📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…


ಈ ದಿನಗಳಲ್ಲಿ ತೀವ್ರ ಬಿಸಿಲು ಮತ್ತು ಅಸಹನೀಯ ಹವಾಮಾನ ಪರಿಸ್ಥಿತಿಯಲ್ಲಿ ಜನರ ದಿನನಿತ್ಯದ ಜೀವನವೇ ಸವಾಲಾಗಿರುವ ಸಂದರ್ಭದಲ್ಲಿ ಜನಗಣತಿ 

2026–27 – census ಸಂಬಂಧಿತ ಕಾರ್ಯಗಳು ನಡೆಯುತ್ತಿವೆ. ಸ್ವ-ಗಣನೆ (Self Enumeration) ಆಯ್ಕೆ ಮೂಲಕ ಆನ್‌ಲೈನ್‌ನಲ್ಲಿ ವಿವರಗಳನ್ನು ನೀಡುವ ಅವಕಾಶವನ್ನು ಇತ್ತೀಚಿನ ದಿನಗಳವರೆಗೆ (ಏಪ್ರಿಲ್ 15ರವರೆಗೆ) ನೀಡಲಾಗಿತ್ತು.ಎಲ್ಲಾ ಶಾಲೆಗಳೂ ಕೂಡಾ parents ಗೆ ಗಮನಕ್ಕೆತಂದಿತ್ತು.. ಈ ಹಂತದ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಮುಂದುವರಿಸುವ ಸಾಧ್ಯತೆ ಇದೆ.ಆಗ ಆನ್ಲೈನ್ ಸೆನ್ಸಸ್ fill ಮಾಡಿದ id ಯನ್ನ ಅವರಿಗೆ ಕೊಡ್ಬೇಕಾಗುತ್ತೆ.

ಜನಗಣತಿ ಎಂದರೆ ದೇಶದ ಎಲ್ಲಾ ಜನರ ಬಗ್ಗೆ ವಿವರಗಳನ್ನು ಸಂಗ್ರಹಿಸುವ ಮಹತ್ವದ ರಾಷ್ಟ್ರೀಯ ಪ್ರಕ್ರಿಯೆಯಾಗಿದ್ದು, ಇದರ ಮೂಲಕ ಜನಸಂಖ್ಯೆ, ಶಿಕ್ಷಣ, ಉದ್ಯೋಗ, ವಸತಿ ಮತ್ತು ಸಾಮಾಜಿಕ-ಆರ್ಥಿಕ ಸ್ಥಿತಿಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯುತ್ತದೆ.

ಈ ಬಾರಿ ಜನಗಣತಿ ಹೆಚ್ಚು ಡಿಜಿಟಲ್ ಹಾಗೂ ತಂತ್ರಜ್ಞಾನ ಆಧಾರಿತವಾಗುವ ನಿರೀಕ್ಷೆ ಇದೆ. ಮೊಬೈಲ್ ಆಪ್ ಮತ್ತು ಆನ್‌ಲೈನ್ ವ್ಯವಸ್ಥೆ ಮೂಲಕ ಕೆಲವರು ಸ್ವತಃ ತಮ್ಮ ಮಾಹಿತಿಯನ್ನು ಸಲ್ಲಿಸುವ ಅವಕಾಶವನ್ನು ಬಳಸಿಕೊಂಡಿದ್ದಾರೆ. ಇದರ ನಂತರ ಅಧಿಕೃತ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುವ ಹಾಗೂ ಉಳಿದ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಿದ್ದಾರೆ.

ಆದರೆ ಕೆಲವು ಪ್ರದೇಶಗಳಲ್ಲಿ ಜನರು ಜನಗಣತಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿಲ್ಲ ಎಂಬುದು ಚಿಂತೆಯ ವಿಷಯವಾಗಿದೆ. ಕೆಲವರು ಇದನ್ನು ಅಗತ್ಯವಿಲ್ಲದ ಪ್ರಕ್ರಿಯೆ ಎಂದು ತಪ್ಪಾಗಿ ಭಾವಿಸುತ್ತಿದ್ದಾರೆ ಅಥವಾ ಮಾಹಿತಿ ನೀಡಲು ನಿರಾಸಕ್ತಿ ತೋರಿಸುತ್ತಿದ್ದಾರೆ ಅನ್ನುವ  ಮಾತುಗಳು ಕೇಳಿ ಬರುತ್ತಿದೆ.

ಜನಗಣತಿ ಅಧಿಕಾರಿಗಳನ್ನು ಗೌರವದಿಂದ ಸ್ವೀಕರಿಸಬೇಕು ಎಂಬುದು ಪ್ರಮುಖವಾಗಿದೆ. ಅವರು ಸರ್ಕಾರದಿಂದ ಅಧಿಕೃತವಾಗಿ ನೇಮಕಗೊಂಡ ತರಬೇತಿ ಪಡೆದ ಸಿಬ್ಬಂದಿಯಾಗಿದ್ದು, ಹೆಚ್ಚಿನವರು ಶಿಕ್ಷಕರೇ ಕೇವಲ ಅಂಕಿಅಂಶ ಸಂಗ್ರಹಿಸುವ ಕಾರ್ಯವನ್ನು ಮಾತ್ರ ಮಾಡುತ್ತಾರೆ.

 ಸಹಕಾರ ನೀಡದಿರುವುದು ಅಥವಾ ತಪ್ಪು ಮಾಹಿತಿ ನೀಡುವುದು ದೇಶದ ಅಭಿವೃದ್ಧಿ ಯೋಜನೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಶಾಲೆ, ಆಸ್ಪತ್ರೆ, ರಸ್ತೆ, ನೀರು ಹಾಗೂ ಉದ್ಯೋಗ ಯೋಜನೆಗಳ ರೂಪರೇಷೆಗಳಿಗೆ ಈ ಮಾಹಿತಿಯೇ ಆಧಾರವಾಗಿರುತ್ತದೆ.

👉 ಜನರಲ್ಲಿ ಇರುವ ಗೊಂದಲ, ನಿರ್ಲಕ್ಷ್ಯ ಮತ್ತು ಅನುಮಾನಗಳನ್ನು ದೂರ ಮಾಡುವ ಅಗತ್ಯವಿದೆ. ಜನಗಣತಿ ಯಾವುದೇ ತೆರಿಗೆ ಅಥವಾ ವೈಯಕ್ತಿಕ ತೊಂದರೆಗೆ ಬಳಸಲಾಗುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು.

 ಗಣತಿದಾರರನ್ನು ಮಾನವೀಯತೆ, ಶಾಂತಿ ಮತ್ತು ಸಹಕಾರದೊಂದಿಗೆ ಸ್ವಾಗತಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ವಿಶೇಷವಾಗಿ ಇಂತಹ ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಅವರ ಕೆಲಸಕ್ಕೂ ಗೌರವ ನೀಡುವುದು ಅಗತ್ಯವಾಗಿದೆ.

ಯಾವುದೇ ಸಂಶಯಗಳಿದ್ದರೆ ಪ್ರಶ್ನೆ ಕೇಳಿ ಸ್ಪಷ್ಟನೆ ಪಡೆಯಬಹುದು, ಆದರೆ ಗಣತಿ ಪ್ರಕ್ರಿಯೆಗೆ ಅಡ್ಡಿಯಾಗುವ ರೀತಿಯಲ್ಲಿ ವರ್ತಿಸಬಾರದು ಎಂದು ಅಧಿಕಾರಿಗಳು ಸೂಚಿಸುತ್ತಿದ್ದಾರೆ.

ಒಟ್ಟಿನಲ್ಲಿ ಜನಗಣತಿ ದೇಶದ ಭವಿಷ್ಯ ರೂಪಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಪ್ರತಿಯೊಬ್ಬ ನಾಗರಿಕನ ಸಹಕಾರ ಅತ್ಯಂತ ಅಗತ್ಯವಾಗಿದೆ.

##Census2026 #ಜನಗಣತಿ #IndiaCensus #PublicAwareness #NationBuilding #DigitalIndia #BeResponsibleCitizen

COMMENTS

Login with Gmail to comment

ಇನ್ನಷ್ಟು ಸುದ್ದಿ

ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಸಾರ್ವಜನಿಕರಲ್ಲಿ ವಿನಂತಿ …!
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!