📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !

ಅಹಮದಾಬಾದ್, ಗುಜರಾತ್

ಒಂದೆಡೆ ಭಕ್ತಿಗೀತೆಗಳ ಮೊಳಗು… ಮತ್ತೊಂದೆಡೆ ಗಾಳಿಯಲ್ಲಿ ಹಾರಾಡುತ್ತಿದ್ದ ಸಾವಿರಾರು ರೂಪಾಯಿ ನೋಟುಗಳು! ಕ್ಷಣಕ್ಷಣಕ್ಕೂ ಹೆಚ್ಚುತ್ತಿದ್ದ ಹಣದ ಮಳೆಯ ನಡುವೆ ಹಾಡು ನಿಲ್ಲಿಸದೆ ಮುಂದುವರಿಸಿದ ಜಾನಪದ ಗಾಯಕ ಗೋಪಾಲ್ ಸಾಧು ಈಗ ದೇಶದಾದ್ಯಂತ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ.

ಗುಜರಾತ್‌ನ ಸೌರಾಷ್ಟ್ರ ಭಾಗದಲ್ಲಿ ಪ್ರಸಿದ್ಧಿಯಾದ ಸಾಂಪ್ರದಾಯಿಕ ‘ಡಾಯೋ’ ಕಾರ್ಯಕ್ರಮದ ವೇಳೆ ಈ ಅಚ್ಚರಿಯ ಘಟನೆ ನಡೆದಿದೆ. ಗೋಪಾಲ್ ಸಾಧು ಅವರು ವೇದಿಕೆಯಲ್ಲಿ ಭಕ್ತಿಗೀತೆ ಹಾಡುತ್ತಿದ್ದಾಗ, ಅಭಿಮಾನಿಗಳು ಗೋಣಿಚೀಲಗಳಲ್ಲಿ ತುಂಬಿಕೊಂಡು ಬಂದ ನೋಟುಗಳನ್ನು ಅವರ ಮೇಲೆಯೇ ಸುರಿಸಿದರು. ಕೆಲವೇ ಕ್ಷಣಗಳಲ್ಲಿ ಗಾಯಕರು ನೋಟುಗಳ ರಾಶಿಯೊಳಗೆ ಕಾಣೆಯಾಗುವ ಮಟ್ಟಿಗೆ ಹಣ ಕಲೆಹಾಕಲ್ಪಟ್ಟಿತ್ತು. ಆದರೂ ಅವರು ಯಾವುದೇ ವ್ಯತ್ಯಯವಿಲ್ಲದೆ ಹಾಡನ್ನು ಮುಂದುವರಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಯಿತು.

ಈ ದೃಶ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು “ಇದು ಹಣದ ಅಹಂಕಾರದ ಪ್ರದರ್ಶನ” ಎಂದು ಟೀಕಿಸಿದರೆ, ಇನ್ನೂ ಕೆಲವರು “ಇದು ಕಲೆಗೆ ಹಾಗೂ ಭಕ್ತಿಗೆ ಸಲ್ಲಿಸುವ ಗೌರವದ ಸಂಕೇತ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ಡಾಯೋ’ ಎನ್ನುವುದು ಕೇವಲ ಮನರಂಜನೆ ಅಲ್ಲ; ಅದು ಗುಜರಾತ್‌ನ ಜನಪದ ಸಂಸ್ಕೃತಿಯ ಪ್ರತಿಬಿಂಬ. ಭಕ್ತಿಗೀತೆಗಳು, ಧಾರ್ಮಿಕ ಪ್ರವಚನಗಳು, ಐತಿಹಾಸಿಕ ಕಥನಗಳು ಮತ್ತು ಹಾಸ್ಯಪ್ರದರ್ಶನಗಳ ಸಂಯೋಜನೆಯಾದ ಈ ಕಲಾರೂಪದಲ್ಲಿ, ಕಲಾವಿದರ ಮೆಚ್ಚುಗೆಯ ಸೂಚಕವಾಗಿ ಹಣ ಸುರಿಸುವ ಪದ್ಧತಿ ವರ್ಷಗಳಿಂದ ನಡೆದುಬಂದಿದೆ.

ಜುನಾಗಢ ಜಿಲ್ಲೆಯ ಖಂಭಾಲಿಯಾ ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಗ್ರಹವಾದ ಲಕ್ಷಾಂತರ ರೂಪಾಯಿ ಹಣ ಗಾಯಕನ ವೈಯಕ್ತಿಕ ಬಳಕೆಗೆ ಹೋಗುವುದಿಲ್ಲ ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದ ಖರ್ಚು-ವೆಚ್ಚಗಳನ್ನು ನಿರ್ವಹಿಸಿದ ಬಳಿಕ ಉಳಿಯುವ ಮೊತ್ತವನ್ನು ಅಹಿರ್ ಚಾರಿಟೇಬಲ್ ಟ್ರಸ್ಟ್‌ಗೆ ದೇಣಿಗೆಯಾಗಿ ನೀಡಲಾಗುತ್ತದೆ ಎಂದು ಸಂಘದವರು ತಿಳಿಸಿದ್ದಾರೆ.

ಸಂಪ್ರದಾಯವೇ? ಅಥವಾ ಅತಿರೇಕದ ಹಣದ ಪ್ರದರ್ಶನವೇ? — ಗೋಪಾಲ್ ಸಾಧು ಅವರ ಮೇಲೆ ಸುರಿದ ಈ “ನೋಟುಗಳ ಮಳೆ” ಈಗ ದೇಶವ್ಯಾಪಿ ಚರ್ಚೆಗೆ ಹೊಸ ಕಿಡಿ ಹಚ್ಚಿದೆ.

##GopalSadhu #MoneyRain #DayroProgram #GujaratTradition #ViralVideo #FolkSinger #BhaktiSongs #TrendingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಸಾರ್ವಜನಿಕರಲ್ಲಿ ವಿನಂತಿ …!
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ