📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ

    ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರನ್ನಾಗಿ ಸುವ ಆಮಿಷವಡ್ಡಿ ವ್ಯಕ್ತಿ ಒಬ್ಬ ಒಂದುವರೆ ಕೋಟಿ ಹಣವನ್ನು ಪ್ರೀತಿಸುತ್ತಿರುವ ಘಟನೆ ಇದೀಗ ಹೊರ ಬರುತ್ತಿದೆ. ಮೂಲತಹ ಮಂಗಳೂರಿನ ಮಹಿಳೆಯೊಬ್ಬರಿಗೆ ಟೋಪಿ ಬಿದ್ದಿದೆ ಎನ್ನಲಾಗಿದೆ.

    ಬೆಂಗಳೂರು: ”ನಿಮ್ಮನ್ನು ಕಾಂಗ್ರೆಸ್ ಪಕ್ಷದಿಂದ MLC ಮಾಡಿಸುತ್ತೇನೆ” ಎಂದು ನಂಬಿಸಿ ಮಂಗಳೂರು ಮೂಲದ ಸಮಾಜಸೇವಕಿ ಮಹಿಳೆಯಿಂದ ಸುಮಾರು 1 ಕೋಟಿ 50 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪದ ಮೇಲೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

    ಘಟನೆಯ ವಿವರ

    ಮಂಗಳೂರು ಮೂಲದ ಮಹಿಳೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಖಾಸಗಿ ಟ್ರಸ್ಟ್ ಮೂಲಕ ಕ್ಯಾನ್ಸರ್ ಮುಕ್ತ ಅಭಿಯಾನದಲ್ಲಿ ಭಾಗವಹಿಸುತ್ತಿದ್ದ ವೇಳೆ ಯರ್ರಿಸ್ವಾಮಿ ಎಂಬಾತನ ಪರಿಚಯವಾಗಿದೆ.

    ”ನೀವು ಇಷ್ಟು ಸಮಾಜಸೇವೆ ಮಾಡುತ್ತೀರಿ, ನೀವು ಯಾಕೆ MLC ಆಗಬಾರದು” ಎಂದು ಹೇಳಿ ನಂಬಿಸಿದ್ದ ಯರ್ರಿಸ್ವಾಮಿ, ತಾನು ಪ್ರಮುಖ ಕಾಂಗ್ರೆಸ್ ನಾಯಕರಿಗೆ ಮಾಧ್ಯಮ ಸಲಹೆಗಾರನಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆಲ್ಲ ತನಗೆ ಗೊತ್ತು ಎಂದು ಹೇಳಿಕೊಂಡಿದ್ದಾನೆ. ರಾಜ್ಯದ ಪ್ರಮುಖ ನಾಯಕರೊಂದಿಗಿನ ಫೋಟೋಗಳನ್ನು ತೋರಿಸಿ ನಂಬಿಸಿದ್ದಾನೆ.

    ಕೋಟಿ ಕೋಟಿ ಡಿಮ್ಯಾಂಡ್

    ಆರಂಭದಲ್ಲಿ 5 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದ ಆರೋಪಿ, ನಂತರ 1 ಕೋಟಿ 25 ಲಕ್ಷಕ್ಕೆ ಫೈನಲ್ ಮಾಡಿದ್ದಾನೆ. 2024ರ ಆಗಸ್ಟ್ ನಿಂದ 2025ರ ಜನವರಿವರೆಗೆ ಹಂತ ಹಂತವಾಗಿ ಒಟ್ಟು 1 ಕೋಟಿ 50 ಲಕ್ಷ ರೂಪಾಯಿ ಪಡೆದಿದ್ದಾನೆ.

    ತನ್ನ ಸಹಚರಾದ ಸಿದ್ದರಾಜು ಮತ್ತು ಬಸವರಾಜು ಅವರಿಗೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಶಿಕ್ಷಕರ ಸದನ ಮತ್ತು ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಹಣ ಕೊಡಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ದೆಹಲಿಯಲ್ಲಿ ಅಸಭ್ಯ ವರ್ತನೆ ಆರೋಪ

    MLC ಸೀಟ್ ಫೈನಲ್ ಮಾಡಿಸಲು ಎಂದು AICC ನಾಯಕರು ದೆಹಲಿಗೆ ಸಂದರ್ಶನಕ್ಕೆ ಕರೆದಿದ್ದಾರೆ ಎಂದು ಹೇಳಿ ಮಹಿಳೆಯನ್ನು ದೆಹಲಿಯ ಖಾಸಗಿ ಹೋಟೆಲ್‌ಗೆ ಕರೆದೊಯ್ದಿದ್ದಾನೆ.

    ಈ ವೇಳೆ ಮಹಿಳೆಯ ರೂಂ ಬಾಗಿಲು ಬಡಿದು ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಪ್ರತಿರೋಧ ತೋರಿ ರೂಂ ಲಾಕ್ ಮಾಡಿಕೊಂಡ ಮಹಿಳೆ ಬಳಿಕ ಹಣ ವಾಪಸ್ ಕೇಳಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.

    ಪೊಲೀಸ್ ದೂರು

    ಈ ಕುರಿತು ಸಂತ್ರಸ್ತ ಮಹಿಳೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಯರ್ರಿಸ್ವಾಮಿ, ಬಸವರಾಜು ಮತ್ತು ಸಿದ್ದರಾಜು ಎಂಬುವವರ ವಿರುದ್ಧ ವಂಚನೆ, ಬೆದರಿಕೆ ಮತ್ತು ಅಸಭ್ಯ ವರ್ತನೆ ಆರೋಪಗಳಡಿ FIR ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ

    ಪಕ್ಷದ ಹೇಳಿಕೆ

    ಈ ಬಗ್ಗೆ  ಸಾಮಾಜಿಕ ಮಾಧ್ಯಮದಲ್ಲಿ ವಿಷಯ ಪ್ರಸ್ತಾಪವಾಗಿದ್ದರು, ಕಾಂಗ್ರೆಸ್  ಪಕ್ಷದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ ಇಲ್ಲಿಯವರೆಗೆ.  ಬಲ್ಲ ಮೂಲಗಳ ಪ್ರಕಾರ “ಆರೋಪಿ ಪಕ್ಷದ ಯಾವುದೇ ಅಧಿಕೃತ ಹುದ್ದೆಯಲ್ಲಿ ಇಲ್ಲ. ಒಬ್ಬ ಮಹಾನ್ ವಂಚಕನಂತೆ ಕಾಣುತ್ತಾನೆ. ಯಾರೇ ಪಕ್ಷದ ಹೆಸರು ಬಳಸಿ ವಂಚನೆ ಮಾಡಿದರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಹೆಸರು ಹೇಳಲು ಇಚ್ಚಿಸದ ನಾಯಕನ ಕಡೆಯಿಂದ ವಿವರ ಬಂದಿದೆ ಅಷ್ಟೇ.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ