📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು

ಕೇಂದ್ರ ಸರ್ಕಾರದ ದರ ಏರಿಕೆಯ ವಿರುದ್ಧ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಗೆ ಸಾರ್ವಜನಿಕರ ಸ್ಪಂದನೆ ದೊರಕದೆ ಇರುವಂತಹ, ಪ್ರಸಂಗವು ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕಂಡು ಬಂತು.

ಜನಸಾಮಾನ್ಯರು ಕಳೆದ ಕೆಲವು ಸಮಯದಿಂದ ವಿಪರಹಿತವಾಗುತ್ತಿರುವ ಬೆಲೆ ಏರಿಕೆಯಿಂದ ಜರ್ಜರಿತರಾಗುತ್ತಿದ್ದರೂ, ನೀಟ್ ಎಕ್ಸಾಮ್ ಪೇಪರ್ ಲೀಕ್ ಪರಿಣಾಮ ಮತ್ತೊಮ್ಮೆ ವಿದ್ಯಾರ್ಥಿಗಳು ಎಕ್ಸಾಮ್ ಬರೆಯುವಂತಹ ಪರಿಸ್ಥಿತಿಗೆ ಸಿಕ್ಕಿರುವುದು ಹಾಗೂ ಅದಕ್ಕಾಗಿ ಅವರ ಪೋಷಕರು ಖರ್ಚು ಮಾಡಬೇಕಾದಂತಹ ಸ್ಥಿತಿ ಉದ್ಭವವಾಗಿದ್ದರೂ, ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕೇಂದ್ರ ಸರ್ಕಾರದ ಆಡಳಿತ ನೀತಿಯ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಜೊತೆಗೆ ಯಾರು ಕೈಜೋಡಿಸಲಿಲ್ಲ ಅನ್ನೋದು ಸ್ಪಷ್ಟವಾಗಿ ಕಂಡುಬಂತು. ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಾರ್ವಜನಿಕರ ಬೆಂಬಲ ಕಂಡು ಬರಲಿಲ್ಲ ಅನ್ನುವುದೇ ಆಶ್ಚರ್ಯಕರ ವಿಚಾರ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ, ನಡೆದ ಈ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳ ಮುಖ ಮಾತ್ರ ಕಂಡುಬಂದವೆ ಹೊರತು,  ಅದೇ ಪಕ್ಷದ ಸಾಮಾನ್ಯ ಕಾರ್ಯಕರ್ತರ ಸಂಖ್ಯೆಯು ಗಣನೀಯ ಸಂಖ್ಯೆಯಲ್ಲಿ ಕಡಿಮೆ ಇತ್ತು. ಇನ್ನು ಸಾರ್ವಜನಿಕರ ಸಹಭಾಗಿತ್ವ ದೂರದ ಮಾತಾಗಿತ್ತು. ಸಾರ್ವಜನಿಕರ, ಪಕ್ಷದ ಕಾರ್ಯಕರ್ತರ ವಿಶ್ವಾಸ್ಸವನ್ನು ಗಳಿಸದೆ, ಪ್ರತಿಭಟನೆ ನಡೆಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ಪರಿಣಾಮವು ಬೀರುವುದಿಲ್ಲ ಇವತ್ತಿನ ದಿನ.

ಕಾಂಗ್ರೆಸ್ ಪಕ್ಷದ ಕಾಪುವಿನಲ್ಲಿ ನಡೆದ ಈ ಪ್ರತಿ ಭಟನೆಯನ್ನು ನೋಡಿದಾಗ, ಕಾಂಗ್ರೆಸ್ ದಿನದಿಂದ ದಿನಕ್ಕೂ ಕುಸಿಯುತ್ತಾ ಸಾಗುತ್ತಿದೆ ಅನ್ನುವುದನ್ನು ಅಂದಾಜಿಸಬಹುದಾಗಿದೆ. ಜನರ ವಿಶ್ವಾಸವನ್ನು ಗಳಿಸುವಲ್ಲಿ ಆ ಪಕ್ಷವು ಮತ್ತು ಅದರ ನಾಯಕರು ಪದೇ ಪದೇ ವಿಫಲವಾಗುತ್ತಿರುವುದರ ಪರಿಣಾಮವೇ ಅವರ ಪ್ರತಿಭಟನೆಗಳು ಕೇವಲ ಒಂದು ಕಾರ್ಯಕ್ರಮದಂತೆ ಜರಗಿ ಹೋಗುತ್ತದೆ ಹೊರತು ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬ ಮಾತು ಜಿಲ್ಲೆಯ ಜನರಿಂದ ಕೇಳಿ ಬರುತ್ತಿದೆ.

ಅದೇನೇ ಇರಲಿ, ಕಾಂಗ್ರೆಸ್ ಇನ್ನೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಅವನತಿಯತ್ತ ಸಾಗುವುದು ನಿಶ್ಚಿತ. ಜನರ ವಿಶ್ವಾಸ ಪಡೆಯುವಲ್ಲಿ ಹಿಂದೆ ಬಿದ್ದರೆ, ಕಾರ್ಯಕರ್ತರ ಅಳಲನ್ನು ಆಲಿಸದಿದ್ದರೆ, ತಳಮಟ್ಟದ ಸಂಘಟನೆಯನ್ನು ಬಲಗೊಳಿಸದಿದ್ದರೆ ಇನ್ನು ಕೆಲವೇ ವರ್ಷದಲ್ಲಿ ಈ ಪಕ್ಷದ ಜಾಗದಲ್ಲಿ ಇನ್ಯಾವುದೋ ಪಕ್ಷವು ಬಂದು ಬಲಗೊಳ್ಳುವ ಸಾಧ್ಯತೆ ಹೆಚ್ಚು ಎಂಬುದಕ್ಕೆ ಕಾಪುವಿನಲ್ಲಿ ನಡೆದ ಆ ಪ್ರತಿಭಟನೆಯು ಸಾಕ್ಷಿಯಾಗಿ ಕಾಣುತ್ತಿತ್ತು ಅನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!