📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತಹಸಿಲ್ದಾರ್ ಇದೀಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ, ವೈಯಕ್ತಿಕ ದ್ವೇಷಕ್ಕೆ ತಮ್ಮ ಹುದ್ದೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಚಾರವಾಗಿ, ಪ್ರತಿಭಟನೆಯನ್ನು ಎದುರಿಸುತ್ತಿದ್ದಾರೆ.

ಸ್ಥಳೀಯ ಬಿಜೆಪಿಯ ಕಾರ್ಯಕರ್ತ ಮಂಜುನಾಥ್ ಗೌಡ ,ತಹಶೀಲ್ದಾರ್ ಅವರ ಕೆಂಗಣ್ಣಿಗೆ ಗುರಿಯಾಗಿ ಇದೀಗ ಜೈಲಿಗೆ ಸೇರುವಂತಾಗಿದೆ ಅನ್ನುವುದು ಇಲ್ಲಿನ ರೈತ ಸಂಘದವರ ಆರೋಪ ಹಾಗೂ ಇದೇ ಕಾರಣಕ್ಕೆ ಅವರು ತಹಸಿಲ್ದಾರ್ ವಿರುದ್ಧ ಪ್ರತಿಭಟನೆಯನ್ನೂ ಮಾಡುತ್ತಿದ್ದಾರೆ.

ತಹಸಿಲ್ದಾರ್ ಲಿಖಿತ ಮೋಹನ್ ಎಂಬುವರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಗೌಡ ಎಂಬವರ ನಡುವೆ ಕಳೆದ ಕೆಲವು ಸಮಯಗಳಿಂದ ಒಂದಷ್ಟು ಇಂಟರ್ನಲ್ ಗುದ್ದಾಟಗಳು ನಡೆದದ್ದು ಸುಳ್ಳಲ್ಲ. ಈ ಇಂಟರ್ನಲ್ ಗುದ್ದಾಟಗಳ ವಿಚಾರವನ್ನು ಸೀರಿಯಸ್ಸಾಗಿ ತೆಗೆದುಕೊಂಡ ತಹಸಿಲ್ದಾರ್ ಲಿಖಿತ ಮೋಹನ್, ಮಂಜುನಾಥ್ ಗೌಡರ ವಿರುದ್ಧ ದೂರು ದಾಖಲಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಆ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾದ ಕಾರಣ, ಮಂಜುನಾಥಗೌಡ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಹಾಕುತ್ತಾರೆ. ಕೇಳ ನ್ಯಾಯಾಲಯದಲ್ಲಿ ಅದು ತಿರಸ್ಕೃತವಾದ ಕಾರಣ, ಮೇಲಿನ ನ್ಯಾಯಾಲಯದಕ್ಕೆ ಮಂಜುನಾಥ್ ಗೌಡ ಅಪಿಲ್ ಹೋಗುತ್ತಾರೆ. ಅಲ್ಲಿ ಮಂಜುನಾಥ್ ಗೌಡನ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಜಾಮೀನು ಮಂಜೂರಿ ಮಾಡುತ್ತದೆ. ಹಾಗೆಯೇ ತಹಸಿಲ್ದಾರ್ ಸಮ್ಮುಖದಲ್ಲಿ ಶೂರಿಟಿ ನೀಡುವಂತೆ ಹೇಳಿರುತ್ತದೆ.

ಅದರಂತೆಯೇ ಮಂಜುನಾಥ್ ಗೌಡ ತಹಸಿಲ್ದಾರ್ ಮುಂದೆ ಮೂರು ಲಕ್ಷದ ಶೂರಿಟಿ ನೀಡುತ್ತಾರೆ.  ಇಬ್ಬರು ಸರ್ಕಾರಿ ನೌಕರರಿಂದ ಶುರಿಟಿ ಕೇಳಲಾಗುತ್ತದೆ. ಅದಕ್ಕೂ ಸಹ ಮಂಜುನಾಥ್ ಗೌಡ, ಇಬ್ಬರು ಸರ್ಕಾರಿ ನೌಕರರನ್ನು ಕರೆದೊಯ್ಯುತ್ತಾರೆ. ಅದನ್ನು ಒಪ್ಪಿಕೊಳ್ಳದ ತಹಶೀಲ್ದಾರ್ ಲಿಖಿತ ಮೋಹನ್, A ಗ್ರೇಡ್ ಅಧಿಕಾರಿಗಳ ಶೂರೀಟಿಯೇ ಬೇಕು ಅಂತ ಪಟ್ಟು ಹಿಡಿದ ಕಾರಣ, ಮಂಜುನಾಥ್ ಗೌಡಗೆ ಅದನ್ನು ಪೂರೈಸಲು ಆಗಿಲ್ಲ. ಹಾಗಾಗಿ ಮಂಜುನಾಥ್ ಗೌಡ ಸೀದಾ ಜೈಲಿಗೆ ಹೋಗಿದ್ದಾರೆ. ಇದರಿಂದ ಕೆರಳಿದ ಸ್ಥಳೀಯ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆಗೆ ಮುಂದಾಗಿದ್ದಾರೆ. ತಹಸಿಲ್ದಾರ್ ತಮ್ಮ ಇತಿಮಿತಿಯನ್ನು ಮೀರಿ ಮತ್ತು ತಮ್ಮ ಹುದ್ದೆಯನ್ನೂ ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ಈ ಪ್ರಕರಣವು ಮತ್ತೊಂದು ಮಗ್ಗಲಿಗೆ ಟರ್ನ್ ಆಗುವಂತೆ ಮಾಡುತ್ತಿದ್ದಾರೆ.

ಕೊಪ್ಪ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗ ಒಂದರಲ್ಲಿ ನಿರ್ಮಿತವಾಗಿರುವ ಕಟ್ಟಡ ಒಂದನ್ನು ಡೆಮಾಲಿಷ್ ಮಾಡಲು ಹೋದ ಸಂದರ್ಭದಲ್ಲಿ, ಸ್ಥಳೀಯ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಗೌಡ ಹಾಗೂ ತಹಸಿಲ್ದಾರ್ ಲಿಖಿತ ಮೋಹನ್ ಮಧ್ಯೆ ವಾಕ್ ಸಮರ ನಡೆದಿತ್ತು. ಇದಾದ ನಂತರ ತಹಶೀಲ್ದಾರ್ ತಮ್ಮ ಸರ್ಕಾರಿ ವಾಹನವನ್ನು ವೈಯಕ್ತಿಕ ಉಪಯೋಗಗಳಿಗೆ ಬಳಸಿಕೊಳ್ಳುತ್ತಿದ್ದಾರೆಂದು ಮಂಜುನಾಥ್ ಗೌಡ ಆರೋಪಿಸಿದಾಗ,  ಅವರ ನಡುವಿನ ಕಂದಕ ಇನ್ನಷ್ಟು ಹೆಚ್ಚಿತ್ತು. ಇದೆಲ್ಲವುದರ ಪರಿಣಾಮ, ತಹಸಿಲ್ದಾರ್ ಲಿಖಿತ ಮೋಹನ್ ಖುದ್ದಾಗಿ ಮಂಜುನಾಥ್ ಗೌಡ ಮೇಲೆ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಜಾಮೀನು ಮಂಜೂರಿ ಮಾಡಿದ್ದರು, ತಹಸಿಲ್ದಾರ್ ಲಿಖಿತಮೋಹನ್ ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಮಂಜುನಾಥ್ ಗೌಡಗೆ ಜಾಮೀನು ಸಿಗದಂತೆ ಮಾಡಿದ್ದಾರೆ ಅನ್ನುವುದು ಸ್ಥಳೀಯರ ಆರೋಪ. ಬಹುಶಹ ಇದು ರಾಜಕೀಯ ತಿರುವನ್ನು ತೆಗೆದುಕೊಳ್ಳುವ ಸಂಭವ ಜಾಸ್ತಿ ಇದೆ. ತಾಸಿಲ್ದಾರ್ ಲಿಖಿತ ಮೋಹನ್ ಒಂದಿಷ್ಟು ಬುದ್ಧಿವಂತಿಕೆ ಉಪಯೋಗಿಸಬಹುದಿತ್ತು . ಬದಲಿಗೆ ಅವರು ದೊಡ್ಡತನವನ್ನು ಮೆರೆದಿದ್ದಾರೆ ಮೇಲ್ನೋಟಕ್ಕೆ ತಹಸಿಲ್ದಾರ್ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಂತೆ ಕಾಣುತ್ತಿದೆ ಎನ್ನುವುದು ಸ್ಥಳೀಯರ ಹೇಳಿಕೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
 ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
ಕೊನೆಗೂ ಸೋತ ಖಾಕಿ….!!!
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ