📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇತ್ತೀಚೆಗಷ್ಟೇ ಭಾರಿ ಬದಲಾವಣೆಯಾಗಿದ್ದು, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಸರ್ಕಾರವು ಸಾರ್ವಜನಿಕರಿಗಾಗಿ ಹಲವು ಜನಪ್ರಿಯ ಹಾಗೂ ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ.

ಕಲ್ಯಾಣಿಯಲ್ಲಿ ನಡೆದ ಆಡಳಿತಾತ್ಮಕ ಸಭೆಯ ಬಳಿಕ ಪಶ್ಚಿಮ ಬಂಗಾಳದಲ್ಲಿ ‘ಸುವೇಂದು ಅಧಿಕಾರಿ’ ಸರ್ಕಾರದ ಬಿಗ್ ಆಫರ್…

ಪಶ್ಚಿಮ ಬಂಗಾಳದಲ್ಲಿ ದಶಕಗಳ ಬಳಿಕ ತೃಣಮೂಲ ಕಾಂಗ್ರೆಸ್ (TMC) ಆಡಳಿತಕ್ಕೆ ಬ್ರೇಕ್ ಹಾಕಿ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಿಜೆಪಿಯ ಸುವೇಂದು ಅಧಿಕಾರಿ ಅವರು ರಾಜ್ಯದ ಜನತೆಗೆ ಸಾಲು ಸಾಲು ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಮಹಿಳಾ ಸಬಲೀಕರಣ, ಬಡವರ ಹಸಿವು ನೀಗಿಸುವುದು ಹಾಗೂ ಶೈಕ್ಷಣಿಕ ವಾತಾವರಣವನ್ನು ಸುಧಾರಿಸುವ ನಿಟ್ಟಿನಲ್ಲಿ ಮೂರು ಪ್ರಮುಖ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

1. ಅನ್ನಪೂರ್ಣ ಯೋಜನೆ (Annapurna Yojana): ಮಹಿಳೆಯರಿಗೆ ₹3,000 ಮಾಸಿಕ ಧನಸಹಾಯ!ಮೇ 27 ರಿಂದಲೇ ಈ ಯೋಜನೆಯ ಅರ್ಜಿ ನಮೂನೆಗಳನ್ನು (Forms) ರಾಜ್ಯ ಸಚಿವಾಲಯದಿಂದ ವಿತರಿಸಲು ಆರಂಭಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ₹3,000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ಜೊತೆಗೆ, ಜೂನ್ 1 ರಿಂದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನೂ ಈಗಾಗಲೇ ಅನುಮೋದಿಸಲಾಗಿದೆ.

2. ಕೇವಲ ₹5 ಕ್ಕೆ ‘ಮಾಚ್-ಭಾತ್’ (ಮೀನು ಮತ್ತು ಅನ್ನದ ಊಟ)!ಬಂಗಾಳಿ ಸಂಸ್ಕೃತಿಯಲ್ಲಿ ಮೀನು ಮತ್ತು ಅನ್ನಕ್ಕೆ (Maach-Bhaat) ಅತ್ಯಂತ ಪ್ರಮುಖ ಸ್ಥಾನವಿದೆ. ಬಡವರಿಗೂ ಪೌಷ್ಟಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಸಬ್ಸಿಡಿ ದರದ ಕ್ಯಾಂಟೀನ್ ಯೋಜನೆಯನ್ನು ವಿಸ್ತರಿಸಿದೆ.ಸುಮಾರು 400 ಪ್ರತ್ಯೇಕ ಸರ್ಕಾರಿ ಕ್ಯಾಂಟೀನ್‌ಗಳಲ್ಲಿ ವಾರಕ್ಕೆ ಎರಡು ಬಾರಿ ಕೇವಲ ₹5 ಕ್ಕೆ ಮೀನು ಊಟ ಸಿಗುತ್ತೆ.ಈ ಹಿಂದೆ ಇದ್ದ ಕ್ಯಾಂಟೀನ್‌ಗಳಲ್ಲಿ ₹5 ಕ್ಕೆ ಮೊಟ್ಟೆ-ಅನ್ನ ನೀಡಲಾಗುತ್ತಿತ್ತು. 

3. ಶಾಲಾ-ಕಾಲೇಜುಗಳ ಬಳಿ ಮದ್ಯದ ಅಂಗಡಿಗಳಿಗೆ ಬ್ರೇಕ್!

ರಾಜ್ಯದಲ್ಲಿ ಯುವ ಪೀಳಿಗೆ ಹಾದಿ ತಪ್ಪುವುದನ್ನು ತಡೆಯಲು ಮತ್ತು ಧಾರ್ಮಿಕ ಸ್ಥಳಗಳ ಪವಿತ್ರತೆಯನ್ನು ಕಾಪಾಡಲು ಸರ್ಕಾರ ಕಠಿಣ ನಿಯಮ ತಂದಿದೆ.ಇನ್ಮುಂದೆ ಯಾವುದೇ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ದೇವಸ್ಥಾನ/ಪ್ರಾರ್ಥನಾ ಮಂದಿರಗಳ 1 ಕಿಲೋಮೀಟರ್ (1 KM) ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು (Liquor Shops) ನಡೆಸಲು ಅನುಮತಿ ನೀಡುವುದಿಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ.


4. ಪ್ರತ್ಯೇಕ ‘ಆಯುಷ್’ (AYUSH) ಇಲಾಖೆ ಸ್ಥಾಪನೆ
ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗೆ ಹೆಚ್ಚಿನ ಒತ್ತು ನೀಡಲು ಸರ್ಕಾರ ನಿರ್ಧರಿಸಿದೆ. ಈವರೆಗೆ ರಾಜ್ಯ ಆರೋಗ್ಯ ಇಲಾಖೆಯ ಭಾಗವಾಗಿದ್ದ ಆಯುರ್ವೇದ, ಯೋಗ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ (AYUSH) ವಿಭಾಗವನ್ನು ಆರೋಗ್ಯ ಇಲಾಖೆಯಿಂದ ಬೇರ್ಪಡಿಸಿ, ಸ್ವತಂತ್ರ ‘ಆಯುಷ್ ಇಲಾಖೆ’ಯನ್ನು ರಚಿಸಲಾಗುವುದು ಎಂದು ಸುವೇಂದು ಅಧಿಕಾರಿ ಪ್ರಕಟಿಸಿದ್ದಾರೆ.

ಇದು ಕೇವಲ ಆಡಳಿತಗಾರರ ಆಡಳಿತವಲ್ಲ, ಬದಲಿಗೆ ಕಾನೂನಿನ ಆಡಳಿತ” ಎಂದು ಹೇಳಿರುವ ಸಿಎಂ ಸುವೇಂದು ಅಧಿಕಾರಿ, ಅಧಿಕಾರಿಗಳು ಮತ್ತು ಶಾಸಕರ ನಡುವೆ ನೇರ ಸಮನ್ವಯ ಸಾಧಿಸಲು ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರುತ್ತಿರುವ ಈ ಹೊಸ ಯೋಜನೆಗಳು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿವೆ.

##SuvenduAdhikari #AnnapurnaYojana #WestBengalNews #FishRice5Rs #LiquorBanBengal #BengalNewGovt #KannadaWebNews #TrendingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು