📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ

ಒಂದು ಕಾಲದಲ್ಲಿ 20-30 ಸಾವಿರ ರೂ.ಗೆ ಸಿಗುತ್ತಿದ್ದ 10 ಗ್ರಾಂ ಚಿನ್ನ ಇಂದು ಕೆಲವೆಡೆ ಒಂದೂವರೆ ಲಕ್ಷ ರೂಪಾಯಿ ಗಡಿ ದಾಟಿದೆ. ಬೆಲೆ ಕೇಳಿದರೆ ಸಾಮಾನ್ಯ ಜನರಿಗೆ ಶಾಕ್ ಆಗುತ್ತಿದೆ. ಆದರೆ ಭಾರತೀಯರ ಚಿನ್ನದ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ…ಚಿಕ್ಕದಾದ್ರೂ ಸರಿ ಅಗತ್ಯ ಬಂದ್ರೆ ಖರೀದಿಸಲೇ ಬೇಕು, ಕೆಲವ್ ಸಂದರ್ಭ ಅನಿವಾರ್ಯ ಕೂಡ ..

ಚಿನ್ನದ ಬೆಲೆ ಗಗನಕ್ಕೇರಿತು! ಮಹಿಳೆಯರ ನೆಚ್ಚಿನ ಆಭರಣ ಈಗ ಮತ್ತಷ್ಟು ಅಮೂಲ್ಯ.

ಗೋಲ್ಡ್ ದರ ಏರು ಮುಖದಲ್ಲಿ.. ಬೆಳ್ಳಿಯ ದರ ಎರಡೇ ದಿನದಲ್ಲಿ ಆರು ಸಾವಿರ ಏರಿಕೆ

ಇಡೀ ಜಗತ್ತಿನ ಆರ್ಥಿಕತೆ ನಿಂತಿರುವುದೇ ಚಿನ್ನ ಬೆಳ್ಳಿಯಂತಹ ಭೂಮಿಯ ಒಡಲಿನಿಂದ ಸಿಗುವಂತಹ ಖನಿಜ ಸಂಪತ್ತಿನಿಂದ. ಡಾಲರ್ ದರ ಕೂಡ ಇದಕ್ಕೆ ಹೊರತಾಗಿಲ್ಲ. ಒಂದೇ ಸಮನೆ ಚಿನ್ನ ಬೆಳ್ಳಿಯ ದರ ಏರುತ್ತಾ ಸಾಗುತ್ತಿದೆ. ಯಾವುದೇ ಬಲಾಡ್ಯರ ಹಿಡಿತಕ್ಕೂ ಆ ದರ ಏರಿಕೆ ಕಡಿವಾಣ ಸಿಗುತ್ತಿಲ್ಲ.


ಶನಿವಾರ ಒಂದು ಗ್ರಾಂ ಗೆ13, 300ರಷ್ಟಿದ್ದ 22 ಕ್ಯಾರೆಟ್ ಚಿನ್ನದ ದರ ಇಂದು ಬರೋಬ್ಬರಿ 220 ನಷ್ಟು ಏರಿಕೆ ಕಂಡಿದೆ. ಅದೇ ರೀತಿ ಬೆಳ್ಳಿ ೧ ಕೆ.ಜಿಗೆ ಎರಡು ಲಕ್ಷದ 52 ಸಾವಿರ ದರ ಶನಿವಾರದ ಸಂಜೆಯ ಹೊತ್ತಿಗೆ ಇತ್ತು. ಅದೇ ಒಂದು ಕೆಜಿ ಬೆಳ್ಳಿಗೆ ಸೋಮವಾರ ಮುಂಜಾನೆಯ ಹೊತ್ತಿಗೆ ಎರಡು ಲಕ್ಷದ 58000 ಆಗಿದೆ. ಬರೋಬ್ಬರಿ 6000 ನೆಗೆತ ಕಂಡಿದೆ.
ಚಿನ್ನವೂ ಸಹ 10 ಗ್ರಾಂ ಗೆ ಎರಡು ಸಾವಿರದ ಇನ್ನೂರು ರೂಪಾಯಿ ನೆಗೆತ ಕಂಡಿದೆ.
ಇದೇ ರೀತಿಯ ದರ ಏರಿಕೆಯು, ಅರಾಜಕತೆ ಹಾಗೂ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಯಾರ ನಿಯಂತ್ರಣಕ್ಕೂ ಸಿಗದಂತೆ ಏರುತ್ತಿರುವ ಈ ದರವನ್ನು ಕಂಟ್ರೋಲಿಗೆ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಅನಾರೋಗ್ಯಕರ ಪ್ರೀತಿಯಲ್ಲಿ ದರ ಏರಿಕೆಯಾಗುತ್ತಿದೆ.

ಒಟ್ಟಾರೆಯಾಗಿ ಜನರ ಆದಾಯದಲ್ಲಿ ಯಾವುದೇ ಏರಿಕೆ ಕಾಣಿಸದಿದ್ದರೂ, ಚಿನ್ನ ಬೆಳ್ಳಿಯಂತಹ ಪ್ರಮುಖ ಆರ್ಥಿಕ ಮೂಲದ ದರವು ಏರಿಕೆಯಾಗುತ್ತಿರುವುದು ಸಾಮಾನ್ಯ ಜನರ ಮನೆಯ ಮೇಲು ಅದರ ಪರಿಣಾಮ ಬೀರುವುದು ಖಚಿತ ಅಂತಲೆ ಆರ್ಥಿಕ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.

ಯಾವುದೇ ವಸ್ತುವಿನ ಬೆಲೆ ಆರೋಗ್ಯಕರವಾದ ರೀತಿಯಲ್ಲಿ ಇರಬೇಕು ಆ ರೀತಿಯಲ್ಲಿ ಇರುವಂತೆ ನೋಡಿಕೊಳ್ಳುವುದು ದೇಶ ಹಾಗೂ ಜಗತ್ತಿನ ಎಲ್ಲಾ ದೇಶಗಳ ಆಡಳಿತದ ಕರ್ತವ್ಯವಾಗಿರಬೇಕಿತ್ತು. ಆದರೆ ಈಗ, ಜಗತ್ತಿನ ಯಾವ ದೇಶದ ಆಡಳಿತಕ್ಕೂ ಸೊಪ್ಪು ಹಾಕದ ರೀತಿಯಲ್ಲಿ ನೆಗೆತ ಕಾಣುತ್ತಿರುವುದು ಭವಿಷ್ಯಕ್ಕೆ ಮಾರಕವಾಗಬಹುದು ಎನ್ನಲಾಗುತ್ತಿದೆ

ಭಾರತೀಯರ ಬದುಕಿನಲ್ಲಿ ಚಿನ್ನಕ್ಕೆ ವಿಶೇಷ ಸ್ಥಾನವಿದೆ. ಅದರಲ್ಲೂ ಮಹಿಳೆಯರಿಗೆ ಚಿನ್ನ ಎಂದರೆ ಕೇವಲ ಆಭರಣವಲ್ಲ, ಅದು ಭಾವನೆ, ಸಂಪ್ರದಾಯ ಮತ್ತು ಭದ್ರತೆಯ ಸಂಕೇತ. ಮದುವೆ, ನಾಮಕರಣ, ಹಬ್ಬ-ಹರಿದಿನ, ಶುಭ ಸಮಾರಂಭ ಹೀಗೆ ಯಾವುದೇ ವಿಶೇಷ ಸಂದರ್ಭ ಚಿನ್ನವಿಲ್ಲದೆ ಪೂರ್ಣವಾಗುವುದಿಲ್ಲ.

ಈಗ ಚಿನ್ನದ ಬೆಲೆ ಐತಿಹಾಸಿಕ ಏರಿಕೆ ಕಂಡಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು ₹1.00 ಲಕ್ಷದಿಂದ ₹1.10 ಲಕ್ಷ ಗಡಿ ದಾಟಿದೆ. ಇದರಿಂದ ಚಿನ್ನ ಖರೀದಿಸಲು ಯೋಜಿಸಿದ್ದ ಕುಟುಂಬಗಳು ಮತ್ತು ಮಹಿಳೆಯರಲ್ಲಿ ಚರ್ಚೆ ಜೋರಾಗಿದೆ. “ಇನ್ನೂ ಏರುತ್ತದೆಯೇ ಅಥವಾ ಇಳಿಯುತ್ತದೆಯೇ?” ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಭಾರತೀಯ ಕುಟುಂಬಗಳಲ್ಲಿ ಚಿನ್ನವನ್ನು ಯಾವಾಗಲೂ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ. ಷೇರು ಮಾರುಕಟ್ಟೆ ಏರಿಳಿತ ಕಂಡರೂ, ಆರ್ಥಿಕ ಅನಿಶ್ಚಿತತೆ ಎದುರಾದರೂ, ಚಿನ್ನ ತನ್ನ ಮೌಲ್ಯವನ್ನು ಉಳಿಸಿಕೊಳ್ಳುವ ಆಸ್ತಿಯಾಗಿದೆ ಎಂಬ ನಂಬಿಕೆ ಜನರಲ್ಲಿದೆ. ಅದಕ್ಕಾಗಿಯೇ ಅನೇಕ ಕುಟುಂಬಗಳು ತಮ್ಮ ಉಳಿತಾಯದ ಒಂದು ಭಾಗವನ್ನು ಚಿನ್ನದ ರೂಪದಲ್ಲಿ ಇಡುತ್ತಾರೆ.

ತಜ್ಞರ ಪ್ರಕಾರ ಜಾಗತಿಕ ಆರ್ಥಿಕ ಅನಿಶ್ಚಿತತೆ, ಯುದ್ಧದ ಆತಂಕ, ಡಾಲರ್ ಮೌಲ್ಯದ ಏರಿಳಿತ ಹಾಗೂ ಸುರಕ್ಷಿತ ಹೂಡಿಕೆಯತ್ತ ಜನರ ಒಲವು ಹೆಚ್ಚುತ್ತಿರುವುದು ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯನ್ನೂ ಕೆಲವರು ವ್ಯಕ್ತಪಡಿಸುತ್ತಿದ್ದಾರೆ.

ಒಂದು ಕಾಲದಲ್ಲಿ “ಚಿನ್ನ ಖರೀದಿಸೋಣ” ಎಂದು ಸುಲಭವಾಗಿ ನಿರ್ಧಾರ ಮಾಡುತ್ತಿದ್ದ ಕುಟುಂಬಗಳು ಇಂದು ಬೆಲೆ ಕೇಳಿ ಅಚ್ಚರಿ ಪಡುತ್ತಿವೆ. ಆದರೆ ಬೆಲೆ ಎಷ್ಟೇ ಏರಿದರೂ ಭಾರತೀಯರ ಚಿನ್ನದ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ. ಏಕೆಂದರೆ ಚಿನ್ನ ಕೇವಲ ಲೋಹವಲ್ಲ, ಅದು ಭಾರತೀಯ ಸಂಸ್ಕೃತಿ, ಕುಟುಂಬದ ಗೌರವ ಮತ್ತು ಭವಿಷ್ಯದ ಭದ್ರತೆಯ ಪ್ರತೀಕವಾಗಿದೆ.

ಹೀಗಾಗಿ ಈಗ ಎಲ್ಲರಲ್ಲೂ ಒಂದೇ ಪ್ರಶ್ನೆ – ಚಿನ್ನದ ಬೆಲೆ ಇನ್ನೂ ಎಷ್ಟು ಏರಲಿದೆ? ಅಥವಾ ಖರೀದಿಸಲು ಇದೇ ಸರಿಯಾದ ಸಮಯವೇ? ಉತ್ತರ ಮುಂದಿನ ದಿನಗಳ ಮಾರುಕಟ್ಟೆ ಬೆಳವಣಿಗೆಗಳ ಮೇಲೆ ನಿಂತಿದೆ..

##GoldRateToday #GoldPriceIndia #GoldNews #KannadaNews #GoldInvestment #GoldLovers

COMMENTS

Login with Gmail to comment

ಇನ್ನಷ್ಟು ಸುದ್ದಿ

ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ