📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ

ಕಾರ್ಕಳ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ತಾಣವಾದ ಇನ್ಸ್ಟ್ರಾಗ್ರಾಂ  ಮೂಲಕ ಪರಿಚಯಿಸಿಕೊಂಡ ವ್ಯಕ್ತಿಯು, ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾನೆಂದು ಕರ್ಕಳ ಮೂಲದ ಗಣೇಶ್ ಆಚಾರ್ಯ ಎಂಬವರು  ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ದೂರುದಾರರ ವಿಚಾರವಾಗಿಯೂ ಶಂಕೆ ವ್ಯಕ್ತವಾಗುತ್ತಿದೆ.

ಗಣೇಶ ಆಚಾರ್ಯ ಎಂಬ ವ್ಯಕ್ತಿಯ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ವಿವಿಧ ಕಾರಣಗಳನ್ನು ನೀಡಿ 2024 ರಿಂದ 26ರ ಏಪ್ರಿಲ್ ವರೆಗೆ  ಹಂತಹಂತವಾಗಿ ಗಣೇಶ್ ಆಚಾರ್ಯರಿಂದ ಒಟ್ಟು  25 ಲಕ್ಷದ 66ಸಾವಿರ ರೂ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು, ವಾಪಾಸು ಕೊಡದೇ ಮೋಸ ಮಾಡಿದ್ದಾನೆ ಅನ್ನುವುದು ಅವರು ಕೊಟ್ಟ ದೂರಿನ ಸಾರಾಂಶ.

ಯಾರಾದರೂ ಸಾಮಾಜಿಕ ತಾಣದಲ್ಲಿ ಪರಿಚಿತರಾದವರಿಗೆ, ಇಷ್ಟು ದೊಡ್ಡ ಮೊತ್ತವನ್ನು ಸಾಲದ ರೂಪದಲ್ಲಿ ನೀಡುತ್ತಾರಾ? ಏನೇ ಸಹಾಯ, ಮಾನವೀಯ ದೃಷ್ಟಿ ಅಂತಂದ್ರೂ ಅದಕ್ಕೂ ಒಂದು ಮಿತಿ ಅಂತ ಇದೆ. ಎರಡು ವರ್ಷಗಳ ಕಾಲ ಕಾಲೇಜು ಫೀಸು, ಲ್ಯಾಪ್ಟಾಪ್ ರಿಪೇರಿ, ಕೃಷಿ ಸಾಲ ಕಟ್ಟಲು, ಆರೋಗ್ಯದ ಸಮಸ್ಯೆ ಇಂತಹ ಒಂದಲ್ಲ ಒಂದು ನೆಪಗಳ ಮೂಲಕ ದೂರುದಾರರಿಂದ  25 ಲಕ್ಷದಷ್ಟು ಹಣವನ್ನು ಪಡೆಡಿದ್ದಾನೆ ಎಂದರೆ, ಇದುಯಾರ ತಪ್ಪು? ಪಡೆದುಕೊಂಡವರ ತಪ್ಪೋ ಕೊಟ್ಟವರ ತಪ್ಪೋ?  ಕೊಟ್ಟವ ಕೊಡಂಗಿ ಇಸ್ಕೊಂಡವ ವೀರಭದ್ರ ಅಂತಾರಲ್ವಾ , ಇದು ಹಾಗೆ ತಾನೇ?

ಇಲ್ಲಿ ಬೇರೇನೋ ವ್ಯವಹಾರ ನಡೆದಿರುವ ಶಂಕೆ ಇದೆ. ಅದನ್ನು ಮುಚ್ಚಿಟ್ಟು ದೂರುದಾರರು ಈ ರೀತಿಯ ದೂರನ್ನು ಕೊಟ್ಟಿರಬಹುದು ಎಂಬ ಅನುಮಾನವೂ ಇದೆ. ಯಾಕಂದ್ರೆ, ಈ ರೀತಿಯಲ್ಲಿ ಎರಡು ವರ್ಷದಿಂದ ಅಪರಿಚಿತ ಅಂದರೆ ಸಾಮಾಜಿಕ ತಾಣಗಳ ಮೂಲಕ ಪರಿಚಯವಾದ ವ್ಯಕ್ತಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ನೀಡಲು ಹೇಗೆ ಸಾಧ್ಯ? ದೂರುದಾರರು ಸತ್ಯವನ್ನು ಮುಚ್ಚಿಟ್ಟು ಬೇರೆ ಆಂಗಲ್ ನಲ್ಲಿ ದೂರು ಕೊಟ್ಟಂತೆ ಕಾಣುತ್ತಿದೆ. ಅದೇನೇ ಆದರೂ, ತನಿಖೆಯ ನಂತರ ಸತ್ಯ ಹೊರಬರುತ್ತದೆ. 

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಬಾಲಗರ್ಭಿಣಿಯರ ಸಂಖ್ಯೆ 5975….!!
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ