📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತಹಸಿಲ್ದಾರ್ ಇದೀಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ, ವೈಯಕ್ತಿಕ ದ್ವೇಷಕ್ಕೆ ತಮ್ಮ ಹುದ್ದೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಚಾರವಾಗಿ, ಪ್ರತಿಭಟನೆಯನ್ನು ಎದುರಿಸುತ್ತಿದ್ದಾರೆ.

ಸ್ಥಳೀಯ ಬಿಜೆಪಿಯ ಕಾರ್ಯಕರ್ತ ಮಂಜುನಾಥ್ ಗೌಡ ,ತಹಶೀಲ್ದಾರ್ ಅವರ ಕೆಂಗಣ್ಣಿಗೆ ಗುರಿಯಾಗಿ ಇದೀಗ ಜೈಲಿಗೆ ಸೇರುವಂತಾಗಿದೆ ಅನ್ನುವುದು ಇಲ್ಲಿನ ರೈತ ಸಂಘದವರ ಆರೋಪ ಹಾಗೂ ಇದೇ ಕಾರಣಕ್ಕೆ ಅವರು ತಹಸಿಲ್ದಾರ್ ವಿರುದ್ಧ ಪ್ರತಿಭಟನೆಯನ್ನೂ ಮಾಡುತ್ತಿದ್ದಾರೆ.

ತಹಸಿಲ್ದಾರ್ ಲಿಖಿತ ಮೋಹನ್ ಎಂಬುವರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಗೌಡ ಎಂಬವರ ನಡುವೆ ಕಳೆದ ಕೆಲವು ಸಮಯಗಳಿಂದ ಒಂದಷ್ಟು ಇಂಟರ್ನಲ್ ಗುದ್ದಾಟಗಳು ನಡೆದದ್ದು ಸುಳ್ಳಲ್ಲ. ಈ ಇಂಟರ್ನಲ್ ಗುದ್ದಾಟಗಳ ವಿಚಾರವನ್ನು ಸೀರಿಯಸ್ಸಾಗಿ ತೆಗೆದುಕೊಂಡ ತಹಸಿಲ್ದಾರ್ ಲಿಖಿತ ಮೋಹನ್, ಮಂಜುನಾಥ್ ಗೌಡರ ವಿರುದ್ಧ ದೂರು ದಾಖಲಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಆ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾದ ಕಾರಣ, ಮಂಜುನಾಥಗೌಡ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಹಾಕುತ್ತಾರೆ. ಕೇಳ ನ್ಯಾಯಾಲಯದಲ್ಲಿ ಅದು ತಿರಸ್ಕೃತವಾದ ಕಾರಣ, ಮೇಲಿನ ನ್ಯಾಯಾಲಯದಕ್ಕೆ ಮಂಜುನಾಥ್ ಗೌಡ ಅಪಿಲ್ ಹೋಗುತ್ತಾರೆ. ಅಲ್ಲಿ ಮಂಜುನಾಥ್ ಗೌಡನ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಜಾಮೀನು ಮಂಜೂರಿ ಮಾಡುತ್ತದೆ. ಹಾಗೆಯೇ ತಹಸಿಲ್ದಾರ್ ಸಮ್ಮುಖದಲ್ಲಿ ಶೂರಿಟಿ ನೀಡುವಂತೆ ಹೇಳಿರುತ್ತದೆ.

ಅದರಂತೆಯೇ ಮಂಜುನಾಥ್ ಗೌಡ ತಹಸಿಲ್ದಾರ್ ಮುಂದೆ ಮೂರು ಲಕ್ಷದ ಶೂರಿಟಿ ನೀಡುತ್ತಾರೆ.  ಇಬ್ಬರು ಸರ್ಕಾರಿ ನೌಕರರಿಂದ ಶುರಿಟಿ ಕೇಳಲಾಗುತ್ತದೆ. ಅದಕ್ಕೂ ಸಹ ಮಂಜುನಾಥ್ ಗೌಡ, ಇಬ್ಬರು ಸರ್ಕಾರಿ ನೌಕರರನ್ನು ಕರೆದೊಯ್ಯುತ್ತಾರೆ. ಅದನ್ನು ಒಪ್ಪಿಕೊಳ್ಳದ ತಹಶೀಲ್ದಾರ್ ಲಿಖಿತ ಮೋಹನ್, A ಗ್ರೇಡ್ ಅಧಿಕಾರಿಗಳ ಶೂರೀಟಿಯೇ ಬೇಕು ಅಂತ ಪಟ್ಟು ಹಿಡಿದ ಕಾರಣ, ಮಂಜುನಾಥ್ ಗೌಡಗೆ ಅದನ್ನು ಪೂರೈಸಲು ಆಗಿಲ್ಲ. ಹಾಗಾಗಿ ಮಂಜುನಾಥ್ ಗೌಡ ಸೀದಾ ಜೈಲಿಗೆ ಹೋಗಿದ್ದಾರೆ. ಇದರಿಂದ ಕೆರಳಿದ ಸ್ಥಳೀಯ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆಗೆ ಮುಂದಾಗಿದ್ದಾರೆ. ತಹಸಿಲ್ದಾರ್ ತಮ್ಮ ಇತಿಮಿತಿಯನ್ನು ಮೀರಿ ಮತ್ತು ತಮ್ಮ ಹುದ್ದೆಯನ್ನೂ ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ಈ ಪ್ರಕರಣವು ಮತ್ತೊಂದು ಮಗ್ಗಲಿಗೆ ಟರ್ನ್ ಆಗುವಂತೆ ಮಾಡುತ್ತಿದ್ದಾರೆ.

ಕೊಪ್ಪ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗ ಒಂದರಲ್ಲಿ ನಿರ್ಮಿತವಾಗಿರುವ ಕಟ್ಟಡ ಒಂದನ್ನು ಡೆಮಾಲಿಷ್ ಮಾಡಲು ಹೋದ ಸಂದರ್ಭದಲ್ಲಿ, ಸ್ಥಳೀಯ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಗೌಡ ಹಾಗೂ ತಹಸಿಲ್ದಾರ್ ಲಿಖಿತ ಮೋಹನ್ ಮಧ್ಯೆ ವಾಕ್ ಸಮರ ನಡೆದಿತ್ತು. ಇದಾದ ನಂತರ ತಹಶೀಲ್ದಾರ್ ತಮ್ಮ ಸರ್ಕಾರಿ ವಾಹನವನ್ನು ವೈಯಕ್ತಿಕ ಉಪಯೋಗಗಳಿಗೆ ಬಳಸಿಕೊಳ್ಳುತ್ತಿದ್ದಾರೆಂದು ಮಂಜುನಾಥ್ ಗೌಡ ಆರೋಪಿಸಿದಾಗ,  ಅವರ ನಡುವಿನ ಕಂದಕ ಇನ್ನಷ್ಟು ಹೆಚ್ಚಿತ್ತು. ಇದೆಲ್ಲವುದರ ಪರಿಣಾಮ, ತಹಸಿಲ್ದಾರ್ ಲಿಖಿತ ಮೋಹನ್ ಖುದ್ದಾಗಿ ಮಂಜುನಾಥ್ ಗೌಡ ಮೇಲೆ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಜಾಮೀನು ಮಂಜೂರಿ ಮಾಡಿದ್ದರು, ತಹಸಿಲ್ದಾರ್ ಲಿಖಿತಮೋಹನ್ ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಮಂಜುನಾಥ್ ಗೌಡಗೆ ಜಾಮೀನು ಸಿಗದಂತೆ ಮಾಡಿದ್ದಾರೆ ಅನ್ನುವುದು ಸ್ಥಳೀಯರ ಆರೋಪ. ಬಹುಶಹ ಇದು ರಾಜಕೀಯ ತಿರುವನ್ನು ತೆಗೆದುಕೊಳ್ಳುವ ಸಂಭವ ಜಾಸ್ತಿ ಇದೆ. ತಾಸಿಲ್ದಾರ್ ಲಿಖಿತ ಮೋಹನ್ ಒಂದಿಷ್ಟು ಬುದ್ಧಿವಂತಿಕೆ ಉಪಯೋಗಿಸಬಹುದಿತ್ತು . ಬದಲಿಗೆ ಅವರು ದೊಡ್ಡತನವನ್ನು ಮೆರೆದಿದ್ದಾರೆ ಮೇಲ್ನೋಟಕ್ಕೆ ತಹಸಿಲ್ದಾರ್ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಂತೆ ಕಾಣುತ್ತಿದೆ ಎನ್ನುವುದು ಸ್ಥಳೀಯರ ಹೇಳಿಕೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
“ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”