📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …

    ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇತ್ತೀಚೆಗಷ್ಟೇ ಭಾರಿ ಬದಲಾವಣೆಯಾಗಿದ್ದು, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಸರ್ಕಾರವು ಸಾರ್ವಜನಿಕರಿಗಾಗಿ ಹಲವು ಜನಪ್ರಿಯ ಹಾಗೂ ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ.

    ಕಲ್ಯಾಣಿಯಲ್ಲಿ ನಡೆದ ಆಡಳಿತಾತ್ಮಕ ಸಭೆಯ ಬಳಿಕ ಪಶ್ಚಿಮ ಬಂಗಾಳದಲ್ಲಿ ‘ಸುವೇಂದು ಅಧಿಕಾರಿ’ ಸರ್ಕಾರದ ಬಿಗ್ ಆಫರ್…

    ಪಶ್ಚಿಮ ಬಂಗಾಳದಲ್ಲಿ ದಶಕಗಳ ಬಳಿಕ ತೃಣಮೂಲ ಕಾಂಗ್ರೆಸ್ (TMC) ಆಡಳಿತಕ್ಕೆ ಬ್ರೇಕ್ ಹಾಕಿ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಿಜೆಪಿಯ ಸುವೇಂದು ಅಧಿಕಾರಿ ಅವರು ರಾಜ್ಯದ ಜನತೆಗೆ ಸಾಲು ಸಾಲು ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಮಹಿಳಾ ಸಬಲೀಕರಣ, ಬಡವರ ಹಸಿವು ನೀಗಿಸುವುದು ಹಾಗೂ ಶೈಕ್ಷಣಿಕ ವಾತಾವರಣವನ್ನು ಸುಧಾರಿಸುವ ನಿಟ್ಟಿನಲ್ಲಿ ಮೂರು ಪ್ರಮುಖ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

    1. ಅನ್ನಪೂರ್ಣ ಯೋಜನೆ (Annapurna Yojana): ಮಹಿಳೆಯರಿಗೆ ₹3,000 ಮಾಸಿಕ ಧನಸಹಾಯ!ಮೇ 27 ರಿಂದಲೇ ಈ ಯೋಜನೆಯ ಅರ್ಜಿ ನಮೂನೆಗಳನ್ನು (Forms) ರಾಜ್ಯ ಸಚಿವಾಲಯದಿಂದ ವಿತರಿಸಲು ಆರಂಭಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ₹3,000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

    ಜೊತೆಗೆ, ಜೂನ್ 1 ರಿಂದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನೂ ಈಗಾಗಲೇ ಅನುಮೋದಿಸಲಾಗಿದೆ.

    2. ಕೇವಲ ₹5 ಕ್ಕೆ ‘ಮಾಚ್-ಭಾತ್’ (ಮೀನು ಮತ್ತು ಅನ್ನದ ಊಟ)!ಬಂಗಾಳಿ ಸಂಸ್ಕೃತಿಯಲ್ಲಿ ಮೀನು ಮತ್ತು ಅನ್ನಕ್ಕೆ (Maach-Bhaat) ಅತ್ಯಂತ ಪ್ರಮುಖ ಸ್ಥಾನವಿದೆ. ಬಡವರಿಗೂ ಪೌಷ್ಟಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಸಬ್ಸಿಡಿ ದರದ ಕ್ಯಾಂಟೀನ್ ಯೋಜನೆಯನ್ನು ವಿಸ್ತರಿಸಿದೆ.ಸುಮಾರು 400 ಪ್ರತ್ಯೇಕ ಸರ್ಕಾರಿ ಕ್ಯಾಂಟೀನ್‌ಗಳಲ್ಲಿ ವಾರಕ್ಕೆ ಎರಡು ಬಾರಿ ಕೇವಲ ₹5 ಕ್ಕೆ ಮೀನು ಊಟ ಸಿಗುತ್ತೆ.ಈ ಹಿಂದೆ ಇದ್ದ ಕ್ಯಾಂಟೀನ್‌ಗಳಲ್ಲಿ ₹5 ಕ್ಕೆ ಮೊಟ್ಟೆ-ಅನ್ನ ನೀಡಲಾಗುತ್ತಿತ್ತು. 

    3. ಶಾಲಾ-ಕಾಲೇಜುಗಳ ಬಳಿ ಮದ್ಯದ ಅಂಗಡಿಗಳಿಗೆ ಬ್ರೇಕ್!

    ರಾಜ್ಯದಲ್ಲಿ ಯುವ ಪೀಳಿಗೆ ಹಾದಿ ತಪ್ಪುವುದನ್ನು ತಡೆಯಲು ಮತ್ತು ಧಾರ್ಮಿಕ ಸ್ಥಳಗಳ ಪವಿತ್ರತೆಯನ್ನು ಕಾಪಾಡಲು ಸರ್ಕಾರ ಕಠಿಣ ನಿಯಮ ತಂದಿದೆ.ಇನ್ಮುಂದೆ ಯಾವುದೇ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ದೇವಸ್ಥಾನ/ಪ್ರಾರ್ಥನಾ ಮಂದಿರಗಳ 1 ಕಿಲೋಮೀಟರ್ (1 KM) ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು (Liquor Shops) ನಡೆಸಲು ಅನುಮತಿ ನೀಡುವುದಿಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ.


    4. ಪ್ರತ್ಯೇಕ ‘ಆಯುಷ್’ (AYUSH) ಇಲಾಖೆ ಸ್ಥಾಪನೆ
    ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗೆ ಹೆಚ್ಚಿನ ಒತ್ತು ನೀಡಲು ಸರ್ಕಾರ ನಿರ್ಧರಿಸಿದೆ. ಈವರೆಗೆ ರಾಜ್ಯ ಆರೋಗ್ಯ ಇಲಾಖೆಯ ಭಾಗವಾಗಿದ್ದ ಆಯುರ್ವೇದ, ಯೋಗ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ (AYUSH) ವಿಭಾಗವನ್ನು ಆರೋಗ್ಯ ಇಲಾಖೆಯಿಂದ ಬೇರ್ಪಡಿಸಿ, ಸ್ವತಂತ್ರ ‘ಆಯುಷ್ ಇಲಾಖೆ’ಯನ್ನು ರಚಿಸಲಾಗುವುದು ಎಂದು ಸುವೇಂದು ಅಧಿಕಾರಿ ಪ್ರಕಟಿಸಿದ್ದಾರೆ.

    ಇದು ಕೇವಲ ಆಡಳಿತಗಾರರ ಆಡಳಿತವಲ್ಲ, ಬದಲಿಗೆ ಕಾನೂನಿನ ಆಡಳಿತ” ಎಂದು ಹೇಳಿರುವ ಸಿಎಂ ಸುವೇಂದು ಅಧಿಕಾರಿ, ಅಧಿಕಾರಿಗಳು ಮತ್ತು ಶಾಸಕರ ನಡುವೆ ನೇರ ಸಮನ್ವಯ ಸಾಧಿಸಲು ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರುತ್ತಿರುವ ಈ ಹೊಸ ಯೋಜನೆಗಳು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿವೆ.

    ##SuvenduAdhikari #AnnapurnaYojana #WestBengalNews #FishRice5Rs #LiquorBanBengal #BengalNewGovt #KannadaWebNews #TrendingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬಿಡದಿಯ ಭೂಮಿ ಯಾರಿಗೆ? ಹೋರಾಟಕ್ಕೆ ಹೊಸ ತಿರುವು.! ಭೂಸಮರದ ಒಳನೋಟ…!
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಬಿಡದಿ ಟೌನ್‌ಶಿಪ್‌ಗೆ ಮರುಜೀವ: ವಿಶ್ವದರ್ಜೆಯ ‘ಎಐ ಸಿಟಿ’ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ .. ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು