📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….

ಅಷ್ಟಕ್ಕೂ ಆ ಜನಿವಾರವು ಅವರಿಗೆ ಏನು ತೊಂದರೆ ಮಾಡಿತ್ತು? ಆ ಜನಿವಾರವನ್ನು ತೆಗೆಸಬೇಕು, ಆ ಮೂಲಕ ರಾಜ್ಯದ ಬ್ರಹ್ಮಣರಿಗೆ ಅವಮಾನ ಮಾಡಬೇಕು ಎಂದು, ಒಂದು ತಂಡವು ಪ್ರಯತ್ನಿಸುತ್ತಿತ್ತಾ ಎಂಬ ಪ್ರಶ್ನೆ ಎದ್ದೇಳುತ್ತಿದೆ ಈಗ. ಆ ತಂಡವು ಕೊಟ್ಟ ಬೆಂಬಲದ ಪರಿಣಾಮ, ಆ ಸಿಬ್ಬಂದಿಗಳು ಜನಿವಾರಕ್ಕೆ ಕೈಹಾಕಲು ಹೋಗಿ ಈಗ ಪರಮನೆಂಟಾಗಿ ಮನೆಯ ಮೂಲೆಯನ್ನು ಸೇರಲು ಹೊರಟಿದ್ದಾರೆ ಎನ್ನಲಾಗುತ್ತಿದೆ.

ಸಿಇಟಿ ಪರೀಕ್ಷೆಯು ರಾಜ್ಯ ರಾಜಧಾನಿಯಾದ ಬೆಂಗಳೂರಿನ ಕೃಪಾನಿ ಶಿಕ್ಷಣ ಸಂಸ್ಥೆಯಲ್ಲಿ ನಿಗದಿಯಾಗಿತ್ತು. ಹಾಗೆ ಪರೀಕ್ಷೆ ಬರೆಯಲು ಬಂದಂತಹ ವಿದ್ಯಾರ್ಥಿಗಳ ಜೇಬು ಹಾಗೂ  ಇತರ ಕಡೆ ಪರಿಶೀಲಿಸಿ ಯಾವುದೇ ನಕಲು ಹೊಡೆಯುವಂತಹ ಸಾಧನ ಇಲ್ಲದಿರುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಗೆ ಬಿಡುತ್ತಿದ್ದ ಮೂವರು ಸಿಬ್ಬಂದಿಗಳು, ಬ್ರಾಹ್ಮಣ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡುತ್ತಾರೆ. ಅವರು ಹಾಕಿಕೊಂಡಿದ್ದ ಜನಿವಾರವನ್ನು ತೆಗೆಯುವಂತೆ ಬಲವಂತ ಪಡಿಸುತ್ತಾರೆ.

ಕಳೆದ ವರ್ಷ ಶಿವಮೊಗ್ಗದಲ್ಲೂ ಇದೇ ತರಹದ ಘಟನೆ ನಡೆದಿತ್ತು. ಅದು ವಿವಾದಕ್ಕೂ ಕಾರಣವಾಗಿತ್ತು. ಅದರ ಮುಂದುವರಿದ ಭಾಗವೇ ಕೃಪಾನಿ ಶಿಕ್ಷಣ ಸಂಸ್ಥೆಯಲ್ಲಿ ಈಗ ನಡೆದದ್ದು. ಆದರೆ, ಈ ಬಾರಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಯಾವುದೇ ರೀತಿಯ ಸಬೂಬು ಹೇಳದೆ , ತಪ್ಪಿತಸ್ಥ ಮೂವರು ಸಿಬ್ಬಂದಿಗಳಾದ ಗಿರಿಜಮ್ಮ, ಸರಿತಾ ಹಾಗೂ ಸುಧಾಕರ್ ಅವರನ್ನು ತಕ್ಷಣವೇ ಅಮಾನತ್ತು ಗೊಳಿಸಿದ್ದಾರೆ. ಹಾಗೂ ಬ್ರಾಹ್ಮಣ ಮಹಾಸಭಾ ದೂರಿನ ಆಧಾರದಲ್ಲಿ ಅವರನ್ನು ಬಂಧಿಸಲಾಗಿದೆ.

ಇದು ಕೇವಲ ಮೂವರು ಸಿಬ್ಬಂದಿಗಳಿಂದ ನಡೆದಂತಹ ಕೆಲಸವಲ್ಲ. ಶಿವಮೊಗ್ಗದಲ್ಲಿ ನಡೆದ ವಿವಾದ, ಜನಿವಾರಕ್ಕೆ ಕೈ ಹಾಕಿದಾಗ ನಡೆದಂತಹ ಘಟನೆ ಯ ಬಗ್ಗೆ ಆ ಸಿಬ್ಬಂದಿಗಳಿಗೆ ಗೊತ್ತಿಲ್ಲ ಅನ್ನುವಂತಿಲ್ಲ. ನೂರಕ್ಕೆ ನೂರರಷ್ಟು ಅವರಿಗೆ ಗೊತ್ತಿತ್ತು. ಗೊತ್ತಿಲ್ಲದೇ ಇರುವಂತಹ ವ್ಯಕ್ತಿ ಇಂತಹ ಜಾಗದಲ್ಲಿ ದುಡಿಯಲು ಅರ್ಹನೂ ಅಲ್ಲ. ಆದರೂ ಆ ಮೂವರು ಸಿಬ್ಬಂದಿಗಳು ಮತ್ತೆ ಜನಿವಾರಕ್ಕೆ ಕೈ ಹಾಕುತ್ತಾರೆ ಎಂದರೆ, ಅವರನ್ನು ಈ ರೀತಿ ಮಾಡಲು ಪ್ರೇರೇಪಿಸಿದ  ಟೀಮ್ ಒಂದು ಇರಲೇಬೇಕು. ಆ ಟೀಮ್ ಯಾವುದು? ಆ ಟಿವಿನ ಹಿನ್ನೆಲೆ ಏನು? ಆ ಟೀಮಿನ ಗುರಿ ಏನು? ಎಲ್ಲವೂ ಸಂಪೂರ್ಣ ತನಿಖೆಗೆ ಒಳಪಡಬೇಕು. ಹಾಗೆಯೇ ಈ ಒಂದು ತನಿಖೆಯು ಮತ್ತು ನೀಡಲಾಗುವ ಶಿಕ್ಷೆಯು, ಮುಂದಿನ ದಿನದಲ್ಲಿ ನಡೆಯುವ ಎಲ್ಲಾ ತರಹದ ಹುಚ್ಛಾಟಗಳಿಗೂ ಕಡಿವಾಣ ಹಾಕುವ ರೀತಿಯಲ್ಲಿರಬೇಕು. ಅದರ ಅರ್ಥ, ಈ ಮೂವರು ಸಿಬ್ಬಂದಿಗಳನ್ನು ಪರ್ಮನೆಂಟಾಗಿ ಶಿಕ್ಷಣ ಇಲಾಖೆಯಿಂದಲೇ ಬ್ಯಾನ್ ಮಾಡಬೇಕು. ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಅವರಿಗೆ ದುಡಿಯಲು ಅವಕಾಶವೇ ಇರಬಾರದು. ಇಂತಹ ಕಲುಷಿತ ಮನಸ್ಸುಳ್ಳ ವ್ಯಕ್ತಿಗಳು ಶಿಕ್ಷಣ ಇಲಾಖೆಯಂತಹ ಪವಿತ್ರ ಸ್ಥಳದಲ್ಲಿ ಇರುವುದು ತಪ್ಪು. ಮನಸ್ಸಿನಲ್ಲಿ ಕಲ್ಮಶ ತುಂಬಿಕೊಂಡಂತವರು ಶಿಕ್ಷಣ ಇಲಾಖೆಯಲ್ಲಿ ಇರಲು ಯೋಗ್ಯರೂ ಅಲ್ಲ, ಯಾವ ಅರ್ಹತೆಯೂ ಅವರಿಗಿಲ್ಲ ಅನ್ನುವುದನ್ನು ಸರ್ಕಾರವು ಹೇಳುವಂತ ಕೆಲಸ ಈ ಪ್ರಕರಣದಲ್ಲಿ ಆಗಬೇಕಿದೆ. ಹಾಗೆಯೇ ಈ ಮೂವರಿಗೂ ಪ್ರಚೋದನೆ ನೀಡಿದಂತಹ ಆ ಟೀಮಿನ ಬಗ್ಗೆಯೂ ತನಿಖೆಯಾಗಬೇಕು ಹಾಗೂ ಅವರ ಮೇಲು ಕ್ರಮ ಆಗಬೇಕು.

ಈಗಾಗಲೇ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕ್ಷಣದ ತನಿಖಾ ವರದಿಯನ್ನು ಬಹಿರಂಗಪಡಿಸಿದ್ದಾರೆ. ಇಲ್ಲಿ ಮೂವರು ಸಿಬ್ಬಂದಿಗಳು ಬೇಕಂತಲೇ, ಯಾವುದೋ ಉದ್ದೇಶವನ್ನು ಇಟ್ಟುಕೊಂಡು ಈ ತಪ್ಪುಗಳನ್ನು ಮಾಡಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಆಗಾಗಲೇ ಇಲಾಖೆಯು ಸಿಬ್ಬಂದಿಗಳಿಗೆ ತಿಳುವಳಿಕೆ ನೀಡಿತ್ತು ಇಲಾಖೆ ಮತ್ತು, ಟ್ರೈನಿಂಗ್ ಕೂಡ ನೀಡಿತ್ತು. ಅಷ್ಟಾದರೂ ಈ ಮೂವರು ಸಿಬ್ಬಂದಿಗಳು ಸರ್ಕಾರದ ಸುತ್ತೋಲೆಯನ್ನು ಬದಿಗಿಟ್ಟು, ಬೇಕಂತಲೇ ಜನಿವಾರಕ್ಕೆ ಕೈ ಹಾಕಿದ್ದಾರೆಂದು ಪ್ರಾಥಮಿಕ ತನಿಖೆಯ ವರದಿಯನ್ನು ಬಹಿರಂಗಪಡಿಸಿದ್ದಾರೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಈಗಾಗಲೇ ಇಲಾಖೆಗೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
“ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
“ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ