗೆ ಮೋದಿ ಬಂದ ಹಾಗೆ ಕೌಂಟರ್ ಆಗಿ ತಯಾರ ಮಾಡಿ ಕಳುಹಿಸಿದ್ದಾರೆ. ಅದನ್ನೂ ನೋಡಿ. ಈ ಎರಡೂ ಫೋಟೋ ನಕಲಿಗಳೆ ಆಗಿವೆ.

-ದತ್ತು

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”