📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….

ಅಷ್ಟಕ್ಕೂ ಆ ಜನಿವಾರವು ಅವರಿಗೆ ಏನು ತೊಂದರೆ ಮಾಡಿತ್ತು? ಆ ಜನಿವಾರವನ್ನು ತೆಗೆಸಬೇಕು, ಆ ಮೂಲಕ ರಾಜ್ಯದ ಬ್ರಹ್ಮಣರಿಗೆ ಅವಮಾನ ಮಾಡಬೇಕು ಎಂದು, ಒಂದು ತಂಡವು ಪ್ರಯತ್ನಿಸುತ್ತಿತ್ತಾ ಎಂಬ ಪ್ರಶ್ನೆ ಎದ್ದೇಳುತ್ತಿದೆ ಈಗ. ಆ ತಂಡವು ಕೊಟ್ಟ ಬೆಂಬಲದ ಪರಿಣಾಮ, ಆ ಸಿಬ್ಬಂದಿಗಳು ಜನಿವಾರಕ್ಕೆ ಕೈಹಾಕಲು ಹೋಗಿ ಈಗ ಪರಮನೆಂಟಾಗಿ ಮನೆಯ ಮೂಲೆಯನ್ನು ಸೇರಲು ಹೊರಟಿದ್ದಾರೆ ಎನ್ನಲಾಗುತ್ತಿದೆ.

ಸಿಇಟಿ ಪರೀಕ್ಷೆಯು ರಾಜ್ಯ ರಾಜಧಾನಿಯಾದ ಬೆಂಗಳೂರಿನ ಕೃಪಾನಿ ಶಿಕ್ಷಣ ಸಂಸ್ಥೆಯಲ್ಲಿ ನಿಗದಿಯಾಗಿತ್ತು. ಹಾಗೆ ಪರೀಕ್ಷೆ ಬರೆಯಲು ಬಂದಂತಹ ವಿದ್ಯಾರ್ಥಿಗಳ ಜೇಬು ಹಾಗೂ  ಇತರ ಕಡೆ ಪರಿಶೀಲಿಸಿ ಯಾವುದೇ ನಕಲು ಹೊಡೆಯುವಂತಹ ಸಾಧನ ಇಲ್ಲದಿರುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಗೆ ಬಿಡುತ್ತಿದ್ದ ಮೂವರು ಸಿಬ್ಬಂದಿಗಳು, ಬ್ರಾಹ್ಮಣ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡುತ್ತಾರೆ. ಅವರು ಹಾಕಿಕೊಂಡಿದ್ದ ಜನಿವಾರವನ್ನು ತೆಗೆಯುವಂತೆ ಬಲವಂತ ಪಡಿಸುತ್ತಾರೆ.

ಕಳೆದ ವರ್ಷ ಶಿವಮೊಗ್ಗದಲ್ಲೂ ಇದೇ ತರಹದ ಘಟನೆ ನಡೆದಿತ್ತು. ಅದು ವಿವಾದಕ್ಕೂ ಕಾರಣವಾಗಿತ್ತು. ಅದರ ಮುಂದುವರಿದ ಭಾಗವೇ ಕೃಪಾನಿ ಶಿಕ್ಷಣ ಸಂಸ್ಥೆಯಲ್ಲಿ ಈಗ ನಡೆದದ್ದು. ಆದರೆ, ಈ ಬಾರಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಯಾವುದೇ ರೀತಿಯ ಸಬೂಬು ಹೇಳದೆ , ತಪ್ಪಿತಸ್ಥ ಮೂವರು ಸಿಬ್ಬಂದಿಗಳಾದ ಗಿರಿಜಮ್ಮ, ಸರಿತಾ ಹಾಗೂ ಸುಧಾಕರ್ ಅವರನ್ನು ತಕ್ಷಣವೇ ಅಮಾನತ್ತು ಗೊಳಿಸಿದ್ದಾರೆ. ಹಾಗೂ ಬ್ರಾಹ್ಮಣ ಮಹಾಸಭಾ ದೂರಿನ ಆಧಾರದಲ್ಲಿ ಅವರನ್ನು ಬಂಧಿಸಲಾಗಿದೆ.

ಇದು ಕೇವಲ ಮೂವರು ಸಿಬ್ಬಂದಿಗಳಿಂದ ನಡೆದಂತಹ ಕೆಲಸವಲ್ಲ. ಶಿವಮೊಗ್ಗದಲ್ಲಿ ನಡೆದ ವಿವಾದ, ಜನಿವಾರಕ್ಕೆ ಕೈ ಹಾಕಿದಾಗ ನಡೆದಂತಹ ಘಟನೆ ಯ ಬಗ್ಗೆ ಆ ಸಿಬ್ಬಂದಿಗಳಿಗೆ ಗೊತ್ತಿಲ್ಲ ಅನ್ನುವಂತಿಲ್ಲ. ನೂರಕ್ಕೆ ನೂರರಷ್ಟು ಅವರಿಗೆ ಗೊತ್ತಿತ್ತು. ಗೊತ್ತಿಲ್ಲದೇ ಇರುವಂತಹ ವ್ಯಕ್ತಿ ಇಂತಹ ಜಾಗದಲ್ಲಿ ದುಡಿಯಲು ಅರ್ಹನೂ ಅಲ್ಲ. ಆದರೂ ಆ ಮೂವರು ಸಿಬ್ಬಂದಿಗಳು ಮತ್ತೆ ಜನಿವಾರಕ್ಕೆ ಕೈ ಹಾಕುತ್ತಾರೆ ಎಂದರೆ, ಅವರನ್ನು ಈ ರೀತಿ ಮಾಡಲು ಪ್ರೇರೇಪಿಸಿದ  ಟೀಮ್ ಒಂದು ಇರಲೇಬೇಕು. ಆ ಟೀಮ್ ಯಾವುದು? ಆ ಟಿವಿನ ಹಿನ್ನೆಲೆ ಏನು? ಆ ಟೀಮಿನ ಗುರಿ ಏನು? ಎಲ್ಲವೂ ಸಂಪೂರ್ಣ ತನಿಖೆಗೆ ಒಳಪಡಬೇಕು. ಹಾಗೆಯೇ ಈ ಒಂದು ತನಿಖೆಯು ಮತ್ತು ನೀಡಲಾಗುವ ಶಿಕ್ಷೆಯು, ಮುಂದಿನ ದಿನದಲ್ಲಿ ನಡೆಯುವ ಎಲ್ಲಾ ತರಹದ ಹುಚ್ಛಾಟಗಳಿಗೂ ಕಡಿವಾಣ ಹಾಕುವ ರೀತಿಯಲ್ಲಿರಬೇಕು. ಅದರ ಅರ್ಥ, ಈ ಮೂವರು ಸಿಬ್ಬಂದಿಗಳನ್ನು ಪರ್ಮನೆಂಟಾಗಿ ಶಿಕ್ಷಣ ಇಲಾಖೆಯಿಂದಲೇ ಬ್ಯಾನ್ ಮಾಡಬೇಕು. ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಅವರಿಗೆ ದುಡಿಯಲು ಅವಕಾಶವೇ ಇರಬಾರದು. ಇಂತಹ ಕಲುಷಿತ ಮನಸ್ಸುಳ್ಳ ವ್ಯಕ್ತಿಗಳು ಶಿಕ್ಷಣ ಇಲಾಖೆಯಂತಹ ಪವಿತ್ರ ಸ್ಥಳದಲ್ಲಿ ಇರುವುದು ತಪ್ಪು. ಮನಸ್ಸಿನಲ್ಲಿ ಕಲ್ಮಶ ತುಂಬಿಕೊಂಡಂತವರು ಶಿಕ್ಷಣ ಇಲಾಖೆಯಲ್ಲಿ ಇರಲು ಯೋಗ್ಯರೂ ಅಲ್ಲ, ಯಾವ ಅರ್ಹತೆಯೂ ಅವರಿಗಿಲ್ಲ ಅನ್ನುವುದನ್ನು ಸರ್ಕಾರವು ಹೇಳುವಂತ ಕೆಲಸ ಈ ಪ್ರಕರಣದಲ್ಲಿ ಆಗಬೇಕಿದೆ. ಹಾಗೆಯೇ ಈ ಮೂವರಿಗೂ ಪ್ರಚೋದನೆ ನೀಡಿದಂತಹ ಆ ಟೀಮಿನ ಬಗ್ಗೆಯೂ ತನಿಖೆಯಾಗಬೇಕು ಹಾಗೂ ಅವರ ಮೇಲು ಕ್ರಮ ಆಗಬೇಕು.

ಈಗಾಗಲೇ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕ್ಷಣದ ತನಿಖಾ ವರದಿಯನ್ನು ಬಹಿರಂಗಪಡಿಸಿದ್ದಾರೆ. ಇಲ್ಲಿ ಮೂವರು ಸಿಬ್ಬಂದಿಗಳು ಬೇಕಂತಲೇ, ಯಾವುದೋ ಉದ್ದೇಶವನ್ನು ಇಟ್ಟುಕೊಂಡು ಈ ತಪ್ಪುಗಳನ್ನು ಮಾಡಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಆಗಾಗಲೇ ಇಲಾಖೆಯು ಸಿಬ್ಬಂದಿಗಳಿಗೆ ತಿಳುವಳಿಕೆ ನೀಡಿತ್ತು ಇಲಾಖೆ ಮತ್ತು, ಟ್ರೈನಿಂಗ್ ಕೂಡ ನೀಡಿತ್ತು. ಅಷ್ಟಾದರೂ ಈ ಮೂವರು ಸಿಬ್ಬಂದಿಗಳು ಸರ್ಕಾರದ ಸುತ್ತೋಲೆಯನ್ನು ಬದಿಗಿಟ್ಟು, ಬೇಕಂತಲೇ ಜನಿವಾರಕ್ಕೆ ಕೈ ಹಾಕಿದ್ದಾರೆಂದು ಪ್ರಾಥಮಿಕ ತನಿಖೆಯ ವರದಿಯನ್ನು ಬಹಿರಂಗಪಡಿಸಿದ್ದಾರೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಈಗಾಗಲೇ ಇಲಾಖೆಗೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….