📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?

ಕರ್ನಾಟಕದ ಮಣ್ಣಿನಲ್ಲಿ ನಿಂತು, ಕನ್ನಡದ ಅನ್ನ ಉಣ್ಣುತ್ತಾ, ಕನ್ನಡದ ಗಾಳಿಯನ್ನು ಉಸಿರಾಡುತ್ತಾ, ಕರ್ನಾಟಕದ ಮಂತ್ರಿಯಾಗಿ ಮೆರೆಯುತ್ತಾ, ಅಧಿಕಾರದ ಕುರ್ಚಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು “ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಮಾತನಾಡಬೇಡಿ” ಎನ್ನುತ್ತಾರೆ ಎಂದರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಈ ಇತ್ತೀಚಿನ ಹೇಳಿಕೆ ಕೇವಲ ಒಂದು ಸೂಚನೆಯಲ್ಲ, ಇದು ಆರು ಕೋಟಿ ಕನ್ನಡಿಗರ ಅಸ್ಮಿತೆಗೆ ಬಗೆದ ದ್ರೋಹ.
ಇವರು ಯಾರ ಪ್ರತಿನಿಧಿ?
ಸಚಿವರ ಈ ಹೇಳಿಕೆಯನ್ನು ಕೇಳಿದರೆ ಒಂದು ಅನುಮಾನ ಕಾಡುತ್ತದೆ—”ಇವರು ಕರ್ನಾಟಕದ ಮಂತ್ರಿಯೋ, ಅಥವಾ ವಿದೇಶದ ಯಾವುದೋ ಜನಪ್ರತಿನಿಧಿಯೋ ಅಥವಾ ರಾಜ್ಯಪಾಲನೋ? ಕರ್ನಾಟಕದ ನೆಲದಲ್ಲಿ ಕನ್ನಡ ಬೇಡ ಎನ್ನುವ ಇವರಿಗೆ ಇಲ್ಲಿನ ಭಾಷೆ, ಸೊಗಡು ಮತ್ತು ಸಂಸ್ಕೃತಿಯ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತಿದೆ. ಬ್ರಿಟಿಷರು ಹೋದರೂ ಇವರಂತಹವರಲ್ಲಿ ಇನ್ನೂ ಆ ‘ಗುಲಾಮಿ ಮಾನಸಿಕತೆ’ ಜೀವಂತವಾಗಿದೆ ಎಂಬುದು ಈ ಹೇಳಿಕೆಯಿಂದ ಸಾಬೀತಾಗಿದೆ.
ಕನ್ನಡ ಇಲ್ಲದಿದ್ದರೆ ಕರ್ನಾಟಕ ರಾಜ್ಯವೇಕೆ?
ಸಚಿವರಿಗೆ ಒಂದು ನೇರ ಪ್ರಶ್ನೆ “ಈ ನೆಲದಲ್ಲಿ ಕನ್ನಡವೇ ಇಲ್ಲ ಎಂದಮೇಲೆ ಕರ್ನಾಟಕ ಎಂಬ ರಾಜ್ಯವೇಕೆ ಇರಬೇಕು?” ಭಾಷೆಯ ಆಧಾರದ ಮೇಲೆ ಪ್ರಾಂತ್ಯಗಳು ವಿಂಗಡಣೆಯಾದ ಇತಿಹಾಸ ಸಚಿವರಿಗೆ ತಿಳಿದಿಲ್ಲವೇ? ಈ ರಾಜ್ಯದ ಅಸ್ತಿತ್ವವೇ ಕನ್ನಡದ ಮೇಲಿದೆ. ಅಂತಹದರಲ್ಲಿ ಶಿಕ್ಷಣ ಸಂಸ್ಥೆಗಳಿಂದ ಕನ್ನಡವನ್ನು ಹೊರದಬ್ಬುವುದು ಎಂದರೆ ಕರ್ನಾಟಕದ ಆತ್ಮವನ್ನೇ ಕೊಂದಂತೆ ಆಗುವುದಿಲ್ಲವೇ?
ಯಾರ ಖುಷಿಗಾಗಿ ಈ ಹೇಳಿಕೆ?
ಸಚಿವರು ಈ ಉದ್ಧಟತನದ ಹೇಳಿಕೆಯನ್ನು ಯಾರ ಪ್ರೀತಿ ಗಳಿಸಲು ನೀಡಿದ್ದಾರೆ? ಬಂಡವಾಳಶಾಹಿಗಳ ಲಾಭಕ್ಕಾಗಿ ಅಥವಾ ಪರಭಾಷಿಕ ಉದ್ಯಮಿಗಳ ಮೆಚ್ಚುಗೆ ಗಳಿಸುವುದಕ್ಕಾಗಿಯೇ? ಶಿಕ್ಷಣ ಇಂದು ಉದ್ಯಮಿಗಳ ಪಾಲಿಗೆ ಲಾಭದಾಯಕ “ಮಾರಾಟದ ವಸ್ತು”ವಾಗಿ ಮಾರ್ಪಟ್ಟಿದೆ. ಅಂತಹ ಉದ್ಯಮಿಗಳ ಹಿತ ಕಾಯಲು ಹೋಗಿ, ನಮ್ಮ ನಾಡಿನ ಸಂಸ್ಕೃತಿಯನ್ನು ಬಲಿ ಕೊಡುತ್ತಿರುವ ಸಚಿವರು ಕನ್ನಡಕ್ಕೆ ದೊಡ್ಡ ಆಪತ್ತಾಗಿ ಪರಿಣಮಿಸಿದ್ದಾರೆ. ಶಿಕ್ಷಣದ ವ್ಯಾಪಾರೀಕರಣ ಮತ್ತು ಕನ್ನಡದ ಅಸ್ತಿತ್ವ ಪ್ರತಿ ಮಗುವಿನ ಮೂಲಭೂತ ಹಕ್ಕಾಗಬೇಕಿದ್ದ ಶಿಕ್ಷಣವನ್ನು ಇಂದು ದಂಧೆಯನ್ನಾಗಿ ಮಾಡಿಕೊಂಡಿರುವ ಶಿಕ್ಷಣ ಮಾಫಿಯಾದ ಹಿತ ಕಾಯಲು ಸರ್ಕಾರ ನಿಂತಂತಿದೆ.
ಖಾಸಗಿ ಕಾಲೇಜುಗಳಲ್ಲಿ ಕನ್ನಡಕ್ಕೆ ಬೆಲೆ ಇಲ್ಲದಂತೆ ಮಾಡಿ, ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರುವ ಮೂಲಕ ನಮ್ಮ ಮಣ್ಣಿನ ಬೇರುಗಳನ್ನು ಕಿತ್ತುಹಾಕುವ ಸಂಚು ಇದರ ಹಿಂದೆ ಅಡಗಿದೆ.
ಉನ್ನತ ಸ್ಥಾನಕ್ಕೆ ಇವರು ಅರ್ಹರೇ?
ಕನ್ನಡ ವಿರೋಧಿ ಧೋರಣೆ ಹೊಂದಿರುವ ವ್ಯಕ್ತಿ ಉನ್ನತ ಶಿಕ್ಷಣ ಮಂತ್ರಿಯಾಗಿ ಮುಂದುವರಿಯುವುದು ಕರ್ನಾಟಕಕ್ಕೆ ಮಾಡುವ ಅಪಮಾನ. ಸಚಿವರ ಈ ನಿಲುವು ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲಾಗಿದೆ.
ಗೊತ್ತಿಲ್ಲದಿದ್ದರೆ ತಿಳಿದುಕೊಳ್ಳಲಿ
ಕನ್ನಡ ಭಾಷೆಯನ್ನು ಕೀಳಾಗಿ ಕಾಣುವ ಮತ್ತು ನಿರ್ಬಂಧಿಸುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು.
ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನ ನಡೆದರೆ ಕನ್ನಡಿಗರು ಸುಮ್ಮನಿರಲಾರರು.
ಮೂಲಭೂತ ಹಕ್ಕಾದ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವುದನ್ನು ನಿಲ್ಲಿಸಿ, ಕನ್ನಡದ ಅಸ್ತಿತ್ವ ಕಾಪಾಡಲು ಮುಂದಾಗಬೇಕು.
ಕನ್ನಡ ಎಂದರೆ ಬರಿ ಭಾಷೆಯಲ್ಲ, ಅದು ನಮ್ಮ ಉಸಿರು. ಆ ಉಸಿರನ್ನೇ ಕಟ್ಟುವ ಕೆಲಸಕ್ಕೆ ಕೈ ಹಾಕಿದರೆ ಕನ್ನಡಿಗರ ಆಕ್ರೋಶದ ಮುನಿಸಿಗೆ ಸಚಿವರು ಉತ್ತರಿಸಬೇಕಾಗುತ್ತದೆ.
ಕನ್ನಡವೇ ಸತ್ಯ, ಕನ್ನಡವೇ ನಿತ್ಯ

COMMENTS

Login with Gmail to comment

ಇನ್ನಷ್ಟು ಸುದ್ದಿ

ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.