📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?

ಕರ್ನಾಟಕದ ಮಣ್ಣಿನಲ್ಲಿ ನಿಂತು, ಕನ್ನಡದ ಅನ್ನ ಉಣ್ಣುತ್ತಾ, ಕನ್ನಡದ ಗಾಳಿಯನ್ನು ಉಸಿರಾಡುತ್ತಾ, ಕರ್ನಾಟಕದ ಮಂತ್ರಿಯಾಗಿ ಮೆರೆಯುತ್ತಾ, ಅಧಿಕಾರದ ಕುರ್ಚಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು “ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಮಾತನಾಡಬೇಡಿ” ಎನ್ನುತ್ತಾರೆ ಎಂದರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಈ ಇತ್ತೀಚಿನ ಹೇಳಿಕೆ ಕೇವಲ ಒಂದು ಸೂಚನೆಯಲ್ಲ, ಇದು ಆರು ಕೋಟಿ ಕನ್ನಡಿಗರ ಅಸ್ಮಿತೆಗೆ ಬಗೆದ ದ್ರೋಹ.
ಇವರು ಯಾರ ಪ್ರತಿನಿಧಿ?
ಸಚಿವರ ಈ ಹೇಳಿಕೆಯನ್ನು ಕೇಳಿದರೆ ಒಂದು ಅನುಮಾನ ಕಾಡುತ್ತದೆ—”ಇವರು ಕರ್ನಾಟಕದ ಮಂತ್ರಿಯೋ, ಅಥವಾ ವಿದೇಶದ ಯಾವುದೋ ಜನಪ್ರತಿನಿಧಿಯೋ ಅಥವಾ ರಾಜ್ಯಪಾಲನೋ? ಕರ್ನಾಟಕದ ನೆಲದಲ್ಲಿ ಕನ್ನಡ ಬೇಡ ಎನ್ನುವ ಇವರಿಗೆ ಇಲ್ಲಿನ ಭಾಷೆ, ಸೊಗಡು ಮತ್ತು ಸಂಸ್ಕೃತಿಯ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತಿದೆ. ಬ್ರಿಟಿಷರು ಹೋದರೂ ಇವರಂತಹವರಲ್ಲಿ ಇನ್ನೂ ಆ ‘ಗುಲಾಮಿ ಮಾನಸಿಕತೆ’ ಜೀವಂತವಾಗಿದೆ ಎಂಬುದು ಈ ಹೇಳಿಕೆಯಿಂದ ಸಾಬೀತಾಗಿದೆ.
ಕನ್ನಡ ಇಲ್ಲದಿದ್ದರೆ ಕರ್ನಾಟಕ ರಾಜ್ಯವೇಕೆ?
ಸಚಿವರಿಗೆ ಒಂದು ನೇರ ಪ್ರಶ್ನೆ “ಈ ನೆಲದಲ್ಲಿ ಕನ್ನಡವೇ ಇಲ್ಲ ಎಂದಮೇಲೆ ಕರ್ನಾಟಕ ಎಂಬ ರಾಜ್ಯವೇಕೆ ಇರಬೇಕು?” ಭಾಷೆಯ ಆಧಾರದ ಮೇಲೆ ಪ್ರಾಂತ್ಯಗಳು ವಿಂಗಡಣೆಯಾದ ಇತಿಹಾಸ ಸಚಿವರಿಗೆ ತಿಳಿದಿಲ್ಲವೇ? ಈ ರಾಜ್ಯದ ಅಸ್ತಿತ್ವವೇ ಕನ್ನಡದ ಮೇಲಿದೆ. ಅಂತಹದರಲ್ಲಿ ಶಿಕ್ಷಣ ಸಂಸ್ಥೆಗಳಿಂದ ಕನ್ನಡವನ್ನು ಹೊರದಬ್ಬುವುದು ಎಂದರೆ ಕರ್ನಾಟಕದ ಆತ್ಮವನ್ನೇ ಕೊಂದಂತೆ ಆಗುವುದಿಲ್ಲವೇ?
ಯಾರ ಖುಷಿಗಾಗಿ ಈ ಹೇಳಿಕೆ?
ಸಚಿವರು ಈ ಉದ್ಧಟತನದ ಹೇಳಿಕೆಯನ್ನು ಯಾರ ಪ್ರೀತಿ ಗಳಿಸಲು ನೀಡಿದ್ದಾರೆ? ಬಂಡವಾಳಶಾಹಿಗಳ ಲಾಭಕ್ಕಾಗಿ ಅಥವಾ ಪರಭಾಷಿಕ ಉದ್ಯಮಿಗಳ ಮೆಚ್ಚುಗೆ ಗಳಿಸುವುದಕ್ಕಾಗಿಯೇ? ಶಿಕ್ಷಣ ಇಂದು ಉದ್ಯಮಿಗಳ ಪಾಲಿಗೆ ಲಾಭದಾಯಕ “ಮಾರಾಟದ ವಸ್ತು”ವಾಗಿ ಮಾರ್ಪಟ್ಟಿದೆ. ಅಂತಹ ಉದ್ಯಮಿಗಳ ಹಿತ ಕಾಯಲು ಹೋಗಿ, ನಮ್ಮ ನಾಡಿನ ಸಂಸ್ಕೃತಿಯನ್ನು ಬಲಿ ಕೊಡುತ್ತಿರುವ ಸಚಿವರು ಕನ್ನಡಕ್ಕೆ ದೊಡ್ಡ ಆಪತ್ತಾಗಿ ಪರಿಣಮಿಸಿದ್ದಾರೆ. ಶಿಕ್ಷಣದ ವ್ಯಾಪಾರೀಕರಣ ಮತ್ತು ಕನ್ನಡದ ಅಸ್ತಿತ್ವ ಪ್ರತಿ ಮಗುವಿನ ಮೂಲಭೂತ ಹಕ್ಕಾಗಬೇಕಿದ್ದ ಶಿಕ್ಷಣವನ್ನು ಇಂದು ದಂಧೆಯನ್ನಾಗಿ ಮಾಡಿಕೊಂಡಿರುವ ಶಿಕ್ಷಣ ಮಾಫಿಯಾದ ಹಿತ ಕಾಯಲು ಸರ್ಕಾರ ನಿಂತಂತಿದೆ.
ಖಾಸಗಿ ಕಾಲೇಜುಗಳಲ್ಲಿ ಕನ್ನಡಕ್ಕೆ ಬೆಲೆ ಇಲ್ಲದಂತೆ ಮಾಡಿ, ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರುವ ಮೂಲಕ ನಮ್ಮ ಮಣ್ಣಿನ ಬೇರುಗಳನ್ನು ಕಿತ್ತುಹಾಕುವ ಸಂಚು ಇದರ ಹಿಂದೆ ಅಡಗಿದೆ.
ಉನ್ನತ ಸ್ಥಾನಕ್ಕೆ ಇವರು ಅರ್ಹರೇ?
ಕನ್ನಡ ವಿರೋಧಿ ಧೋರಣೆ ಹೊಂದಿರುವ ವ್ಯಕ್ತಿ ಉನ್ನತ ಶಿಕ್ಷಣ ಮಂತ್ರಿಯಾಗಿ ಮುಂದುವರಿಯುವುದು ಕರ್ನಾಟಕಕ್ಕೆ ಮಾಡುವ ಅಪಮಾನ. ಸಚಿವರ ಈ ನಿಲುವು ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲಾಗಿದೆ.
ಗೊತ್ತಿಲ್ಲದಿದ್ದರೆ ತಿಳಿದುಕೊಳ್ಳಲಿ
ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ಮತ್ತು ನಿರ್ಬಂಧಿಸುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು.
ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನ ನಡೆದರೆ ಕನ್ನಡಿಗರು ಸುಮ್ಮನಿರಲಾರರು.
ಮೂಲಭೂತ ಹಕ್ಕಾದ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವುದನ್ನು ನಿಲ್ಲಿಸಿ, ಕನ್ನಡದ ಅಸ್ತಿತ್ವ ಕಾಪಾಡಲು ಮುಂದಾಗಬೇಕು.
ಕನ್ನಡ ಎಂದರೆ ಬರಿ ಭಾಷೆಯಲ್ಲ, ಅದು ನಮ್ಮ ಉಸಿರು. ಆ ಉಸಿರನ್ನೇ ಕಟ್ಟುವ ಕೆಲಸಕ್ಕೆ ಕೈ ಹಾಕಿದರೆ ಕನ್ನಡಿಗರ ಆಕ್ರೋಶದ ಮುನಿಸಿಗೆ ಸಚಿವರು ಉತ್ತರಿಸಬೇಕಾಗುತ್ತದೆ.
ಕನ್ನಡವೇ ಸತ್ಯ, ಕನ್ನಡವೇ ನಿತ್ಯ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
“ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!