📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!

ಕರಾವಳಿ ಜಿಲ್ಲೆಯಲ್ಲಿ ಸೈಬರ್ ವಂಚಕರು ಹೊಸಹೊಸ ತಂತ್ರಗಳನ್ನು ಬಳಸಿ ಸಾರ್ವಜನಿಕರನ್ನು ವಂಚಿಸುತ್ತಿರುವ ಘಟನೆಗಳು ಮುಂದುವರಿದಿವೆ. ಮುಲ್ಕಿ, ಮಂಗಳೂರು ಉತ್ತರ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ₹12 ಲಕ್ಷಕ್ಕೂ ಅಧಿಕ ಹಣವನ್ನು ವಂಚಕರು ದೋಚಿರುವುದು ಬೆಳಕಿಗೆ ಬಂದಿದೆ. ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಪ್‌ಗ್ರೇಡ್, ಆನ್‌ಲೈನ್ ಟ್ರೇಡಿಂಗ್ ಲಾಭ ಹಾಗೂ ಪಾರ್ಟ್‌ಟೈಮ್ ಉದ್ಯೋಗದ ಆಮಿಷಗಳನ್ನು ಬಳಸಿಕೊಂಡು ಈ ವಂಚನೆಗಳು ನಡೆದಿವೆ.

ಮೊದಲ ಪ್ರಕರಣ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಮುಂಬೈನಲ್ಲಿ ವಾಸವಾಗಿರುವ 45 ವರ್ಷದ ವ್ಯಕ್ತಿಯೊಬ್ಬರು ತಮ್ಮ ತಾಯಿ ಮನೆಗೆ ಬಂದಿದ್ದ ವೇಳೆ ಇಂಡಸ್ ಇಂಡ್ ಬ್ಯಾಂಕ್ ಪ್ರತಿನಿಧಿ ಎಂದು ಹೇಳಿಕೊಂಡ ವ್ಯಕ್ತಿಯಿಂದ ಕರೆ ಸ್ವೀಕರಿಸಿದ್ದಾರೆ. “ಜೀವಿತಾವಧಿಯ ಕ್ರೆಡಿಟ್ ಕಾರ್ಡ್ ಅಪ್‌ಗ್ರೇಡ್” ನೀಡುವುದಾಗಿ ಹೇಳಿ ವಾಟ್ಸಾಪ್ ಮೂಲಕ ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್ ತೆರೆಯುತ್ತಿದ್ದಂತೆ ಕ್ರೆಡಿಟ್ ಕಾರ್ಡ್ ವಿವರ ಹಾಗೂ OTP ನಮೂದಿಸಿದ ಬಳಿಕ ಹಂತ ಹಂತವಾಗಿ ಅವರ ಖಾತೆಯಿಂದ ₹3.05 ಲಕ್ಷ ಹಣ ಕಡಿತಗೊಂಡಿದೆ.

ಇನ್ನೊಂದು ಪ್ರಕರಣ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, 62 ವರ್ಷದ ವ್ಯಕ್ತಿಯೊಬ್ಬರು ವಾಟ್ಸಾಪ್ ಮೂಲಕ ಬಂದ ಟ್ರೇಡಿಂಗ್ ಹೂಡಿಕೆ ಸಂದೇಶಕ್ಕೆ ಬಲಿಯಾಗಿದ್ದಾರೆ. “Aarna Trading Group” ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಂಚಕರು ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭದ ಭರವಸೆ ನೀಡಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾರೆ. ಅದರಂತೆ ಅವರು ವಿವಿಧ ದಿನಗಳಲ್ಲಿ ಒಟ್ಟು ₹5 ಲಕ್ಷ ಹೂಡಿಕೆ ಮಾಡಿದ್ದು, ನಂತರ ಹಣ ವಾಪಸ್ ಪಡೆಯಲು ಯತ್ನಿಸಿದಾಗ ಕೇವಲ ₹1 ಲಕ್ಷ ಮಾತ್ರ ದೊರೆತಿದೆ. ಉಳಿದ ₹4 ಲಕ್ಷ ಹಣವನ್ನು ವಂಚಕರು ವಶಪಡಿಸಿಕೊಂಡು ವಾಟ್ಸಾಪ್ ಗ್ರೂಪ್ ಹಾಗೂ ಟ್ರೇಡಿಂಗ್ ಆಪ್ ಅನ್ನು ಬ್ಲಾಕ್ ಮಾಡಿದ್ದಾರೆ.

ಮೂರನೇ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, 44 ವರ್ಷದ ವ್ಯಕ್ತಿಗೆ “ಕ್ವಿಕ್ ಎಂಟರ್‌ಪ್ರೈಸಸ್” ಹೆಸರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗ ನೀಡುವುದಾಗಿ ಕರೆ ಮಾಡಲಾಗಿದೆ. ಮೊದಲಿಗೆ ₹1,000 ನೋಂದಣಿ ಶುಲ್ಕ ಪಡೆದು ಬಳಿಕ ಹೆಚ್ಚಿನ ಆದಾಯದ ಆಮಿಷ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಕೊನೆಗೆ ಯಾವುದೇ ಉದ್ಯೋಗ ನೀಡದೇ ಹಾಗೂ ಹೂಡಿಕೆ ಮಾಡಿದ ಹಣವನ್ನು ಮರಳಿ ನೀಡದೇ, ರಿಫಂಡ್ ಪಡೆಯಬೇಕಾದರೂ ಮತ್ತಷ್ಟು ಹಣ ಪಾವತಿಸಬೇಕೆಂದು ಒತ್ತಾಯಿಸಿ ಒಟ್ಟು ₹3.51 ಲಕ್ಷ ವಂಚಿಸಿದ್ದಾರೆ.

ಈ ಮೂರು ಪ್ರಕರಣಗಳು ಸೈಬರ್ ವಂಚಕರು ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಹೊಸ ರೀತಿಯ ಬಲೆಗೆ ಸೆಳೆಯುತ್ತಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿವೆ. ಬ್ಯಾಂಕ್ ಸೇವೆಗಳು, ಹೂಡಿಕೆ ಅವಕಾಶಗಳು ಅಥವಾ ಉದ್ಯೋಗದ ಆಮಿಷಗಳ ಹೆಸರಿನಲ್ಲಿ ಬರುವ ಅಪರಿಚಿತ ಕರೆಗಳು, ವಾಟ್ಸಾಪ್ ಲಿಂಕ್‌ಗಳು ಹಾಗೂ ಆನ್‌ಲೈನ್ ವ್ಯವಹಾರಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

##CyberCrime #OnlineFraud #KarnatakaPolice #WhatsAppScam #DigitalSafety

COMMENTS

Login with Gmail to comment

ಇನ್ನಷ್ಟು ಸುದ್ದಿ

ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..