📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟ ಜೋರಾಗುತ್ತಿದ್ದಂತೆಯೇ ಭಾರತದಲ್ಲಿ ಚಿಂತೆ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಡಾಂಬರ್ ಅಡುಗೆ ಅನಿಲ ಸೇರಿದಂತೆ ಹಲವು ಕಚ್ಚಾ ತೈಲ ಸಂಬಂಧಿತ ವಸ್ತುಗಳಿಗೆ ಸಂಚಕಾರ ಬರುವ ಸಾಧ್ಯತೆ ಇದೆ.

ಇದನ್ನು ಅರಿತೇ ಜನರು ಕಂಗಾಲಾಗಿದ್ದರು . ಇದೇ ಸಂದರ್ಭವನ್ನು ಕೆಲವರು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಹಾಗೆ ಲಾಭಕ್ಕೆ ಬಳಸಿಕೊಳ್ಳುವವರು ಸಾಮಾನ್ಯರೇನಲ್ಲ, ಅವರಿಗೆ ಆಳುವವರು ಹಾಗೂ ಕಾರ್ಯಾಂಗದ ರಕ್ಷಣೆಯು ಇರುತ್ತದೆ. ಅಂಥವರಿಂದ ಮಾತ್ರ ದೊಡ್ಡ ಪ್ರಮಾಣದಲ್ಲಿ ಇದೆಲ್ಲವನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯ.

ಅದಿರಲಿ, ಈಗಾಗಲೇ ಅಡಿಗೆ ಅನಿಲದ ದರವನ್ನು 60 ರಿಂದ 70 ರೂಪಾಯಿವರೆಗೆ ಏರಿಸಿದ್ದಾರೆ.  ಹಳೆಯ ಬೆಲೆಯಲ್ಲಿ ಬಂದ ಸ್ಟಾಕ್ ಇರುವ ಗ್ಯಾಸಿನ ದರವನ್ನೇ ಏರಿಸುತ್ತಾರೆಂದರೆ ಏನರ್ಥ? ವಾಣಿಜ್ಯ ಉಪಯೋಗಿ ಗ್ಯಾಸಿನ ಬೆಲೆ 300 ರಿಂದ 400 ರೂ  ಏರಿದೆ. ಆದ್ರೂ ಕೃತಕ ಅಭಾವವನ್ನು ಸೃಷ್ಟಿಸುವ ಮೂಲಕ ಇನ್ನೂ ಒಂದಷ್ಟು ದರ ಏರಿಸುವ ಲೆಕ್ಕಾಚಾರ ನಡೆದಿದ್ದರಿಂದ ದೇಶದ ಒಳಕ್ಕೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಾಹಾಕಾರ ಏರ್ಪಟ್ಟಿತು

ಇದು ಸರ್ಕಾರದ ನೇಮಿಗೆ ಕಳಂಕ ಹಚ್ಚುವಷ್ಟು ಪ್ರಚಾರವನ್ನು ಪಡೆಯಿತು. ಸ್ವಲ್ಪ ಲೇಟಾಗಿಯಾದರೂ, ಕೇಂದ್ರ ಸರ್ಕಾರವು ಎಸ್ಮಾ ಖಾಯ್ದೆಯನ್ನು ಜಾರಿಗೆ ತರುವ ಮೂಲಕ ಯಾವುದೇ ಕಾರಣಕ್ಕೂ ಅಡುಗೆ ಅನಿಲದ ಸರಬರಾಜಿಗೆ ಒಂದಿಷ್ಟು ತೊಂದರೆ ಆಗಬಾರದು. ತೊಂದರೆಯಾದರೆ ತೊಂದರೆ ಕೊಟ್ಟವರು ಜೈಲಿಗೆ ಹೋಗುವುದು ಗ್ಯಾರಂಟಿ. ಈ ಒಂದು ಕಾಯ್ದೆಯ ಪವರೇ ಹಾಗಿದೆ. ಅತ್ಯಂತ ಕ್ಲಿಷ್ಟಕರ ಸಮಯದಲ್ಲಿ, ಮೂಲಭೂತ ಸೌಕರ್ಯ ಹಾಗೂ ವಸ್ತುಗಳ ಮೇಲೆ ಸರ್ಕಾರ ಹಿಡಿತ ಸಾಧಿಸುವ ಮೂಲಕ ಜನರಿಗೆ ಯಾವುದೇ ವೆಚ್ಚಯವಾಗದಂತೆ ನೋಡಿ ಕೊಳ್ಳಲು ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ಹಾಗೆಯೇ ಮಧ್ಯವರ್ತಿಗಳು, ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡದಂತೆ ಬೆಲೆ ಏರಿಕೆಯ ವಿಚಾರದಲ್ಲೂ ಸರ್ಕಾರದ ಹಿಡಿತ ಬಲವಾಗಿರುತ್ತದೆ ಈ ಕಾಯ್ದೆಯಿಂದ

ಹಾಗಾಗಿ ಕೇಂದ್ರ ಸರ್ಕಾರವು ತಂದಿರುವ ಎಸ್ಮಾ ಕಾಯ್ದೆಯನ್ನು ಜನರ ಪರವಾಗಿ ಸ್ವಾಗತಿಸಲೇಬೇಕು. ಜೊತೆಗೆ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯೂ ಸರ್ಕಾರದ್ದೇ ಇದೆ. ಎಲ್ಲಾ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗದಂತೆ ಈಗಲೇ ಸರ್ಕಾರವು ಖಡಕ್ಕಾದ ಸಂದೇಶವನ್ನು ಕಳುಹಿಸುವ ಮೂಲಕ ನೋಡಿಕೊಳ್ಳಬೇಕು ಎಂಬ ಸಲಹೆಗಳು ಸಾಮಾನ್ಯ ಜನರಿಂದ ಕೇಳಿ ಬರಲಾರಂಬಿಸಿದೆ 

COMMENTS

Login with Gmail to comment

ಇನ್ನಷ್ಟು ಸುದ್ದಿ

17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”