📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ಮತ್ತು ಶಶಿರಾಜ್ ಶೆಟ್ಟಿ ಇವರಿಬ್ಬರೂ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಮಗದೊಮ್ಮೆ ಸೇರ್ಪಡೆಗೊಂಡಿದ್ದಾರೆ 

ಯೋಗೇಶ್ ಶೆಟ್ಟಿ ಜೆಪ್ಪು ಹಾಗೂ ಶಶಿ ರಾಜ್ ಶೆಟ್ಟಿ ಇಬ್ಬರು ಜೆಡಿಎಸ್ ನಲ್ಲಿ ಈ ಹಿಂದೆ ಕೆಲಸ ಮಾಡಿದವರೇ ಆಗಿದ್ದಾರೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಸಕ್ರಿಯರಾಗಿದ್ದವರು, ಕಾರಣಾಂತರಗಳಿಂದ ಪಕ್ಷದಿಂದ ಹೊರಬಂದು ರಾಜಕಿಯೇತರ  ಸಂಘಟನೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿದ್ದರು.

ಯೋಗೀಶ್ ಶೆಟ್ಟಿ ಜೆಪ್ಪು ತುಳುನಾಡ ರಕ್ಷಣಾ ವೇದಿಕೆ ಎಂಬ ಸಂಘಟನೆಯನ್ನು ಅವಳಿ ಜಿಲ್ಲೆಯಾದ್ಯಂತ ಅಂದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾತ್ಯಂತ ಸಂಘಟಿಸಿ ಸಮಾಜದ ವಿವಿಧ ಸ್ಥರದ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಹೋರಾಟಗಳನ್ನು ಮಾಡುತ್ತಾ ಸಾರ್ವಜನಿಕವಾಗಿ ಚಾಲ್ತಿಯಲ್ಲಿದ್ದಂತಹ ವ್ಯಕ್ತಿಯನ್ನು ಜೆಡಿಎಸ್ ಪಕ್ಷದ ನಾಯಕರು, ಇವರ ಮನವೊಲಿಸಿ  ವಾಪಾಸ್ ಪಕ್ಷದ ಅಂಗಳಕ್ಕೆ ಕರೆದುಕೊಂಡು ಬಂದಿದ್ದಾರೆ.

ಮಾಜಿ ಜಿಲ್ಲಾಧ್ಯಕ್ಷ ಎಂ ಬಿ ಸದಾಶಿವ್ ಈ ಇಬ್ಬರು ನಾಯಕರನ್ನು ವಾಪಾಸ್ ಪಕ್ಷದ ಅಂಗಳಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಇವರನ್ನು ಬೆಂಗಳೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ಸ್ವತಹ ಮಾಜಿ ಮುಖ್ಯಮಂತ್ರಿ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಘರ್ ವಾಪ್ಸಿಯನ್ನಾಗಿ ಮಾಡಿಕೊಂಡಿದ್ದಾರೆ.

ಇವರು ಪಕ್ಷಕ್ಕೇನೋ ವಾಪಸ್ ಹೋಗಿದ್ದಾರೆ. ಪಕ್ಷದಲ್ಲಿ ಈಗಿರುವ ನಾಯಕರುಗಳಲ್ಲಿ ಬಹುತೇಕರು ಚೈತನ್ಯ ರಹಿತರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾವುದೇ ಜನಪರ ಹೋರಾಟ, ಜನರ ಪರವಾಗಿ ಧ್ವನಿ ಎತ್ತುವುದು, ವಿವಿಧ ಜನೋಪಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಇದು ಯಾವುದರಲ್ಲೂ ಕಾಣಿಸಿಕೊಳ್ಳದಂತವರು, ಕೇವಲ ಲೆಟರ್ ಹೆಡ್ ನಾಯಕರುಗಳಾಗಿ ಇರುವುದರಿಂದಾಗಿ ಜಿಲ್ಲೆಯಲ್ಲಿ ಪಕ್ಷಕ್ಕೆ ಆಕ್ಸಿಜನ್ನೇ ಇಲ್ಲದಂತಹ ಸ್ಥಿತಿ ಇದೆ. ಅವಳಿ ಜಿಲ್ಲೆಯಲ್ಲಿ ಮೂರನೇ ಪಕ್ಷದ ಅವಶ್ಯಕತೆ ಖಂಡಿತವಾಗಿಯೂ ಇದೆ ಎನ್ನುವುದು ಹಲವರ ಅಭಿಪ್ರಾಯ. ಆದರೆ ಇಲ್ಲಿನ ನಾಯಕರ  ನಿದ್ದಂಡಿತನ ಹಾಗೂ ರಿಸ್ಕ್ ತೆಗೆದುಕೊಳ್ಳುವಲ್ಲಿನ ಹಿಂಜರಿಕೆ ಇದೆಲ್ಲವುದರ ಪರಿಣಾಮ ಪಕ್ಷವು ಐಸಿಯು ನಲ್ಲಿದೆ. ಕಾರ್ಯಕರ್ತರಲ್ಲಿ ಹಿಂಜರಿಕೆ ಹಾಗೂ ಬ್ರಮನಿರಸನವಾದ ಕಾರಣ ಅನೇಕ ಕಾರ್ಯಕರ್ತರು ತಟಸ್ಥರಾಗಿದ್ದಾರೆ. ಇನ್ನು ಕೆಲವರು ಇತರ ಪಕ್ಷಗಳ ಬಾವುಟದಡಿಗೆ ಸಾಗಿ ಹೋಗಿದ್ದಾರೆ.

ಏನೇ ಇರಲಿ ಈಗ ಯೋಗೀಶ್ ಶೆಟ್ಟಿ ಜಪ್ಪುವಂತಹ ಚಟುವಟಿಕೆ ಯಲ್ಲಿರುವ ನಾಯಕರು ವಾಪಸ್ ಪಕ್ಷದ ಕಚೇರಿಗೆ ಬರುವಂತಾಗಿದ್ದಾರೆ. ಹಾಗಾಗಿ ಪಕ್ಷದ ಕಾರ್ಯಕರ್ತರಲ್ಲಿ ಏನೋ ಒಂದು ಆಶಾಭಾವನೆ ಮೂಡಿದೆ.

ಪಕ್ಷವು ಇಂತಹ ನಾಯಕರನ್ನು ಯೋಗ್ಯ ಕುರ್ಚಿಯಲ್ಲಿ ಕೂರಿಸುವ ಕೆಲಸ ಮಾಡಬೇಕು. ಗೌರವಯುತ ಸ್ಥಾನಮಾನ ನೀಡಿ ಅವರಿಂದ ಪಕ್ಷದ ಬೆಳವಣಿಗೆಯನ್ನು ನಿರೀಕ್ಷಿಸಬೇಕು. ಈ ಕೆಲಸ ರಾಜ್ಯ ಘಟಕವು ನಿರ್ವಹಿಸುತ್ತದೆಯೇ ಎನ್ನುವುದನ್ನು ಕಾದು ನೋಡಬೇಕು. ಆ ಕೆಲಸ ಮಾಡದಿದ್ದರೆ ಇಂತಹ ನಾಯಕರು ಪಕ್ಷಕ್ಕೆ ವಾಪಸ್ ಆಗಿಯೂ ಹೆಚ್ಚಿನ ಲಾಭ ಇರದು ಅನ್ನೋದನ್ನು, ಪಕ್ಷವು ಅರ್ಥ ಮಾಡಿಕೊಳ್ಳುತ್ತದೆ ಎನ್ನುವುದು ಜೆಡಿಎಸ್ ತಳ ಮಟ್ಟದ ಕಾರ್ಯಕರ್ತರ ನಂಬಿಕೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
“ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!