📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!

ದೇಶವೇ ಮೆಚ್ಚಿದ ಉಡುಪಿ ಗ್ರಾಮಗಳು; ಪಂಚಾಯತ್ ಆಡಳಿತಕ್ಕೆ ರಾಷ್ಟ್ರೀಯ ಮುದ್ರೆ!

ಉಡುಪಿ ಜಿಲ್ಲೆ ಮತ್ತೊಮ್ಮೆ ತನ್ನ ಅಭಿವೃದ್ಧಿ ಮಾದರಿಯನ್ನು ದೇಶದ ಮುಂದೆ ಸಾಬೀತುಪಡಿಸಿದೆ. ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ 2025 ಅಡಿಯಲ್ಲಿ ಕರ್ನಾಟಕಕ್ಕೆ ಲಭಿಸಿದ 6 ಪ್ರಶಸ್ತಿಗಳ ಪೈಕಿ 5 ಪ್ರಶಸ್ತಿಗಳು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಲಭಿಸಿರುವುದು ಜಿಲ್ಲೆಯ ಇತಿಹಾಸದಲ್ಲೇ ಅಪರೂಪದ ಸಾಧನೆಯಾಗಿದೆ. ದೇಶದಾದ್ಯಂತ ಆಯ್ಕೆಯಾದ ಕೇವಲ 42 ಪಂಚಾಯಿತಿಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯಿತಿಗಳು ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. 

ಈ ರಾಷ್ಟ್ರೀಯ ಗೌರವ ಪಡೆದ ಗ್ರಾಮ ಪಂಚಾಯಿತಿಗಳು:
✅ ಮುದ್ರಾಡಿ ಗ್ರಾಮ ಪಂಚಾಯಿತಿ (ಹೆಬ್ರಿ)
✅ ಮಡಾಮಕ್ಕಿ ಗ್ರಾಮ ಪಂಚಾಯಿತಿ (ಹೆಬ್ರಿ)
✅ ವಂಡ್ಸೆ ಗ್ರಾಮ ಪಂಚಾಯಿತಿ (ಕುಂದಾಪುರ)
✅ ಹಕ್ಲಾಡಿ ಗ್ರಾಮ ಪಂಚಾಯಿತಿ (ಕುಂದಾಪುರ)
✅ ಸಾಣೂರು ಗ್ರಾಮ ಪಂಚಾಯಿತಿ (ಕಾರ್ಕಳ) 

ಮುದ್ರಾಡಿ ಗ್ರಾಮ ಪಂಚಾಯಿತಿಯು “ಬಡತನ ಮುಕ್ತ ಹಾಗೂ ಜೀವನೋಪಾಯ ವೃದ್ಧಿ ಪಂಚಾಯಿತಿ” ವಿಭಾಗದಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದು ₹1 ಕೋಟಿ ನಗದು ಬಹುಮಾನ ತನ್ನದಾಗಿಸಿಕೊಂಡಿದೆ. ಗ್ರಾಮೀಣ ಜನರ ಆರ್ಥಿಕ ಸಬಲೀಕರಣ, ಸ್ವಯಂ ಉದ್ಯೋಗ, ಕೃಷಿ ಅಭಿವೃದ್ಧಿ ಮತ್ತು ಜೀವನಮಟ್ಟ ಸುಧಾರಣೆಯಲ್ಲಿ ತೋರಿದ ಸಾಧನೆಗೆ ಈ ಗೌರವ ದೊರೆತಿದೆ. 

ವಂಡ್ಸೆ ಗ್ರಾಮ ಪಂಚಾಯಿತಿ ಆರೋಗ್ಯಕರ ಪಂಚಾಯಿತಿ ವಿಭಾಗದಲ್ಲಿ, ಮಡಾಮಕ್ಕಿ ಗ್ರಾಮ ಪಂಚಾಯಿತಿ ನೀರಿನ ಸಮರ್ಪಕ ನಿರ್ವಹಣೆ ವಿಭಾಗದಲ್ಲಿ, ಹಕ್ಲಾಡಿ ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಹಾಗೂ ಸಾಮಾಜಿಕ ಭದ್ರತೆ ವಿಭಾಗದಲ್ಲಿ ಮತ್ತು ಸಾಣೂರು ಗ್ರಾಮ ಪಂಚಾಯಿತಿ ಸ್ವಾವಲಂಬಿ ಮೂಲಸೌಕರ್ಯ ವಿಭಾಗದಲ್ಲಿ ರಾಷ್ಟ್ರ ಮಟ್ಟದ ಮನ್ನಣೆ ಪಡೆದಿವೆ. 

ಈ ಪ್ರಶಸ್ತಿಗಳು ಕೇವಲ ಅಭಿವೃದ್ಧಿ ಕಾಮಗಾರಿಗಳಿಗೆ ಮಾತ್ರವಲ್ಲ. ಉತ್ತಮ ಆಡಳಿತ, ಮಹಿಳಾ ಸಬಲೀಕರಣ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ಸ್ವಚ್ಛತೆ, ಸಾಮಾಜಿಕ ಭದ್ರತೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಪರಿಣಾಮಕಾರಿ ಅನುಷ್ಠಾನವನ್ನು ಪರಿಗಣಿಸಿ ನೀಡಲಾಗುತ್ತದೆ. ಉಡುಪಿ ಜಿಲ್ಲೆಯ ಪಂಚಾಯಿತಿಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ತೋರಿರುವುದರಿಂದ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿವೆ. 

ಉಡುಪಿ ಜಿಲ್ಲೆ ಈಗಾಗಲೇ ಗ್ರಾಮೀಣ ಆಡಳಿತದಲ್ಲಿ ಮಾದರಿಯಾಗಿದ್ದು, ಪಂಚಾಯಿತಿ ಸಿಬ್ಬಂದಿಗೆ EPF ಮತ್ತು ESI ಸೌಲಭ್ಯಗಳನ್ನು ಸಂಪೂರ್ಣವಾಗಿ ಜಾರಿಗೊಳಿಸಿದ ಕರ್ನಾಟಕದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಈ ರೀತಿಯ ಆಡಳಿತ ದಕ್ಷತೆ ಮತ್ತು ಅಭಿವೃದ್ಧಿ ದೃಷ್ಟಿಕೋನವೇ ಇಂದಿನ ರಾಷ್ಟ್ರೀಯ ಸಾಧನೆಗೆ ಕಾರಣವಾಗಿದೆ. 

##GoodGovernance #India #KannadaNews #BreakingNews #ProudUdupi #NationalRecognition #VillageDevelopment #UdupiShines #KarnatakaNews #AwardWinningPanchayats#Udupi #NationalPanchayatAward #KarnatakaPride #GramPanchayat #RuralDevelopment #UdupiDistrict #Kundapura #Hebri #Karkala #PanchayatAwards #GoodGovernance #India #KannadaNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ