📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?

    ಕರ್ನಾಟಕದ ಮಣ್ಣಿನಲ್ಲಿ ನಿಂತು, ಕನ್ನಡದ ಅನ್ನ ಉಣ್ಣುತ್ತಾ, ಕನ್ನಡದ ಗಾಳಿಯನ್ನು ಉಸಿರಾಡುತ್ತಾ, ಕರ್ನಾಟಕದ ಮಂತ್ರಿಯಾಗಿ ಮೆರೆಯುತ್ತಾ, ಅಧಿಕಾರದ ಕುರ್ಚಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು “ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಮಾತನಾಡಬೇಡಿ” ಎನ್ನುತ್ತಾರೆ ಎಂದರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಈ ಇತ್ತೀಚಿನ ಹೇಳಿಕೆ ಕೇವಲ ಒಂದು ಸೂಚನೆಯಲ್ಲ, ಇದು ಆರು ಕೋಟಿ ಕನ್ನಡಿಗರ ಅಸ್ಮಿತೆಗೆ ಬಗೆದ ದ್ರೋಹ.
    ಇವರು ಯಾರ ಪ್ರತಿನಿಧಿ?
    ಸಚಿವರ ಈ ಹೇಳಿಕೆಯನ್ನು ಕೇಳಿದರೆ ಒಂದು ಅನುಮಾನ ಕಾಡುತ್ತದೆ—”ಇವರು ಕರ್ನಾಟಕದ ಮಂತ್ರಿಯೋ, ಅಥವಾ ವಿದೇಶದ ಯಾವುದೋ ಜನಪ್ರತಿನಿಧಿಯೋ ಅಥವಾ ರಾಜ್ಯಪಾಲನೋ? ಕರ್ನಾಟಕದ ನೆಲದಲ್ಲಿ ಕನ್ನಡ ಬೇಡ ಎನ್ನುವ ಇವರಿಗೆ ಇಲ್ಲಿನ ಭಾಷೆ, ಸೊಗಡು ಮತ್ತು ಸಂಸ್ಕೃತಿಯ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತಿದೆ. ಬ್ರಿಟಿಷರು ಹೋದರೂ ಇವರಂತಹವರಲ್ಲಿ ಇನ್ನೂ ಆ ‘ಗುಲಾಮಿ ಮಾನಸಿಕತೆ’ ಜೀವಂತವಾಗಿದೆ ಎಂಬುದು ಈ ಹೇಳಿಕೆಯಿಂದ ಸಾಬೀತಾಗಿದೆ.
    ಕನ್ನಡ ಇಲ್ಲದಿದ್ದರೆ ಕರ್ನಾಟಕ ರಾಜ್ಯವೇಕೆ?
    ಸಚಿವರಿಗೆ ಒಂದು ನೇರ ಪ್ರಶ್ನೆ “ಈ ನೆಲದಲ್ಲಿ ಕನ್ನಡವೇ ಇಲ್ಲ ಎಂದಮೇಲೆ ಕರ್ನಾಟಕ ಎಂಬ ರಾಜ್ಯವೇಕೆ ಇರಬೇಕು?” ಭಾಷೆಯ ಆಧಾರದ ಮೇಲೆ ಪ್ರಾಂತ್ಯಗಳು ವಿಂಗಡಣೆಯಾದ ಇತಿಹಾಸ ಸಚಿವರಿಗೆ ತಿಳಿದಿಲ್ಲವೇ? ಈ ರಾಜ್ಯದ ಅಸ್ತಿತ್ವವೇ ಕನ್ನಡದ ಮೇಲಿದೆ. ಅಂತಹದರಲ್ಲಿ ಶಿಕ್ಷಣ ಸಂಸ್ಥೆಗಳಿಂದ ಕನ್ನಡವನ್ನು ಹೊರದಬ್ಬುವುದು ಎಂದರೆ ಕರ್ನಾಟಕದ ಆತ್ಮವನ್ನೇ ಕೊಂದಂತೆ ಆಗುವುದಿಲ್ಲವೇ?
    ಯಾರ ಖುಷಿಗಾಗಿ ಈ ಹೇಳಿಕೆ?
    ಸಚಿವರು ಈ ಉದ್ಧಟತನದ ಹೇಳಿಕೆಯನ್ನು ಯಾರ ಪ್ರೀತಿ ಗಳಿಸಲು ನೀಡಿದ್ದಾರೆ? ಬಂಡವಾಳಶಾಹಿಗಳ ಲಾಭಕ್ಕಾಗಿ ಅಥವಾ ಪರಭಾಷಿಕ ಉದ್ಯಮಿಗಳ ಮೆಚ್ಚುಗೆ ಗಳಿಸುವುದಕ್ಕಾಗಿಯೇ? ಶಿಕ್ಷಣ ಇಂದು ಉದ್ಯಮಿಗಳ ಪಾಲಿಗೆ ಲಾಭದಾಯಕ “ಮಾರಾಟದ ವಸ್ತು”ವಾಗಿ ಮಾರ್ಪಟ್ಟಿದೆ. ಅಂತಹ ಉದ್ಯಮಿಗಳ ಹಿತ ಕಾಯಲು ಹೋಗಿ, ನಮ್ಮ ನಾಡಿನ ಸಂಸ್ಕೃತಿಯನ್ನು ಬಲಿ ಕೊಡುತ್ತಿರುವ ಸಚಿವರು ಕನ್ನಡಕ್ಕೆ ದೊಡ್ಡ ಆಪತ್ತಾಗಿ ಪರಿಣಮಿಸಿದ್ದಾರೆ. ಶಿಕ್ಷಣದ ವ್ಯಾಪಾರೀಕರಣ ಮತ್ತು ಕನ್ನಡದ ಅಸ್ತಿತ್ವ ಪ್ರತಿ ಮಗುವಿನ ಮೂಲಭೂತ ಹಕ್ಕಾಗಬೇಕಿದ್ದ ಶಿಕ್ಷಣವನ್ನು ಇಂದು ದಂಧೆಯನ್ನಾಗಿ ಮಾಡಿಕೊಂಡಿರುವ ಶಿಕ್ಷಣ ಮಾಫಿಯಾದ ಹಿತ ಕಾಯಲು ಸರ್ಕಾರ ನಿಂತಂತಿದೆ.
    ಖಾಸಗಿ ಕಾಲೇಜುಗಳಲ್ಲಿ ಕನ್ನಡಕ್ಕೆ ಬೆಲೆ ಇಲ್ಲದಂತೆ ಮಾಡಿ, ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರುವ ಮೂಲಕ ನಮ್ಮ ಮಣ್ಣಿನ ಬೇರುಗಳನ್ನು ಕಿತ್ತುಹಾಕುವ ಸಂಚು ಇದರ ಹಿಂದೆ ಅಡಗಿದೆ.
    ಉನ್ನತ ಸ್ಥಾನಕ್ಕೆ ಇವರು ಅರ್ಹರೇ?
    ಕನ್ನಡ ವಿರೋಧಿ ಧೋರಣೆ ಹೊಂದಿರುವ ವ್ಯಕ್ತಿ ಉನ್ನತ ಶಿಕ್ಷಣ ಮಂತ್ರಿಯಾಗಿ ಮುಂದುವರಿಯುವುದು ಕರ್ನಾಟಕಕ್ಕೆ ಮಾಡುವ ಅಪಮಾನ. ಸಚಿವರ ಈ ನಿಲುವು ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲಾಗಿದೆ.
    ಗೊತ್ತಿಲ್ಲದಿದ್ದರೆ ತಿಳಿದುಕೊಳ್ಳಲಿ
    ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ಮತ್ತು ನಿರ್ಬಂಧಿಸುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು.
    ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನ ನಡೆದರೆ ಕನ್ನಡಿಗರು ಸುಮ್ಮನಿರಲಾರರು.
    ಮೂಲಭೂತ ಹಕ್ಕಾದ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವುದನ್ನು ನಿಲ್ಲಿಸಿ, ಕನ್ನಡದ ಅಸ್ತಿತ್ವ ಕಾಪಾಡಲು ಮುಂದಾಗಬೇಕು.
    ಕನ್ನಡ ಎಂದರೆ ಬರಿ ಭಾಷೆಯಲ್ಲ, ಅದು ನಮ್ಮ ಉಸಿರು. ಆ ಉಸಿರನ್ನೇ ಕಟ್ಟುವ ಕೆಲಸಕ್ಕೆ ಕೈ ಹಾಕಿದರೆ ಕನ್ನಡಿಗರ ಆಕ್ರೋಶದ ಮುನಿಸಿಗೆ ಸಚಿವರು ಉತ್ತರಿಸಬೇಕಾಗುತ್ತದೆ.
    ಕನ್ನಡವೇ ಸತ್ಯ, ಕನ್ನಡವೇ ನಿತ್ಯ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಮೋದಿ ವಿಡಿಯೋ ಡಿಲೀಟ್ ವಿವಾದ: ಭಾರತಕ್ಕೆ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್!
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…