📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ

ಕಾರ್ಕಳ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ತಾಣವಾದ ಇನ್ಸ್ಟ್ರಾಗ್ರಾಂ  ಮೂಲಕ ಪರಿಚಯಿಸಿಕೊಂಡ ವ್ಯಕ್ತಿಯು, ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾನೆಂದು ಕರ್ಕಳ ಮೂಲದ ಗಣೇಶ್ ಆಚಾರ್ಯ ಎಂಬವರು  ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ದೂರುದಾರರ ವಿಚಾರವಾಗಿಯೂ ಶಂಕೆ ವ್ಯಕ್ತವಾಗುತ್ತಿದೆ.

ಗಣೇಶ ಆಚಾರ್ಯ ಎಂಬ ವ್ಯಕ್ತಿಯ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ವಿವಿಧ ಕಾರಣಗಳನ್ನು ನೀಡಿ 2024 ರಿಂದ 26ರ ಏಪ್ರಿಲ್ ವರೆಗೆ  ಹಂತಹಂತವಾಗಿ ಗಣೇಶ್ ಆಚಾರ್ಯರಿಂದ ಒಟ್ಟು  25 ಲಕ್ಷದ 66ಸಾವಿರ ರೂ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು, ವಾಪಾಸು ಕೊಡದೇ ಮೋಸ ಮಾಡಿದ್ದಾನೆ ಅನ್ನುವುದು ಅವರು ಕೊಟ್ಟ ದೂರಿನ ಸಾರಾಂಶ.

ಯಾರಾದರೂ ಸಾಮಾಜಿಕ ತಾಣದಲ್ಲಿ ಪರಿಚಿತರಾದವರಿಗೆ, ಇಷ್ಟು ದೊಡ್ಡ ಮೊತ್ತವನ್ನು ಸಾಲದ ರೂಪದಲ್ಲಿ ನೀಡುತ್ತಾರಾ? ಏನೇ ಸಹಾಯ, ಮಾನವೀಯ ದೃಷ್ಟಿ ಅಂತಂದ್ರೂ ಅದಕ್ಕೂ ಒಂದು ಮಿತಿ ಅಂತ ಇದೆ. ಎರಡು ವರ್ಷಗಳ ಕಾಲ ಕಾಲೇಜು ಫೀಸು, ಲ್ಯಾಪ್ಟಾಪ್ ರಿಪೇರಿ, ಕೃಷಿ ಸಾಲ ಕಟ್ಟಲು, ಆರೋಗ್ಯದ ಸಮಸ್ಯೆ ಇಂತಹ ಒಂದಲ್ಲ ಒಂದು ನೆಪಗಳ ಮೂಲಕ ದೂರುದಾರರಿಂದ  25 ಲಕ್ಷದಷ್ಟು ಹಣವನ್ನು ಪಡೆಡಿದ್ದಾನೆ ಎಂದರೆ, ಇದುಯಾರ ತಪ್ಪು? ಪಡೆದುಕೊಂಡವರ ತಪ್ಪೋ ಕೊಟ್ಟವರ ತಪ್ಪೋ?  ಕೊಟ್ಟವ ಕೊಡಂಗಿ ಇಸ್ಕೊಂಡವ ವೀರಭದ್ರ ಅಂತಾರಲ್ವಾ , ಇದು ಹಾಗೆ ತಾನೇ?

ಇಲ್ಲಿ ಬೇರೇನೋ ವ್ಯವಹಾರ ನಡೆದಿರುವ ಶಂಕೆ ಇದೆ. ಅದನ್ನು ಮುಚ್ಚಿಟ್ಟು ದೂರುದಾರರು ಈ ರೀತಿಯ ದೂರನ್ನು ಕೊಟ್ಟಿರಬಹುದು ಎಂಬ ಅನುಮಾನವೂ ಇದೆ. ಯಾಕಂದ್ರೆ, ಈ ರೀತಿಯಲ್ಲಿ ಎರಡು ವರ್ಷದಿಂದ ಅಪರಿಚಿತ ಅಂದರೆ ಸಾಮಾಜಿಕ ತಾಣಗಳ ಮೂಲಕ ಪರಿಚಯವಾದ ವ್ಯಕ್ತಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ನೀಡಲು ಹೇಗೆ ಸಾಧ್ಯ? ದೂರುದಾರರು ಸತ್ಯವನ್ನು ಮುಚ್ಚಿಟ್ಟು ಬೇರೆ ಆಂಗಲ್ ನಲ್ಲಿ ದೂರು ಕೊಟ್ಟಂತೆ ಕಾಣುತ್ತಿದೆ. ಅದೇನೇ ಆದರೂ, ತನಿಖೆಯ ನಂತರ ಸತ್ಯ ಹೊರಬರುತ್ತದೆ. 

COMMENTS

Login with Gmail to comment

ಇನ್ನಷ್ಟು ಸುದ್ದಿ

ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು