📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?

    ಉಡುಪಿ/ಕುಂದಾಪುರ: ಜಾಗದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಉಂಟಾದ ತಕರಾರು ಕತ್ತಿ, ಹಾರೆ ಹಾಗೂ ದೊಣ್ಣೆಗಳಿಂದ ಹೊಡೆದಾಟದ ಮಟ್ಟಕ್ಕೆ ತಲುಪಿರುವ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಆಲೂರು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

    ಆಲೂರು ಗ್ರಾಮದ ಸರೋಜ ಹಾಗೂ ನೆರೆಮನೆಯ ವಸಂತ ಶೆಟ್ಟಿ ಕುಟುಂಬದ ನಡುವೆ ಕೃಷಿ ಭೂಮಿಯ ಗಡಿ ಹಾಗೂ ಜಾಗದ ವಿಚಾರವಾಗಿ ಬಹುಕಾಲದಿಂದ ವಿವಾದವಿದ್ದು, ಈ ಸಂಬಂಧ ಸಿವಿಲ್ ನ್ಯಾಯಾಲಯದಲ್ಲಿಯೂ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ. ಇದೇ ವಿವಾದಿತ ಜಾಗದ ಬೇಲಿಯನ್ನು ಸರಿಪಡಿಸುವ ವಿಚಾರದಲ್ಲಿ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ ಬಳಿಕ ಹೊಡೆದಾಟ ನಡೆದಿದೆ.

    ವಸಂತ ಶೆಟ್ಟಿ ನೀಡಿರುವ ದೂರಿನ ಪ್ರಕಾರ, ಸರ್ವೇ ನಂಬರ್ 26/5ರಲ್ಲಿರುವ 28 ಸೆಂಟ್ಸ್ ಜಾಗದಲ್ಲಿ ಕೃಷಿ ಮಾಡಿಕೊಂಡಿದ್ದು, ಹಳೆಯ ಬೇಲಿಯನ್ನು ಸರಿಪಡಿಸಲು ಪುತ್ರ ಅಕ್ಷಯ ಶೆಟ್ಟಿ ಜತೆ ತೆರಳಿದ್ದರು. ಈ ವೇಳೆ ಸರೋಜ ಹಾಗೂ ಮೂಕಾಂಬು ಬೇಲಿ ಸರಿಪಡಿಸುವುದನ್ನು ತಡೆದು ಅವಾಚ್ಯವಾಗಿ ನಿಂದಿಸಿ, ಕೈಯಲ್ಲಿದ್ದ ಹಾರೆ ಹಾಗೂ ಕತ್ತಿಯನ್ನು ಕಸಿದುಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸರೋಜ ಅವರು ಮರದ ಕೋಲಿನಿಂದ ತಮ್ಮ ತಲೆಗೆ ಹೊಡೆದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಘಟನೆಯಲ್ಲಿ ಅಕ್ಷಯ ಶೆಟ್ಟಿ ಅವರ ತಲೆಗೆ ಗಾಯವಾಗಿದ್ದು, ರಕ್ತಸ್ರಾವವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ವೈರಲ್ ವಿಡಿಯೋದಿಂದ ಎದ್ದಿರುವ ಪ್ರಶ್ನೆಗಳು

    ಇದೀಗ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿಡಿಯೋದಲ್ಲಿನ ದೃಶ್ಯಗಳ ಆಧಾರದಲ್ಲಿ ನೋಡಿದಾಗ, ವಸಂತ ಶೆಟ್ಟಿ ಹಾಗೂ ಅಕ್ಷಯ ಶೆಟ್ಟಿ ಅವರು ವಿವಾದಿತ ಬೇಲಿಯನ್ನು ತೆರವುಗೊಳಿಸಲು ಮುಂದಾಗಿರುವುದು ಹಾಗೂ ಅವರ ಕೈಯಲ್ಲಿ ಕತ್ತಿ ಮತ್ತು ಹಾರೆ ಇರುವ ದೃಶ್ಯಗಳು ಕಂಡುಬರುತ್ತವೆ ಎನ್ನಲಾಗುತ್ತಿದೆ.

    ಇದೇ ವೇಳೆ ಎದುರಿನವರು ಬೇಲಿ ತೆರವುಗೊಳಿಸುವುದನ್ನು ತಡೆಯಲು ಮುಂದಾಗಿರುವಂತೆ ದೃಶ್ಯಗಳು ಕಾಣಿಸುತ್ತವೆ. ಅಕ್ಷಯ್ ಹಾಗೂ ಅವರ ತಂದೆ ಕತ್ತಿ ಹಾಗೂ ಹಾರೆ ಹಿಡಿದು ಮುಂದೆ ಬರುತ್ತಿರುವ ಸಂದರ್ಭದಲ್ಲಿ ನಡೆದ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಅಕ್ಷಯ ಶೆಟ್ಟಿ ಮುನ್ನುಗ್ಗಿದಂತೆ ಹೋದಾಗ ಅವರ ತಲೆಗೆ ಗಾಯವಾಗಿರುವ ಸಾಧ್ಯತೆ ಇದೆ. ಲಭ್ಯ ವಿಡಿಯೋವನ್ನು ನೋಡಿದವರಲ್ಲಿ  ನಾನಾ ಚರ್ಚೆಗೆ ಕಾರಣವಾಗಿದೆ.

    ಆದರೆ, ವಿಡಿಯೋದಲ್ಲಿನ ದೃಶ್ಯಗಳ ಆಧಾರದ ಮೇಲೆ ಮಾತ್ರ ಘಟನೆಯ ಸಂಪೂರ್ಣ ಸತ್ಯಾಸತ್ಯತೆಯನ್ನು ನಿರ್ಧರಿಸಲು ಸಾಧ್ಯವಿಲ್ಲ ಅನ್ನುವುದು ನಿಜಾನೇ. ವಿಡಿಯೋಗಿಂತ ಮೊದಲು ಏನಾಗಿದದೇ, ಯಾರು ಮೊದಲು ಹಲ್ಲೆಗೆ ಮುಂದಾದರು ಮತ್ತು ಗಾಯ ಹೇಗೆ ಸಂಭವಿಸಿತು ಎಂಬುದನ್ನು ಪೊಲೀಸ್ ತನಿಖೆ ಹಾಗೂ ಲಭ್ಯವಿರುವ ಸಂಪೂರ್ಣ ವಿಡಿಯೋ ದೃಶ್ಯಗಳ ಪರಿಶೀಲನೆಯಿಂದಲೇ ಸ್ಪಷ್ಟಪಡಿಸಬೇಕಿದೆ.

    ದೂರು ಸ್ವೀಕಾರದ ಬಗ್ಗೆಯೂ ಚರ್ಚೆ

    ಒಂದೆಡೆ ಜಾಗದ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಬೇಲಿ ತೆರವುಗೊಳಿಸಲು ಮುಂದಾದ ಆರೋಪ ಕೇಳಿಬಂದಿದ್ದರೆ, ಮತ್ತೊಂದೆಡೆ ಅಕ್ಷಯ ಶೆಟ್ಟಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಡಿಯೋ ನೋಡುವಾಗ ಅಕ್ಷಯ್ ಶೆಟ್ಟಿ ಹಾಗೂ ಅವರ ತಂದೆಯವರ ತಪ್ಪು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅವರುಗಳೇ ಬೇಲಿಯನ್ನು ಮುರಿದು ಹಾಕುವ ಪ್ರಯತ್ನ ಹಾಗೂ ಎದುರಾಳಿಗಳನ್ನು ಬೆದರಿಸುವ ರೀತಿಯ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿ ಕಂಡು ಬಂತು. ಜೊತೆಗೆ ಕತ್ತಿ ಹಾಗೂ ಗುದ್ದಲಿಯ ಮೂಲಕ ಎದುರಾಳಿಗಳ ಮೇಲೆ ದಾಳಿ ಮಾಡುವ ರೀತಿಯಲ್ಲಿ ದೃಶ್ಯ ಕಂಡು ಬರುತ್ತದೆ ಹಾಗೆಯೇ ಅದೇ ಸಮಯದಲ್ಲಿ ಎದುರಾಳಿಗಳು ಹಿಂದಕ್ಕೆ ಸರದು ಮತ್ತೆ ಮರದ ಪೋಲನ್ನು ಬೀಸಿದ್ದು ಕಂಡುಬರುತ್ತದೆ. ಅದು ಅಕ್ಷಯ್ ತಲೆಗೆ ತಾಗಿದ್ದು ನಿಜಾನೇ ಹಾಗೂ ರಕ್ತ ಬಂದಿದ್ದು ನಿಜಾನೇ. ಅದರ ನಡುವೆಯೂ ಬೇಲಿಯನ್ನು ಕಿತ್ತು ಬಿಸಾಡುವ ರೀತಿಯಲ್ಲಿ ವರ್ತಿಸಿದ್ದು ಕಂಡು ಬರುತ್ತದೆ. ಹಾಗಾಗಿ ಇಲ್ಲಿ ವಿಡಿಯೋ ಕಥೆ ಬೇರೆ ಅದನ್ನೇ ಹೇಳುತ್ತಿದೆ.

    ವೈರಲ್ ವಿಡಿಯೋದಲ್ಲಿನ ದೃಶ್ಯಗಳು ಮತ್ತು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿನ ಆರೋಪಗಳ ನಡುವೆ ಯಾವುದೇ ವ್ಯತ್ಯಾಸವಿದೆಯೇ? ಗಾಯಗೊಂಡ ಅಕ್ಷಯ ಶೆಟ್ಟಿ ಅವರ ಮೇಲೆ ದಾಳಿ ನಡೆದಿತ್ತೇ ಅಥವಾ ಗಲಾಟೆಯ ಸಂದರ್ಭದಲ್ಲಿ ಗಾಯವಾಗಿತ್ತೇ? ಬೇಲಿ ತೆರವುಗೊಳಿಸಲು ಯಾರು ಮೊದಲು ಮುಂದಾದರು? ಕತ್ತಿ ಮತ್ತು ಹಾರೆಗಳನ್ನು ಸ್ಥಳಕ್ಕೆ ಯಾರು ತಂದಿದ್ದರು? ಎಂಬ ಹಲವು ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ.

    ಘಟನೆಯ ಎರಡೂ ಬದಿಗಳ ದೂರಿನ ಆಧಾರ, , ಸ್ಥಳ ಪರಿಶೀಲನೆ ಹಾಗೂ ವೈರಲ್ ವಿಡಿಯೋ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸಿ ನಿಖರವಾದ ಸತ್ಯವನ್ನು ಹೊರತರಬೇಕಿದೆ. ನ್ಯಾಯಾಲಯದಲ್ಲಿ ಜಾಗದ ವಿವಾದ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ಕಾನೂನು ಕೈಗೆತ್ತಿಕೊಳ್ಳುವ ಬದಲು ಎರಡೂ ಕುಟುಂಬಗಳು ನ್ಯಾಯಾಂಗ ಪ್ರಕ್ರಿಯೆಯನ್ನು ಗೌರವಿಸಬೇಕೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು!