📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..

ಇತ್ತೀಚೆಗೆ ಚಿನ್ನದ ಬೆಲೆ ಹಿಂದೆಂದೂ ಕಾಣದ ರೀತಿಯಲ್ಲಿ ಗಗನಕ್ಕೇರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು, ಶ್ರಮವಿಲ್ಲದೆ ಕೋಟ್ಯಾಧಿಪತಿಗಳಾಗಲು ಕಳ್ಳತನವನ್ನೇ ಒಂದು ಫುಲ್-ಟೈಮ್ ಬಿಸಿನೆಸ್ (ಅಕ್ರಮ ವ್ಯವಹಾರ) ಮಾಡಿಕೊಂಡಿದ್ದಾರೆ! ಚಿನ್ನದ ದರ ಏರುತ್ತಿರುವ ಈ ಟ್ರೆಂಡ್ ಅನ್ನೇ ನಂಬಿ, ಇದನ್ನೇ ತಮ್ಮ ‘ಇನ್ವೆಸ್ಟ್‌ಮೆಂಟ್ ಪ್ಲಾನ್’ ಮಾಡಿಕೊಂಡಿದ್ದ ಖತರ್ನಾಕ್ ಬೆಂಗಳೂರು ಮೂಲದ ದಂಪತಿಯನ್ನು ಕುಣಿಗಲ್ ಪೊಲೀಸರು ಸಿನಿಮಾ ಸ್ಟೈಲ್‌ನಲ್ಲಿ ಹೆಡೆಮುರಿ ಕಟ್ಟಿದ್ದಾರೆ.

ಮೇ 29 ರಂದು ಕುಣಿಗಲ್‌ನ ಹೌಸಿಂಗ್ ಬೋರ್ಡ್ ಕಾಲೋನಿಯ ರಿಜ್ವಾನ್ ಎಂಬುವವರ ಮನೆಯಲ್ಲಿ ಇಡೀ ಪ್ಲಾನ್ ಎಕ್ಸಿಕ್ಯೂಟ್ ಆಗಿತ್ತು. ರಿಜ್ವಾನ್ ಅವರು ಹೊಸ ನಿವೇಶನ (ಸೈಟ್) ಖರೀದಿಸಲು ಕಷ್ಟಪಟ್ಟು ಕೂಡಿಟ್ಟಿದ್ದ ಹಣ ಮತ್ತು ಚಿನ್ನವನ್ನು ಮನೆಯಲ್ಲಿ ಇಟ್ಟಿದ್ದರು. ಚಿನ್ನದ ಬೆಲೆ ಪೀಕ್‌ನಲ್ಲಿರುವ ಈ ಸಮಯವನ್ನೇ ಹೊಂಚು ಹಾಕಿದ ಬೆಂಗಳೂರಿನ ರಾಮಚಂದ್ರಾಪುರದ ಮಂಜುನಾಥ್ ಮತ್ತು ಅನಿತಾ ದಂಪತಿ, ಮನೆ ಬೀಗ ಮುರಿದು ಕ್ಷಣಾರ್ಧದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ದೋಚಿ ಪರಾರಿಯಾಗಿದ್ದರು.

ಖತರ್ನಾಕ್ ಕಿಂಗ್‌ಪಿನ್ ಮಂಜುನಾಥ್: ಈತ ಸಾಮಾನ್ಯ ಕಳ್ಳನಲ್ಲ, ಕಳ್ಳತನದ ಲೋಕದ ಪಿಎಚ್‌ಡಿ ಹೋಲ್ಡರ್! ಈತನ ಮೇಲೆ ಈಗಾಗಲೇ ಬರೋಬ್ಬರಿ 35 ಕಳವು ಪ್ರಕರಣಗಳು ದಾಖಲಾಗಿವೆ ಎಂದರೆ ಈತನ “ನೆಟ್‌ವರ್ಕ್” ಮತ್ತು “ಎಕ್ಸ್‌ಪೀರಿಯೆನ್ಸ್” ಎಷ್ಟಿರಬಹುದು ಊಹಿಸಿ…!

ಸಾಮಾನ್ಯವಾಗಿ ಗಂಡ ತಪ್ಪು ದಾರಿ ಹಿಡಿದರೆ ಹೆಂಡತಿ ಬುದ್ಧಿ ಹೇಳುತ್ತಾಳೆ, ಆದರೆ ಇಲ್ಲಿ ಸೀನ್ ಉಲ್ಟಾ ಇತ್ತು. ಗಂಡ ಕಷ್ಟಪಟ್ಟು ಕನ್ನ ಹಾಕಿ ತರುತ್ತಿದ್ದ ಒಡವೆಗಳನ್ನು, ಇಂದಿನ ಬಂಗಾರದ ಗರಿಷ್ಠ ದರಕ್ಕೆ ಮಾರ್ಕೆಟ್‌ನಲ್ಲಿ ಮಾರಿ ಅಥವಾ ಅಡವಿಟ್ಟು ಐಷಾರಾಮಿ ಜೀವನ ನಡೆಸುವುದು ಪತ್ನಿ ಅನಿತಾಳ ಮುಖ್ಯ ಕೆಲಸವಾಗಿತ್ತು. ಅಂದರೆ, ಇದೊಂದು ಪಕ್ಕಾ ವೆಲ್-ಪ್ಲಾನ್ಡ್ “ಫ್ಯಾಮಿಲಿ ಬಿಸಿನೆಸ್” ತರಹ ನಡೆದುಕೊಂಡು ಬರುತ್ತಿತ್ತು., ಲಕ್ಸುರಿ ಲೈಫ್ ಲೀಡ್ ಮಾಡುತ್ತಿದ್ದ “ಬಿಸಿನೆಸ್ ಪಾರ್ಟ್ನರ್” ಈಕೆ.

ಆದರೆ, ಈ ಖದೀಮ ಜೋಡಿಯ ಆಟ ಸದಾ ನಡೆಯಲಿಲ್ಲ. 35 ಕೇಸ್‌ಗಳಲ್ಲಿ ಪೊಲೀಸರ ಕಣ್ಣು ತಪ್ಪಿಸಿದ್ದ ಈ ಜೋಡಿಯನ್ನು, ಕುಣಿಗಲ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿ ಈ ದಂಪತಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಬರೋಬ್ಬರಿ 25 ಲಕ್ಷ ರೂಪಾಯಿ ನಗದು, ಇಂದಿನ ಪೀಕ್ ರೇಟ್‌ನಲ್ಲಿ ಭಾರಿ ಮೌಲ್ಯ ಬಾಳುವ 31 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನದ ಬೆಲೆ ಏರಿದಂತೆ ಕಳ್ಳರ ಹಸಿವು ಮತ್ತು ಅವರ ಅಕ್ರಮ ಬಿಸಿನೆಸ್ ಹೇಗೆ ಸ್ಕೇಲ್ ಅಪ್ ಆಗುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ!

ಕಷ್ಟಪಟ್ಟು ಸಂಪಾದಿಸಿದ ಹಣ, ಒಡವೆಗಳನ್ನು ಮನೆಯಲ್ಲಿಡುವಾಗ ಸಾರ್ವಜನಿಕರು ಹತ್ತು ಬಾರಿ ಯೋಚಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸದ್ಯಕ್ಕಂತೂ ಈ “ಖತರ್ನಾಕ್ ಬಿಸಿನೆಸ್ ಜೋಡಿ” ಕಂಬಿ ಎಣಿಸುತ್ತಿದೆ!

##ತುಮಕೂರುಬ್ರೇಕಿಂಗ್ #ಕ್ರೈಂಸುದ್ದಿ #ಚಿನ್ನದಬೆಲೆ #ಕುಣಿಗಲ್ #ಕಳ್ಳದಂಪತಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ಭೀಕರ ಅಪಘಾತ ಮಹಿಳೆ ಬಲಿ
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು