📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…


    ಈ ದಿನಗಳಲ್ಲಿ ತೀವ್ರ ಬಿಸಿಲು ಮತ್ತು ಅಸಹನೀಯ ಹವಾಮಾನ ಪರಿಸ್ಥಿತಿಯಲ್ಲಿ ಜನರ ದಿನನಿತ್ಯದ ಜೀವನವೇ ಸವಾಲಾಗಿರುವ ಸಂದರ್ಭದಲ್ಲಿ ಜನಗಣತಿ 

    2026–27 – census ಸಂಬಂಧಿತ ಕಾರ್ಯಗಳು ನಡೆಯುತ್ತಿವೆ. ಸ್ವ-ಗಣನೆ (Self Enumeration) ಆಯ್ಕೆ ಮೂಲಕ ಆನ್‌ಲೈನ್‌ನಲ್ಲಿ ವಿವರಗಳನ್ನು ನೀಡುವ ಅವಕಾಶವನ್ನು ಇತ್ತೀಚಿನ ದಿನಗಳವರೆಗೆ (ಏಪ್ರಿಲ್ 15ರವರೆಗೆ) ನೀಡಲಾಗಿತ್ತು.ಎಲ್ಲಾ ಶಾಲೆಗಳೂ ಕೂಡಾ parents ಗೆ ಗಮನಕ್ಕೆತಂದಿತ್ತು.. ಈ ಹಂತದ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಮುಂದುವರಿಸುವ ಸಾಧ್ಯತೆ ಇದೆ.ಆಗ ಆನ್ಲೈನ್ ಸೆನ್ಸಸ್ fill ಮಾಡಿದ id ಯನ್ನ ಅವರಿಗೆ ಕೊಡ್ಬೇಕಾಗುತ್ತೆ.

    ಜನಗಣತಿ ಎಂದರೆ ದೇಶದ ಎಲ್ಲಾ ಜನರ ಬಗ್ಗೆ ವಿವರಗಳನ್ನು ಸಂಗ್ರಹಿಸುವ ಮಹತ್ವದ ರಾಷ್ಟ್ರೀಯ ಪ್ರಕ್ರಿಯೆಯಾಗಿದ್ದು, ಇದರ ಮೂಲಕ ಜನಸಂಖ್ಯೆ, ಶಿಕ್ಷಣ, ಉದ್ಯೋಗ, ವಸತಿ ಮತ್ತು ಸಾಮಾಜಿಕ-ಆರ್ಥಿಕ ಸ್ಥಿತಿಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯುತ್ತದೆ.

    ಈ ಬಾರಿ ಜನಗಣತಿ ಹೆಚ್ಚು ಡಿಜಿಟಲ್ ಹಾಗೂ ತಂತ್ರಜ್ಞಾನ ಆಧಾರಿತವಾಗುವ ನಿರೀಕ್ಷೆ ಇದೆ. ಮೊಬೈಲ್ ಆಪ್ ಮತ್ತು ಆನ್‌ಲೈನ್ ವ್ಯವಸ್ಥೆ ಮೂಲಕ ಕೆಲವರು ಸ್ವತಃ ತಮ್ಮ ಮಾಹಿತಿಯನ್ನು ಸಲ್ಲಿಸುವ ಅವಕಾಶವನ್ನು ಬಳಸಿಕೊಂಡಿದ್ದಾರೆ. ಇದರ ನಂತರ ಅಧಿಕೃತ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುವ ಹಾಗೂ ಉಳಿದ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಿದ್ದಾರೆ.

    ಆದರೆ ಕೆಲವು ಪ್ರದೇಶಗಳಲ್ಲಿ ಜನರು ಜನಗಣತಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿಲ್ಲ ಎಂಬುದು ಚಿಂತೆಯ ವಿಷಯವಾಗಿದೆ. ಕೆಲವರು ಇದನ್ನು ಅಗತ್ಯವಿಲ್ಲದ ಪ್ರಕ್ರಿಯೆ ಎಂದು ತಪ್ಪಾಗಿ ಭಾವಿಸುತ್ತಿದ್ದಾರೆ ಅಥವಾ ಮಾಹಿತಿ ನೀಡಲು ನಿರಾಸಕ್ತಿ ತೋರಿಸುತ್ತಿದ್ದಾರೆ ಅನ್ನುವ  ಮಾತುಗಳು ಕೇಳಿ ಬರುತ್ತಿದೆ.

    ಜನಗಣತಿ ಅಧಿಕಾರಿಗಳನ್ನು ಗೌರವದಿಂದ ಸ್ವೀಕರಿಸಬೇಕು ಎಂಬುದು ಪ್ರಮುಖವಾಗಿದೆ. ಅವರು ಸರ್ಕಾರದಿಂದ ಅಧಿಕೃತವಾಗಿ ನೇಮಕಗೊಂಡ ತರಬೇತಿ ಪಡೆದ ಸಿಬ್ಬಂದಿಯಾಗಿದ್ದು, ಹೆಚ್ಚಿನವರು ಶಿಕ್ಷಕರೇ ಕೇವಲ ಅಂಕಿಅಂಶ ಸಂಗ್ರಹಿಸುವ ಕಾರ್ಯವನ್ನು ಮಾತ್ರ ಮಾಡುತ್ತಾರೆ.

     ಸಹಕಾರ ನೀಡದಿರುವುದು ಅಥವಾ ತಪ್ಪು ಮಾಹಿತಿ ನೀಡುವುದು ದೇಶದ ಅಭಿವೃದ್ಧಿ ಯೋಜನೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಶಾಲೆ, ಆಸ್ಪತ್ರೆ, ರಸ್ತೆ, ನೀರು ಹಾಗೂ ಉದ್ಯೋಗ ಯೋಜನೆಗಳ ರೂಪರೇಷೆಗಳಿಗೆ ಈ ಮಾಹಿತಿಯೇ ಆಧಾರವಾಗಿರುತ್ತದೆ.

    👉 ಜನರಲ್ಲಿ ಇರುವ ಗೊಂದಲ, ನಿರ್ಲಕ್ಷ್ಯ ಮತ್ತು ಅನುಮಾನಗಳನ್ನು ದೂರ ಮಾಡುವ ಅಗತ್ಯವಿದೆ. ಜನಗಣತಿ ಯಾವುದೇ ತೆರಿಗೆ ಅಥವಾ ವೈಯಕ್ತಿಕ ತೊಂದರೆಗೆ ಬಳಸಲಾಗುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು.

     ಗಣತಿದಾರರನ್ನು ಮಾನವೀಯತೆ, ಶಾಂತಿ ಮತ್ತು ಸಹಕಾರದೊಂದಿಗೆ ಸ್ವಾಗತಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ವಿಶೇಷವಾಗಿ ಇಂತಹ ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಅವರ ಕೆಲಸಕ್ಕೂ ಗೌರವ ನೀಡುವುದು ಅಗತ್ಯವಾಗಿದೆ.

    ಯಾವುದೇ ಸಂಶಯಗಳಿದ್ದರೆ ಪ್ರಶ್ನೆ ಕೇಳಿ ಸ್ಪಷ್ಟನೆ ಪಡೆಯಬಹುದು, ಆದರೆ ಗಣತಿ ಪ್ರಕ್ರಿಯೆಗೆ ಅಡ್ಡಿಯಾಗುವ ರೀತಿಯಲ್ಲಿ ವರ್ತಿಸಬಾರದು ಎಂದು ಅಧಿಕಾರಿಗಳು ಸೂಚಿಸುತ್ತಿದ್ದಾರೆ.

    ಒಟ್ಟಿನಲ್ಲಿ ಜನಗಣತಿ ದೇಶದ ಭವಿಷ್ಯ ರೂಪಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಪ್ರತಿಯೊಬ್ಬ ನಾಗರಿಕನ ಸಹಕಾರ ಅತ್ಯಂತ ಅಗತ್ಯವಾಗಿದೆ.

    ##Census2026 #ಜನಗಣತಿ #IndiaCensus #PublicAwareness #NationBuilding #DigitalIndia #BeResponsibleCitizen

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!