📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?

ಕರ್ನಾಟಕದ ಮಣ್ಣಿನಲ್ಲಿ ನಿಂತು, ಕನ್ನಡದ ಅನ್ನ ಉಣ್ಣುತ್ತಾ, ಕನ್ನಡದ ಗಾಳಿಯನ್ನು ಉಸಿರಾಡುತ್ತಾ, ಕರ್ನಾಟಕದ ಮಂತ್ರಿಯಾಗಿ ಮೆರೆಯುತ್ತಾ, ಅಧಿಕಾರದ ಕುರ್ಚಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು “ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಮಾತನಾಡಬೇಡಿ” ಎನ್ನುತ್ತಾರೆ ಎಂದರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಈ ಇತ್ತೀಚಿನ ಹೇಳಿಕೆ ಕೇವಲ ಒಂದು ಸೂಚನೆಯಲ್ಲ, ಇದು ಆರು ಕೋಟಿ ಕನ್ನಡಿಗರ ಅಸ್ಮಿತೆಗೆ ಬಗೆದ ದ್ರೋಹ.
ಇವರು ಯಾರ ಪ್ರತಿನಿಧಿ?
ಸಚಿವರ ಈ ಹೇಳಿಕೆಯನ್ನು ಕೇಳಿದರೆ ಒಂದು ಅನುಮಾನ ಕಾಡುತ್ತದೆ—”ಇವರು ಕರ್ನಾಟಕದ ಮಂತ್ರಿಯೋ, ಅಥವಾ ವಿದೇಶದ ಯಾವುದೋ ಜನಪ್ರತಿನಿಧಿಯೋ ಅಥವಾ ರಾಜ್ಯಪಾಲನೋ? ಕರ್ನಾಟಕದ ನೆಲದಲ್ಲಿ ಕನ್ನಡ ಬೇಡ ಎನ್ನುವ ಇವರಿಗೆ ಇಲ್ಲಿನ ಭಾಷೆ, ಸೊಗಡು ಮತ್ತು ಸಂಸ್ಕೃತಿಯ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತಿದೆ. ಬ್ರಿಟಿಷರು ಹೋದರೂ ಇವರಂತಹವರಲ್ಲಿ ಇನ್ನೂ ಆ ‘ಗುಲಾಮಿ ಮಾನಸಿಕತೆ’ ಜೀವಂತವಾಗಿದೆ ಎಂಬುದು ಈ ಹೇಳಿಕೆಯಿಂದ ಸಾಬೀತಾಗಿದೆ.
ಕನ್ನಡ ಇಲ್ಲದಿದ್ದರೆ ಕರ್ನಾಟಕ ರಾಜ್ಯವೇಕೆ?
ಸಚಿವರಿಗೆ ಒಂದು ನೇರ ಪ್ರಶ್ನೆ “ಈ ನೆಲದಲ್ಲಿ ಕನ್ನಡವೇ ಇಲ್ಲ ಎಂದಮೇಲೆ ಕರ್ನಾಟಕ ಎಂಬ ರಾಜ್ಯವೇಕೆ ಇರಬೇಕು?” ಭಾಷೆಯ ಆಧಾರದ ಮೇಲೆ ಪ್ರಾಂತ್ಯಗಳು ವಿಂಗಡಣೆಯಾದ ಇತಿಹಾಸ ಸಚಿವರಿಗೆ ತಿಳಿದಿಲ್ಲವೇ? ಈ ರಾಜ್ಯದ ಅಸ್ತಿತ್ವವೇ ಕನ್ನಡದ ಮೇಲಿದೆ. ಅಂತಹದರಲ್ಲಿ ಶಿಕ್ಷಣ ಸಂಸ್ಥೆಗಳಿಂದ ಕನ್ನಡವನ್ನು ಹೊರದಬ್ಬುವುದು ಎಂದರೆ ಕರ್ನಾಟಕದ ಆತ್ಮವನ್ನೇ ಕೊಂದಂತೆ ಆಗುವುದಿಲ್ಲವೇ?
ಯಾರ ಖುಷಿಗಾಗಿ ಈ ಹೇಳಿಕೆ?
ಸಚಿವರು ಈ ಉದ್ಧಟತನದ ಹೇಳಿಕೆಯನ್ನು ಯಾರ ಪ್ರೀತಿ ಗಳಿಸಲು ನೀಡಿದ್ದಾರೆ? ಬಂಡವಾಳಶಾಹಿಗಳ ಲಾಭಕ್ಕಾಗಿ ಅಥವಾ ಪರಭಾಷಿಕ ಉದ್ಯಮಿಗಳ ಮೆಚ್ಚುಗೆ ಗಳಿಸುವುದಕ್ಕಾಗಿಯೇ? ಶಿಕ್ಷಣ ಇಂದು ಉದ್ಯಮಿಗಳ ಪಾಲಿಗೆ ಲಾಭದಾಯಕ “ಮಾರಾಟದ ವಸ್ತು”ವಾಗಿ ಮಾರ್ಪಟ್ಟಿದೆ. ಅಂತಹ ಉದ್ಯಮಿಗಳ ಹಿತ ಕಾಯಲು ಹೋಗಿ, ನಮ್ಮ ನಾಡಿನ ಸಂಸ್ಕೃತಿಯನ್ನು ಬಲಿ ಕೊಡುತ್ತಿರುವ ಸಚಿವರು ಕನ್ನಡಕ್ಕೆ ದೊಡ್ಡ ಆಪತ್ತಾಗಿ ಪರಿಣಮಿಸಿದ್ದಾರೆ. ಶಿಕ್ಷಣದ ವ್ಯಾಪಾರೀಕರಣ ಮತ್ತು ಕನ್ನಡದ ಅಸ್ತಿತ್ವ ಪ್ರತಿ ಮಗುವಿನ ಮೂಲಭೂತ ಹಕ್ಕಾಗಬೇಕಿದ್ದ ಶಿಕ್ಷಣವನ್ನು ಇಂದು ದಂಧೆಯನ್ನಾಗಿ ಮಾಡಿಕೊಂಡಿರುವ ಶಿಕ್ಷಣ ಮಾಫಿಯಾದ ಹಿತ ಕಾಯಲು ಸರ್ಕಾರ ನಿಂತಂತಿದೆ.
ಖಾಸಗಿ ಕಾಲೇಜುಗಳಲ್ಲಿ ಕನ್ನಡಕ್ಕೆ ಬೆಲೆ ಇಲ್ಲದಂತೆ ಮಾಡಿ, ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರುವ ಮೂಲಕ ನಮ್ಮ ಮಣ್ಣಿನ ಬೇರುಗಳನ್ನು ಕಿತ್ತುಹಾಕುವ ಸಂಚು ಇದರ ಹಿಂದೆ ಅಡಗಿದೆ.
ಉನ್ನತ ಸ್ಥಾನಕ್ಕೆ ಇವರು ಅರ್ಹರೇ?
ಕನ್ನಡ ವಿರೋಧಿ ಧೋರಣೆ ಹೊಂದಿರುವ ವ್ಯಕ್ತಿ ಉನ್ನತ ಶಿಕ್ಷಣ ಮಂತ್ರಿಯಾಗಿ ಮುಂದುವರಿಯುವುದು ಕರ್ನಾಟಕಕ್ಕೆ ಮಾಡುವ ಅಪಮಾನ. ಸಚಿವರ ಈ ನಿಲುವು ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲಾಗಿದೆ.
ಗೊತ್ತಿಲ್ಲದಿದ್ದರೆ ತಿಳಿದುಕೊಳ್ಳಲಿ
ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ಮತ್ತು ನಿರ್ಬಂಧಿಸುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು.
ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನ ನಡೆದರೆ ಕನ್ನಡಿಗರು ಸುಮ್ಮನಿರಲಾರರು.
ಮೂಲಭೂತ ಹಕ್ಕಾದ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವುದನ್ನು ನಿಲ್ಲಿಸಿ, ಕನ್ನಡದ ಅಸ್ತಿತ್ವ ಕಾಪಾಡಲು ಮುಂದಾಗಬೇಕು.
ಕನ್ನಡ ಎಂದರೆ ಬರಿ ಭಾಷೆಯಲ್ಲ, ಅದು ನಮ್ಮ ಉಸಿರು. ಆ ಉಸಿರನ್ನೇ ಕಟ್ಟುವ ಕೆಲಸಕ್ಕೆ ಕೈ ಹಾಕಿದರೆ ಕನ್ನಡಿಗರ ಆಕ್ರೋಶದ ಮುನಿಸಿಗೆ ಸಚಿವರು ಉತ್ತರಿಸಬೇಕಾಗುತ್ತದೆ.
ಕನ್ನಡವೇ ಸತ್ಯ, ಕನ್ನಡವೇ ನಿತ್ಯ

COMMENTS

Login with Gmail to comment

ಇನ್ನಷ್ಟು ಸುದ್ದಿ

ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ