📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ

    ಮೇ ನಾಲ್ಕರಂದು ಚುನಾವಣೆಯ ಫಲಿತಾಂಶ ಬಂದಿದೆ. ಬಹುತೇಕವಾಗಿ ಫಲಿತಾಂಶ ಬಂದು ಒಂದು ವಾರ ಕಳೆದು ಹೋಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ ಎರಡು ಕಡೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ತಮಿಳುನಾಡಿನಲ್ಲಿ ಇದೀಗ ನೂತನ ಸರ್ಕಾರ ರಚನೆಯಾಗುತ್ತಿದೆ. ಆದರೆ ಕೇರಳದಲ್ಲಿ ನ್ನೂ ಸರ್ಕಾರ ರಚನೆಯ ಕಗ್ಗಂಟು ಮುಂದುವರೆದಿದೆ.

    ಕಾಂಗ್ರೆಸ್ ಎಷ್ಟು ದುರ್ಬಲವಾಗಿದೆ ಅನ್ನುವುದಕ್ಕೆ ಇದೊಂದು ಸಾಕ್ಷಿ ಸಾಕು ನೋಡಿ. ಕೇರಳದಲ್ಲಿ ಬಹುಮತವನ್ನು ಪಡೆದಿರುವಂತಹ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಸಿಎಂ ಯಾರಾಗಬೇಕು ಅನ್ನುವುದರಲ್ಲಿಯೇ ಸಮಯ ಕಳೆಯುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಷ್ಟು ವೀಕ್ ಅನ್ನುವುದನ್ನು ಸಾರಿ ಸಾರಿ ಹೇಳುತ್ತಿದೆ.

    ಕೆಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಾಲ್ ಹಾಗೂ ವಿಡಿ ಸತೀಶನ್ ಇವರ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಕೇರಳ ಕಾಂಗ್ರೆಸ್ಸಿನಲ್ಲಿ  ಸತೀಶನ ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿದ್ದರೆ, ಆಯ್ಕೆಯಾದ ಶಾಸಕರ ಅಭಿಪ್ರಾಯವು, ಕೆಸಿ ವೇಣುಗಪಾಲ್ ಪರವಾಗಿದೆ. ಚೆನ್ನಿತಾಲ್ ಪರವಾಗಿಯೂ ಒಂದಷ್ಟು ಶಾಸಕರು ಬ್ಯಾಟ್ ಬೀಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ಗೆ ಈಗ ತಲೆನೋವು ಶುರುವಾಗಿದೆಯಂತೆ.

    ಕಾಂಗ್ರೆಸ್ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ಎಡವುತ್ತಿದೆ ಅನ್ನುವುದಕ್ಕೆ ಇದೇ ಸಾಕ್ಷಿ. ಕೆ ಸಿ ವೇಣುಗೋಪಾಲ್ ಕೇರಳದ ಮುಖ್ಯಮಂತ್ರಿಯಾದರೆ, ರಾಷ್ಟ್ರೀಯ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತದೆ ಎಂಬ ಪರಿಜ್ಞಾನ ಇರಬೇಕು. ಈಗಾಗಲೇ ವೇಣುಗೋಪಾಲ್ ರಾಷ್ಟ್ರೀಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಹಾಗೆಯೇ ರಾಷ್ಟ್ರದ ಬಹುತೇಕ ರಾಜ್ಯಗಳಿಗೆ ಚಿರಪರಿಚಿತ ಮುಖವಾಗಿದೆ. ಹೀಗಿರುವಾಗ, ಇಂತಹ ನಾಯಕರನ್ನು ಪಕ್ಷವು ಒಂದು ರಾಜ್ಯದ ಮುಖ್ಯಮಂತ್ರಿ ಮಾಡಿ ರಾಷ್ಟ್ರೀಯ ಕೈವೊಂದನ್ನು ಕಳೆದುಕೊಳ್ಳಬೇಕೇ? ಸತೀಶನ್ ಮತ್ತು ಚೆನ್ನಿತ್ತಲ್ ನಡುವೆ ಒಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಬುದ್ದಿವಂತಿಕೆಯ ನಡೆಯಾಗುತ್ತದೆ. ಶಶಿ ತರೂರ್ ಕಾಂಗ್ರೆಸ್ ನಿಷ್ಠೆಯನ್ನು ಕಳೆದುಕೊಳ್ಳದಿದ್ದಲ್ಲಿ ಬಹುಶಹ ಅವರಿಗೆ ಈಗ ಅವಕಾಶ ದೊಡ್ಡ ಪ್ರಮಾಣದಲ್ಲಿ ಇರುತ್ತಿತ್ತು. ಅಂತಹ ಅವಕಾಶವನ್ನು ಸ್ವಸಹ ತರೂರು ಕಳೆದುಕೊಂಡಿದ್ದಾರೆ ಎನ್ನಬಹುದು.

    ಕಾಂಗ್ರೆಸ್ ಹೈಕಮಾಂಡ್ಗೆ ಕೇರಳ ಸರ್ಕಾರ ರಚನೆಯ ಕುರಿತು ಹಾಗೂ ಮುಖ್ಯಮಂತ್ರಿ ಆಯ್ಕೆಯ ಕುರಿತು ಯಾವುದೇ ಸಮಸ್ಯೆ ಎದುರಾಗಬಾರದಿತ್ತು. ಈ ಸಮಸ್ಯೆ ಎದುರಾಗಿದೆ ಎಂದರೆ, ಪಕ್ಷದ ವೀಕ್ ನೆಸ್ ಅನ್ನು ಅದು ಓಪನ್ ಮಾಡಿ ಸಾರ್ವಾಜನಿಕವಾಗಿ ತೋರಿಸುತ್ತದೆ ಅಂತಲೇ ಲೆಕ್ಕ. ಈಗಾಗುತ್ತಿರುವುದು ಅದೇ ಆಗಿದೆ. ಒಂದು ವಾರ ಕಳೆದರೂ ಬಹುಮತವಿರುವ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಆಗುತ್ತಿಲ್ಲ ಎಂದರೆ, ಇದು ಇಡೀ ದೇಶಕ್ಕೆ ಕಾಂಗ್ರೆಸ್ಸಿನ ದೌರ್ಬಲ್ಯದ ಬಗ್ಗೆ ದೊಡ್ಡ ಮೆಸೇಜನ್ನು ಕೊಡುತ್ತದೆ ಅನ್ನುವುದನ್ನು ಅರಿಯದಷ್ಟು ದಡ್ಡರು ಹೈಕಮಾಂಡ್ ಸ್ಥಾನದಲ್ಲಿ ಕೂತಂತೆ ಕಾಣುತ್ತಿದೆ. ಶಾಸಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ಒಂದೊಮ್ಮೆ ಕೇಸೀ ವೇಣುಗೋಪಾಲ್ ರವರನ್ನು ಕೇರಳದ ಮುಖ್ಯಮಂತ್ರಿ ಯನ್ನಾಗಿ ಮಾಡಿದರೆ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ದೊಡ್ಡ ಹಿನ್ನಡೆಯನ್ನು ಅನುಭವಿಸುತ್ತದೆ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ನ ದೌರ್ಬಲ್ಯ ಬಹಿರಂಗವಾಗಿ ಹರಾಜ್ ಆಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…