📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ

    ಮಂಗಳೂರು: ಹಣದ ಅವಶ್ಯಕತೆಯಿದ್ದ ಮಹಿಳೆಗೆ ಪರಿಚಯದ ವ್ಯಕ್ತಿಯೊಬ್ಬರ ಮೂಲಕ ₹4.50 ಲಕ್ಷ ಸಾಲ ಕೊಡಿಸಿ, ಬಳಿಕ ಅತಿಯಾದ ಬಡ್ಡಿ ವಸೂಲಿ ಮಾಡಿರುವುದಲ್ಲದೆ ಚಕ್ರಬಡ್ಡಿ ಹೆಸರಿನಲ್ಲಿ ಮತ್ತಷ್ಟು ಹಣ ನೀಡುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಬಗ್ಗೆ ಉರುವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

    ದೂರುದಾರರಾದ ಬಬಿತಾ ಅವರಿಗೆ ಹಣದ ಅಗತ್ಯವಿದ್ದ ಹಿನ್ನೆಲೆಯಲ್ಲಿ ಅವರೊಂದಿಗೆ ಕೆಲಸ ಮಾಡುತ್ತಿದ್ದ ರಾಜೇಶ್ವರಿ ಎಂಬುವರು ಪರಿಚಯದ ಕೊಟ್ಟಾರ ಚೌಕಿ ನಿವಾಸಿ ತಾನ್ ಸಿಂಗ್ ಎಂಬಾತನಿಂದ 2026ರ ಜುಲೈ ತಿಂಗಳಲ್ಲಿ ಹಂತ ಹಂತವಾಗಿ ಐದು ಬಾರಿ ಒಟ್ಟು ₹4.50 ಲಕ್ಷ ಹಣವನ್ನು ಪಡೆದು ಬಬಿತಾ ಅವರಿಗೆ ನೀಡಿದ್ದರು ಎನ್ನಲಾಗಿದೆ.

    ಆರಂಭದಲ್ಲಿ ತಿಂಗಳ ಬಡ್ಡಿ ಆಧಾರದಲ್ಲಿ ಸಾಲ ನೀಡಿದ್ದ ತಾನ್ ಸಿಂಗ್, ಬಳಿಕ ದಿನದ ಬಡ್ಡಿಯಂತೆ ಪ್ರತಿ ₹1 ಲಕ್ಷಕ್ಕೆ ₹15 ಸಾವಿರ ಬಡ್ಡಿ ನೀಡಬೇಕು ಎಂದು ರಾಜೇಶ್ವರಿ ಅವರಿಗೆ ಒತ್ತಡ ಹಾಗೂ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಈ ವಿಚಾರ ತಿಳಿದ ಬಬಿತಾ, ತಮ್ಮ ಬಳಿ ಹಣವಿಲ್ಲದ ಕಾರಣ ಪರಿಚಯಸ್ಥರಿಂದ ಸಾಲ ಪಡೆದು, ರಾಜೇಶ್ವರಿ ಮೂಲಕ ಈವರೆಗೆ ಸುಮಾರು ₹7ರಿಂದ ₹8 ಲಕ್ಷದವರೆಗೆ ಬಡ್ಡಿ ಹಣ ಪಾವತಿಸಿರುವುದಾಗಿ ತಿಳಿಸಿದ್ದಾರೆ.

    ಬಳಿಕ ಬಡ್ಡಿ ಪಾವತಿಯನ್ನು ನಿಲ್ಲಿಸಿ ಅಸಲು ಹಣವನ್ನು ವಾಪಸ್ ನೀಡುವುದಾಗಿ ರಾಜೇಶ್ವರಿ ಮೂಲಕ ತಾನ್ ಸಿಂಗ್‌ಗೆ ತಿಳಿಸಲಾಗಿತ್ತು. ಅದರಂತೆ ಜುಲೈ 17ರಂದು ₹3 ಲಕ್ಷ ಹಣವನ್ನು ರಾಜೇಶ್ವರಿ ಮೂಲಕ ನೀಡಲಾಗಿತ್ತು. ಆದರೆ, ಇನ್ನೂ ಬಡ್ಡಿ ಸೇರಿ ₹4.50 ಲಕ್ಷ ಬಾಕಿ ಇದೆ. ಅದಕ್ಕೆ ಮತ್ತೆ ₹1 ಲಕ್ಷ ಚಕ್ರಬಡ್ಡಿ ಸೇರಿಸಿ ನೀಡಬೇಕು ಎಂದು ತಾನ್ ಸಿಂಗ್ ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಸಮಯಾವಕಾಶ ನೀಡುವಂತೆ ಬಬಿತಾ ಮನವಿ ಮಾಡಿಕೊಂಡರೂ, ಆರೋಪಿ ಒಪ್ಪದೆ, “ನಿಮ್ಮಿಬ್ಬರನ್ನು ಸಾಯಿಸುತ್ತೇನೆ, ನೀವು ಕೆಲಸ ಮಾಡುವ ಸ್ಥಳಕ್ಕೆ ಬರುತ್ತೇನೆ” ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

    ಇದಲ್ಲದೆ, ಜುಲೈ 23ರಂದು ತಾನ್ ಸಿಂಗ್ ಇನ್ನೂ ₹9.37 ಲಕ್ಷ ಹಣ ಬಾಕಿ ಇದೆ ಎಂದು ತಿಳಿಸಿದ್ದಾನೆ ಎನ್ನಲಾಗಿದೆ. ಮುಂದೆಯೂ ಚಕ್ರಬಡ್ಡಿಯ ನೆಪದಲ್ಲಿ ಬಬಿತಾ ಹಾಗೂ ರಾಜೇಶ್ವರಿ ಅವರನ್ನು ಬೆದರಿಸಿ ಹೆಚ್ಚಿನ ಹಣ ವಸೂಲಿ ಮಾಡುವ ಸಾಧ್ಯತೆ ಇರುವುದಾಗಿ ಆತಂಕ ವ್ಯಕ್ತಪಡಿಸಿರುವ ಪಿರ್ಯಾದಿದಾರರು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಉರ್ವ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರಿನ ಆಧಾರದ ಮೇಲೆ ಉರ್ವ ಪೊಲೀಸರು ದೂರು ದಾಖಲಿಸಿಕೊಂಡು ಪ್ರಕರಣದ ಆರೋಪಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    ಬ್ರೇಕಿಂಗ್ ನ್ಯೂಸ್
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!