📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….

    ಅಷ್ಟಕ್ಕೂ ಆ ಜನಿವಾರವು ಅವರಿಗೆ ಏನು ತೊಂದರೆ ಮಾಡಿತ್ತು? ಆ ಜನಿವಾರವನ್ನು ತೆಗೆಸಬೇಕು, ಆ ಮೂಲಕ ರಾಜ್ಯದ ಬ್ರಹ್ಮಣರಿಗೆ ಅವಮಾನ ಮಾಡಬೇಕು ಎಂದು, ಒಂದು ತಂಡವು ಪ್ರಯತ್ನಿಸುತ್ತಿತ್ತಾ ಎಂಬ ಪ್ರಶ್ನೆ ಎದ್ದೇಳುತ್ತಿದೆ ಈಗ. ಆ ತಂಡವು ಕೊಟ್ಟ ಬೆಂಬಲದ ಪರಿಣಾಮ, ಆ ಸಿಬ್ಬಂದಿಗಳು ಜನಿವಾರಕ್ಕೆ ಕೈಹಾಕಲು ಹೋಗಿ ಈಗ ಪರಮನೆಂಟಾಗಿ ಮನೆಯ ಮೂಲೆಯನ್ನು ಸೇರಲು ಹೊರಟಿದ್ದಾರೆ ಎನ್ನಲಾಗುತ್ತಿದೆ.

    ಸಿಇಟಿ ಪರೀಕ್ಷೆಯು ರಾಜ್ಯ ರಾಜಧಾನಿಯಾದ ಬೆಂಗಳೂರಿನ ಕೃಪಾನಿ ಶಿಕ್ಷಣ ಸಂಸ್ಥೆಯಲ್ಲಿ ನಿಗದಿಯಾಗಿತ್ತು. ಹಾಗೆ ಪರೀಕ್ಷೆ ಬರೆಯಲು ಬಂದಂತಹ ವಿದ್ಯಾರ್ಥಿಗಳ ಜೇಬು ಹಾಗೂ  ಇತರ ಕಡೆ ಪರಿಶೀಲಿಸಿ ಯಾವುದೇ ನಕಲು ಹೊಡೆಯುವಂತಹ ಸಾಧನ ಇಲ್ಲದಿರುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಗೆ ಬಿಡುತ್ತಿದ್ದ ಮೂವರು ಸಿಬ್ಬಂದಿಗಳು, ಬ್ರಾಹ್ಮಣ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡುತ್ತಾರೆ. ಅವರು ಹಾಕಿಕೊಂಡಿದ್ದ ಜನಿವಾರವನ್ನು ತೆಗೆಯುವಂತೆ ಬಲವಂತ ಪಡಿಸುತ್ತಾರೆ.

    ಕಳೆದ ವರ್ಷ ಶಿವಮೊಗ್ಗದಲ್ಲೂ ಇದೇ ತರಹದ ಘಟನೆ ನಡೆದಿತ್ತು. ಅದು ವಿವಾದಕ್ಕೂ ಕಾರಣವಾಗಿತ್ತು. ಅದರ ಮುಂದುವರಿದ ಭಾಗವೇ ಕೃಪಾನಿ ಶಿಕ್ಷಣ ಸಂಸ್ಥೆಯಲ್ಲಿ ಈಗ ನಡೆದದ್ದು. ಆದರೆ, ಈ ಬಾರಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಯಾವುದೇ ರೀತಿಯ ಸಬೂಬು ಹೇಳದೆ , ತಪ್ಪಿತಸ್ಥ ಮೂವರು ಸಿಬ್ಬಂದಿಗಳಾದ ಗಿರಿಜಮ್ಮ, ಸರಿತಾ ಹಾಗೂ ಸುಧಾಕರ್ ಅವರನ್ನು ತಕ್ಷಣವೇ ಅಮಾನತ್ತು ಗೊಳಿಸಿದ್ದಾರೆ. ಹಾಗೂ ಬ್ರಾಹ್ಮಣ ಮಹಾಸಭಾ ದೂರಿನ ಆಧಾರದಲ್ಲಿ ಅವರನ್ನು ಬಂಧಿಸಲಾಗಿದೆ.

    ಇದು ಕೇವಲ ಮೂವರು ಸಿಬ್ಬಂದಿಗಳಿಂದ ನಡೆದಂತಹ ಕೆಲಸವಲ್ಲ. ಶಿವಮೊಗ್ಗದಲ್ಲಿ ನಡೆದ ವಿವಾದ, ಜನಿವಾರಕ್ಕೆ ಕೈ ಹಾಕಿದಾಗ ನಡೆದಂತಹ ಘಟನೆ ಯ ಬಗ್ಗೆ ಆ ಸಿಬ್ಬಂದಿಗಳಿಗೆ ಗೊತ್ತಿಲ್ಲ ಅನ್ನುವಂತಿಲ್ಲ. ನೂರಕ್ಕೆ ನೂರರಷ್ಟು ಅವರಿಗೆ ಗೊತ್ತಿತ್ತು. ಗೊತ್ತಿಲ್ಲದೇ ಇರುವಂತಹ ವ್ಯಕ್ತಿ ಇಂತಹ ಜಾಗದಲ್ಲಿ ದುಡಿಯಲು ಅರ್ಹನೂ ಅಲ್ಲ. ಆದರೂ ಆ ಮೂವರು ಸಿಬ್ಬಂದಿಗಳು ಮತ್ತೆ ಜನಿವಾರಕ್ಕೆ ಕೈ ಹಾಕುತ್ತಾರೆ ಎಂದರೆ, ಅವರನ್ನು ಈ ರೀತಿ ಮಾಡಲು ಪ್ರೇರೇಪಿಸಿದ  ಟೀಮ್ ಒಂದು ಇರಲೇಬೇಕು. ಆ ಟೀಮ್ ಯಾವುದು? ಆ ಟಿವಿನ ಹಿನ್ನೆಲೆ ಏನು? ಆ ಟೀಮಿನ ಗುರಿ ಏನು? ಎಲ್ಲವೂ ಸಂಪೂರ್ಣ ತನಿಖೆಗೆ ಒಳಪಡಬೇಕು. ಹಾಗೆಯೇ ಈ ಒಂದು ತನಿಖೆಯು ಮತ್ತು ನೀಡಲಾಗುವ ಶಿಕ್ಷೆಯು, ಮುಂದಿನ ದಿನದಲ್ಲಿ ನಡೆಯುವ ಎಲ್ಲಾ ತರಹದ ಹುಚ್ಛಾಟಗಳಿಗೂ ಕಡಿವಾಣ ಹಾಕುವ ರೀತಿಯಲ್ಲಿರಬೇಕು. ಅದರ ಅರ್ಥ, ಈ ಮೂವರು ಸಿಬ್ಬಂದಿಗಳನ್ನು ಪರ್ಮನೆಂಟಾಗಿ ಶಿಕ್ಷಣ ಇಲಾಖೆಯಿಂದಲೇ ಬ್ಯಾನ್ ಮಾಡಬೇಕು. ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಅವರಿಗೆ ದುಡಿಯಲು ಅವಕಾಶವೇ ಇರಬಾರದು. ಇಂತಹ ಕಲುಷಿತ ಮನಸ್ಸುಳ್ಳ ವ್ಯಕ್ತಿಗಳು ಶಿಕ್ಷಣ ಇಲಾಖೆಯಂತಹ ಪವಿತ್ರ ಸ್ಥಳದಲ್ಲಿ ಇರುವುದು ತಪ್ಪು. ಮನಸ್ಸಿನಲ್ಲಿ ಕಲ್ಮಶ ತುಂಬಿಕೊಂಡಂತವರು ಶಿಕ್ಷಣ ಇಲಾಖೆಯಲ್ಲಿ ಇರಲು ಯೋಗ್ಯರೂ ಅಲ್ಲ, ಯಾವ ಅರ್ಹತೆಯೂ ಅವರಿಗಿಲ್ಲ ಅನ್ನುವುದನ್ನು ಸರ್ಕಾರವು ಹೇಳುವಂತ ಕೆಲಸ ಈ ಪ್ರಕರಣದಲ್ಲಿ ಆಗಬೇಕಿದೆ. ಹಾಗೆಯೇ ಈ ಮೂವರಿಗೂ ಪ್ರಚೋದನೆ ನೀಡಿದಂತಹ ಆ ಟೀಮಿನ ಬಗ್ಗೆಯೂ ತನಿಖೆಯಾಗಬೇಕು ಹಾಗೂ ಅವರ ಮೇಲು ಕ್ರಮ ಆಗಬೇಕು.

    ಈಗಾಗಲೇ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕ್ಷಣದ ತನಿಖಾ ವರದಿಯನ್ನು ಬಹಿರಂಗಪಡಿಸಿದ್ದಾರೆ. ಇಲ್ಲಿ ಮೂವರು ಸಿಬ್ಬಂದಿಗಳು ಬೇಕಂತಲೇ, ಯಾವುದೋ ಉದ್ದೇಶವನ್ನು ಇಟ್ಟುಕೊಂಡು ಈ ತಪ್ಪುಗಳನ್ನು ಮಾಡಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಆಗಾಗಲೇ ಇಲಾಖೆಯು ಸಿಬ್ಬಂದಿಗಳಿಗೆ ತಿಳುವಳಿಕೆ ನೀಡಿತ್ತು ಇಲಾಖೆ ಮತ್ತು, ಟ್ರೈನಿಂಗ್ ಕೂಡ ನೀಡಿತ್ತು. ಅಷ್ಟಾದರೂ ಈ ಮೂವರು ಸಿಬ್ಬಂದಿಗಳು ಸರ್ಕಾರದ ಸುತ್ತೋಲೆಯನ್ನು ಬದಿಗಿಟ್ಟು, ಬೇಕಂತಲೇ ಜನಿವಾರಕ್ಕೆ ಕೈ ಹಾಕಿದ್ದಾರೆಂದು ಪ್ರಾಥಮಿಕ ತನಿಖೆಯ ವರದಿಯನ್ನು ಬಹಿರಂಗಪಡಿಸಿದ್ದಾರೆ.

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಈಗಾಗಲೇ ಇಲಾಖೆಗೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?