📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

    ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳೊಂದಿಗಿನ  ಕರಾರು ಒಪ್ಪಂದ ರದ್ದುಗೊಳಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು,, ಸರಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ,  ಸರಕಾರಿ ಆಸ್ಪತ್ರೆಗಳ ಬಲಪಡಿಸಿ ಖಾಸಗೀ ಆಸ್ಪತ್ರೆಗಳನ್ನು ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಆಯೋಜಿಸಿದ ಉಸ್ತುವಾರಿ ಕಚೇರಿ ಚಲೋ ಹೆಸರಿನಲ್ಲಿ ಹೋರಾಟ ನಡೆಯಿತು..

    ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಕಳೆದ ಹಲವು ವರುಷಗಳಿಂದ ಸಂಘಟನೆ ಇಟ್ಟಿರುವ ಬೇಡಿಕೆಯನ್ನು ರಾಜ್ಯದ ಕಾಂಗ್ರೇಸ್ ಸರಕಾರ ಕಡೆಗಣಿಸಿದೆ . ಆರೋಗ್ಯ ಇಲಾಖೆ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗೀ ಆಸ್ಪತ್ರೆಗಳ ಲಾಭಿಗೆ ಶರಣಾಗಿದೆ. ವಿರೋಧ ಪಕ್ಷ ಬಿಜೆಪಿ ಕೂಡ ಈ ಬಗ್ಗೆ ಮೌನ ವಹಿಸಿದ್ದು. ಜಿಲ್ಲೆಯ ಕಾಂಗ್ರೇಸ್ ಮತ್ತು ಬಿಜೆಪಿ ಖಾಸಗೀ ಆಸ್ಪತ್ರೆಗಳ ಲಾಭಿಯ ಬಗೆಗೆ ಒಂದೇ ತರವಾದ ಒಲವನ್ನು ಹೊಂದಿಕೊಂಡಿದೆ. ಡಿವೈಎಫ್ಐ ಮುಂದಿಟ್ಟಿರುವ ಬೇಡಿಕೆ ಈಡೇರುವವರೆಗೂ ಚಳುವಳಿ ಮುನ್ನಡೆಯಲಿದೆ ಎಂದರು.

    ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡುತ್ತಾ, ಜಿಲ್ಲೆಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲೇ ಹೃದಯ ಮತ್ತು ಕ್ಯಾನ್ಸರ್ ಕಾಯಿಲೆಗಳಿಗೆ ಒಳಗಾದವರ ದಾಖಲಾತಿಯು ಒಂದೇ ವರುಷದಲ್ಲಿ ನೂರುಪಟ್ಟು ಹೆಚ್ಚಳಗೊಂಡಿದೆ.  ಇಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ರೀತಿಯ ಸಕಲ ಸೌಲಭ್ಯವನ್ನು ಹೊಂದಿರುವಂತಹ ಆಸ್ಪತ್ರೆಗಳ ಬೇಡಿಕೆ ಇದ್ದರೂ, ಆರೋಗ್ಯ ಮಂತ್ರಿ ಜಿಲ್ಲೆಯ ಜನರ ಆರೋಗ್ಯದ ಹಕ್ಕನ್ನು ಕಡೆಗಣಿಸಿದ್ದಾರೆ. ಸರಕಾರಿ ಆಸ್ಪತ್ರೆ ಬಲಪಡಿಸಲು ನಡೆಸುವ ಹೋರಾಟಗಳಿಗೆ ಅನುಮತಿ ನಿರಾಕರಿಸುವ ಮೂಲಕ ಹತ್ತಿಕ್ಕಲು ಮಾಡಿರುವ ಪ್ರಯತ್ನದಿಂದ ಡಿವೈಎಫ್ಐ ಹಿಂದೆ ಸರಿಯೋದಿಲ್ಲ. ಜನರ ಆರೋಗ್ಯ ಹಕ್ಕನ್ನು ಖಾತ್ರಿಪಡಿಸಲು ಆರೋಗ್ಯ ಮಂತ್ರಿ ಗುಂಡುರಾವ್ಗೆ ಸಾದ್ಯವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ತೊಲಗಿ ಬಿಡಲಿ ಎಂದು ಆಕ್ರೋಶದಿಂದ ಮಾತನಾಡಿದರು

    ಪ್ರತಿಭಟನಾ ಪಾದಯಾತ್ರೆಯನ್ನು ಹಿರಿಯ ವಿಚಾರವಾದಿ ಪ್ರೋ ನರೇಂದ್ರ ನಾಯಕ್ ಚಾಲನೆ ನೀಡಿದರು. ಸರಕಾರಿ ವೆನ್ಲಾಕ್ ಆಸ್ಪತ್ರೆಯಿಂದ ಚಾಲನೆಗೊಂಡ ಯುವಜನರ ನಡಿಗೆಯು ಖಾಸಗೀ ಆಸ್ಪತ್ರೆಗಳ ಕಾರಿಡಾರ್ ಅಥೆನಾ, ಇಂದಿರಾ, ಯುನಿಟಿ, ಹೈಲ್ಯಾಂಡ್ ಆಸ್ಪತ್ರೆಗಳ ಮುಂಭಾಗದಿಂದ ಸಾಗಿತು. ಉಸ್ತುವಾರಿ ಮಂತ್ರಿಗಳ ಕಚೇರಿ ತಲುಪುವ ಮೊದಲೇ ಪೊಲೀಸರು ಯುವಜನರ ನಡಿಗೆಯನ್ನು ತಡೆಯಲು ಪ್ರಯತ್ನಿಸಿದರು. ಪೊಲೀಸರ ಮತ್ತು ಹೋರಾಟಗಾರರ ನಡುವೆ ತಿಕ್ಕಾಟ ನಡೆದು ಡಿವೈಎಫ್ಐ ನಾಯಕರು ಸಹಿತ ನೂರಾರು ಕಾರ್ಯಕರ್ತರನ್ನು ಬಂಧಿಸಿದರು. ಬಂಧನದ ವೇಳೆ ಪ್ರತಿಭಟನಾಕಾರರು ಉಸ್ತುವಾರಿ ಮಂತ್ರಿ ದಿನೇಶ್ ಗುಂಡುರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ಮನೋಜ್ ವಾಮಂಜೂರು, ನಿತಿನ್ ಕುತ್ತಾರ್, ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಅಶ್ರಫ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗರೆ, ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಬಿ.ಎಮ್ ಭಟ್, ಶಶಿಧರ್ ಶಕ್ತಿನಗರ, ಮಹಿಳಾ ಸಂಘಟನೆಯ ಮುಖಂಡರಾದ ಕಿರಣ ಪ್ರಭಾ, ಪ್ರಮಿಳಾ ಶಕ್ತಿನಗರ, ಅಸುಂತ ಡಿಸೋಜ, ರೋಹಿಣಿ ಜಲ್ಲಿಗುಡ್ಡೆ, ದಲಿತ ಹಕ್ಕುಗಳ ಸಮಿತಿಯ ಕೃಷ್ಣ ತಣ್ಣೀರುಬಾವಿ, ಕೃಷ್ಣ ಇನ್ನಾ, ಸಮುದಾಯದ ವಾಸುದೇವ ಉಚ್ಚಿಲ, ರಮೇಶ್ ಉಳ್ಳಾಲ, ಮಹಾಬಲ ಟಿ ದೆಪ್ಪೆಲಿಮಾರ್, ಶೇಖರ್ ಕುಂದರ್, ಇಬ್ರಾಹಿಂ ಮದಕ, ಅಬೂಬಕ್ಕರ್ ಜಲ್ಲಿ, ನಾಸಿರ್ ಬಾಸ್, ಬಿಲಾಲ್ , ಸುನೀಲ್ ತೇವುಲ, ಶ್ರೀನಾಥ್ ಕಾಟಿಪಳ್ಳ, ಮಕ್ಸೂದು ಸುರತ್ಕಲ್, ಅಜ್ಮಲ್ ಕಾನ, ತಸ್ರೀಫ್ ಬೆಂಗರೆ, ನೌಶದ್ ಬೆಂಗರೆ, ಯಶ್ ರಾಜ್ ಬಜಾಲ್, ದಿರಾಜ್ ಬಜಾಲ್, ದೀಪಕ್ ಬಜಾಲ್ , ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ ಭಟ್, ಅಭಿಶೇಕ್ ಬೆಳ್ತಂಗಡಿ, ನಝೀರ್ ಕಕ್ಕಿಂಜೆ, ರಜಾಕ್ ಮೊಂಟೆಪದವು, ಸಂಕೇತ್ ಕುತ್ತಾರ್ , ಅಲೆಮಾರಿ ಸಮುದಾಯದ ವೆಂಕಟೇಶ್, ಲಕ್ಷ್ಮಣ ಮುಂತಾದವರು ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ಸಾರ್ವಜನಿಕರಲ್ಲಿ ವಿನಂತಿ …!
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..