📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತಹಸಿಲ್ದಾರ್ ಇದೀಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ, ವೈಯಕ್ತಿಕ ದ್ವೇಷಕ್ಕೆ ತಮ್ಮ ಹುದ್ದೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಚಾರವಾಗಿ, ಪ್ರತಿಭಟನೆಯನ್ನು ಎದುರಿಸುತ್ತಿದ್ದಾರೆ.

    ಸ್ಥಳೀಯ ಬಿಜೆಪಿಯ ಕಾರ್ಯಕರ್ತ ಮಂಜುನಾಥ್ ಗೌಡ ,ತಹಶೀಲ್ದಾರ್ ಅವರ ಕೆಂಗಣ್ಣಿಗೆ ಗುರಿಯಾಗಿ ಇದೀಗ ಜೈಲಿಗೆ ಸೇರುವಂತಾಗಿದೆ ಅನ್ನುವುದು ಇಲ್ಲಿನ ರೈತ ಸಂಘದವರ ಆರೋಪ ಹಾಗೂ ಇದೇ ಕಾರಣಕ್ಕೆ ಅವರು ತಹಸಿಲ್ದಾರ್ ವಿರುದ್ಧ ಪ್ರತಿಭಟನೆಯನ್ನೂ ಮಾಡುತ್ತಿದ್ದಾರೆ.

    ತಹಸಿಲ್ದಾರ್ ಲಿಖಿತ ಮೋಹನ್ ಎಂಬುವರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಗೌಡ ಎಂಬವರ ನಡುವೆ ಕಳೆದ ಕೆಲವು ಸಮಯಗಳಿಂದ ಒಂದಷ್ಟು ಇಂಟರ್ನಲ್ ಗುದ್ದಾಟಗಳು ನಡೆದದ್ದು ಸುಳ್ಳಲ್ಲ. ಈ ಇಂಟರ್ನಲ್ ಗುದ್ದಾಟಗಳ ವಿಚಾರವನ್ನು ಸೀರಿಯಸ್ಸಾಗಿ ತೆಗೆದುಕೊಂಡ ತಹಸಿಲ್ದಾರ್ ಲಿಖಿತ ಮೋಹನ್, ಮಂಜುನಾಥ್ ಗೌಡರ ವಿರುದ್ಧ ದೂರು ದಾಖಲಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಆ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾದ ಕಾರಣ, ಮಂಜುನಾಥಗೌಡ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಹಾಕುತ್ತಾರೆ. ಕೇಳ ನ್ಯಾಯಾಲಯದಲ್ಲಿ ಅದು ತಿರಸ್ಕೃತವಾದ ಕಾರಣ, ಮೇಲಿನ ನ್ಯಾಯಾಲಯದಕ್ಕೆ ಮಂಜುನಾಥ್ ಗೌಡ ಅಪಿಲ್ ಹೋಗುತ್ತಾರೆ. ಅಲ್ಲಿ ಮಂಜುನಾಥ್ ಗೌಡನ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಜಾಮೀನು ಮಂಜೂರಿ ಮಾಡುತ್ತದೆ. ಹಾಗೆಯೇ ತಹಸಿಲ್ದಾರ್ ಸಮ್ಮುಖದಲ್ಲಿ ಶೂರಿಟಿ ನೀಡುವಂತೆ ಹೇಳಿರುತ್ತದೆ.

    ಅದರಂತೆಯೇ ಮಂಜುನಾಥ್ ಗೌಡ ತಹಸಿಲ್ದಾರ್ ಮುಂದೆ ಮೂರು ಲಕ್ಷದ ಶೂರಿಟಿ ನೀಡುತ್ತಾರೆ.  ಇಬ್ಬರು ಸರ್ಕಾರಿ ನೌಕರರಿಂದ ಶುರಿಟಿ ಕೇಳಲಾಗುತ್ತದೆ. ಅದಕ್ಕೂ ಸಹ ಮಂಜುನಾಥ್ ಗೌಡ, ಇಬ್ಬರು ಸರ್ಕಾರಿ ನೌಕರರನ್ನು ಕರೆದೊಯ್ಯುತ್ತಾರೆ. ಅದನ್ನು ಒಪ್ಪಿಕೊಳ್ಳದ ತಹಶೀಲ್ದಾರ್ ಲಿಖಿತ ಮೋಹನ್, A ಗ್ರೇಡ್ ಅಧಿಕಾರಿಗಳ ಶೂರೀಟಿಯೇ ಬೇಕು ಅಂತ ಪಟ್ಟು ಹಿಡಿದ ಕಾರಣ, ಮಂಜುನಾಥ್ ಗೌಡಗೆ ಅದನ್ನು ಪೂರೈಸಲು ಆಗಿಲ್ಲ. ಹಾಗಾಗಿ ಮಂಜುನಾಥ್ ಗೌಡ ಸೀದಾ ಜೈಲಿಗೆ ಹೋಗಿದ್ದಾರೆ. ಇದರಿಂದ ಕೆರಳಿದ ಸ್ಥಳೀಯ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆಗೆ ಮುಂದಾಗಿದ್ದಾರೆ. ತಹಸಿಲ್ದಾರ್ ತಮ್ಮ ಇತಿಮಿತಿಯನ್ನು ಮೀರಿ ಮತ್ತು ತಮ್ಮ ಹುದ್ದೆಯನ್ನೂ ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ಈ ಪ್ರಕರಣವು ಮತ್ತೊಂದು ಮಗ್ಗಲಿಗೆ ಟರ್ನ್ ಆಗುವಂತೆ ಮಾಡುತ್ತಿದ್ದಾರೆ.

    ಕೊಪ್ಪ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗ ಒಂದರಲ್ಲಿ ನಿರ್ಮಿತವಾಗಿರುವ ಕಟ್ಟಡ ಒಂದನ್ನು ಡೆಮಾಲಿಷ್ ಮಾಡಲು ಹೋದ ಸಂದರ್ಭದಲ್ಲಿ, ಸ್ಥಳೀಯ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಗೌಡ ಹಾಗೂ ತಹಸಿಲ್ದಾರ್ ಲಿಖಿತ ಮೋಹನ್ ಮಧ್ಯೆ ವಾಕ್ ಸಮರ ನಡೆದಿತ್ತು. ಇದಾದ ನಂತರ ತಹಶೀಲ್ದಾರ್ ತಮ್ಮ ಸರ್ಕಾರಿ ವಾಹನವನ್ನು ವೈಯಕ್ತಿಕ ಉಪಯೋಗಗಳಿಗೆ ಬಳಸಿಕೊಳ್ಳುತ್ತಿದ್ದಾರೆಂದು ಮಂಜುನಾಥ್ ಗೌಡ ಆರೋಪಿಸಿದಾಗ,  ಅವರ ನಡುವಿನ ಕಂದಕ ಇನ್ನಷ್ಟು ಹೆಚ್ಚಿತ್ತು. ಇದೆಲ್ಲವುದರ ಪರಿಣಾಮ, ತಹಸಿಲ್ದಾರ್ ಲಿಖಿತ ಮೋಹನ್ ಖುದ್ದಾಗಿ ಮಂಜುನಾಥ್ ಗೌಡ ಮೇಲೆ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಜಾಮೀನು ಮಂಜೂರಿ ಮಾಡಿದ್ದರು, ತಹಸಿಲ್ದಾರ್ ಲಿಖಿತಮೋಹನ್ ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಮಂಜುನಾಥ್ ಗೌಡಗೆ ಜಾಮೀನು ಸಿಗದಂತೆ ಮಾಡಿದ್ದಾರೆ ಅನ್ನುವುದು ಸ್ಥಳೀಯರ ಆರೋಪ. ಬಹುಶಹ ಇದು ರಾಜಕೀಯ ತಿರುವನ್ನು ತೆಗೆದುಕೊಳ್ಳುವ ಸಂಭವ ಜಾಸ್ತಿ ಇದೆ. ತಾಸಿಲ್ದಾರ್ ಲಿಖಿತ ಮೋಹನ್ ಒಂದಿಷ್ಟು ಬುದ್ಧಿವಂತಿಕೆ ಉಪಯೋಗಿಸಬಹುದಿತ್ತು . ಬದಲಿಗೆ ಅವರು ದೊಡ್ಡತನವನ್ನು ಮೆರೆದಿದ್ದಾರೆ ಮೇಲ್ನೋಟಕ್ಕೆ ತಹಸಿಲ್ದಾರ್ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಂತೆ ಕಾಣುತ್ತಿದೆ ಎನ್ನುವುದು ಸ್ಥಳೀಯರ ಹೇಳಿಕೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!