📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?

ಪ್ರವಾಸೋದ್ಯಮ ಇಲಾಖೆಗೆ ಜವಾಬ್ದಾರಿ ಅಂತ ಏನಾದರೂ ಇದೆಯಾ? ಅಥವಾ ಯಾವುದೋ ವ್ಯಕ್ತಿಗಳಿಗೆ ಅಥವಾ ಕಂಪನಿಗೆ  ಟೆಂಡರ್ ನೀಡಿ ಕೈ ತೊಳೆದುಕೊಳ್ಳುವುದಕ್ಕಷ್ಟೇ ಅವರ ಕಾರ್ಯವು ಸೀಮಿತವಾ? ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ಮೊದಲೇ ನೀಡಿತ್ತೋ ಅಥವಾ ಇಲ್ಲವೋ? ಇಲಾಖೆ ಮುನ್ಸೂಚನೆ ನೀಡಿದ್ದರೆ, ಅದರ ಪಾಲನೆ ಮಾಡಬೇಕಾದ್ದು ಯಾರು? ಸ್ಥಳೀಯ ಆಡಳಿತವು ಇಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ?

ಮಧ್ಯ ಪ್ರದೇಶದ, ಜಬಲ್ಪುರ್ ನರ್ಮದಾ ನದಿಯಲ್ಲಿನ ದುರಂತಕ್ಕೆ ಇಲ್ಲಿಯವರೆಗೆ 13ಕ್ಕೂ ಹೆಚ್ಚು ಜನರು  ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಮಹಿಳೆಯೊಬ್ಬರು, ಮಗುವನ್ನು ಎದೆಗೆವಚಿ ಹಿಡಿದು ಸಾವನ್ನಪ್ಪಿರುವ ಫೋಟೋ ವೈರಲ್ ಆಗಿತ್ತು. ಈಗಲೂ ಆ ಫೋಟೋ ಮನ ಕಲಕುವಂತಿದೆ. ಅದು ತಿದ್ದಿದ ಫೋಟೋ ಇರಲಿ, ಒರಿಜಿನಲ್ ಫೋಟೋನೇ ಇರಲಿ, ಆ ವಿಷಯ ಅನವಶ್ಯಕ ಈಗ. ಯಾಕೆಂದರೆ ತಾಯಿ ಮಗು ಇಬ್ಬರೂ ಮೃತಪಟ್ಟಿದ್ದಾರೆ.

ದುರ್ಘಟನೆ ನಡೆಯುವುದು ಇದೇ ಮೊದಲಿನಲ್ಲ. ಸಾಕಷ್ಟು ದುರ್ಘಟನೆಗಳು ನಡೆದಿದೆ. ಮುಂದೆಯೂ ನಡೆಯಬಹುದು. ಆದರೆ ಆ ದುರ್ಘಟನೆಗಳಿಗೆ ಕಾರಣ ಮತ್ತು ನಿಷ್ಕಾಳಜಿ ಇದೆ ಅಂತ ಗೊತ್ತಾದರೆ ಅದನ್ನು ಕ್ಷಮಿಸಲಾಗದು. ಈಗ ಮಧ್ಯ ಪ್ರದೇಶದ ಜಬಲ್ಪುರ್ ದುರ್ಘಟನೆಗೆ ಸಂಬಂಧಿಸಿದಂತೆ, ವ್ಯವಸ್ಥೆಯ ತಪ್ಪುಗಳ ಬಗ್ಗೆಯೂ ಬಹಿರಂಗ ತನಿಖೆಯಾಗಬೇಕು. ಯಾವುದೋ ಒಂದು ಬೋಟ್ ಮಾಲೀಕ ಅಥವಾ ನಾವಿಕನ ಮೇಲೆ ಕ್ರಮ ಕೈಗೊಂಡು ತಿಪ್ಪೆ ಸಾರಿಸುವ ಕೆಲಸ ಆಗಬಾರದು. ಬೋಟ್ ಮಾಲೀಕರು ಅಥವಾ ನಾವಿಕರು ತಮ್ಮ ಕೆಲಸವನ್ನು ಕಮರ್ಷಿಯಲ್ ಆಗಿ ಮಾಡುತ್ತಿರುತ್ತಾರೆ. ಅದರಲ್ಲಿ ತಪ್ಪು ಇಲ್ಲ. ಆದರೆ ಸಂಬಂಧಪಟ್ಟ ಇಲಾಖೆಯ ವತಿಯಿಂದ, ಅಲ್ಲಿ ನಿರ್ದೇಶನವು ಆಗಬೇಕಿತ್ತು ತಾನೆ? ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ದೇಶಸಿದಂತೆಯೇ ಬೋಟ್ ಮಾಲೀಕರು, ನಾವಿಕರು ನಡೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳೇ ಅಲ್ಲಿರದಿದ್ದರೆ ಬೋಟ್ ಮಾಲೀಕರು ಅಥವಾ ನಾವಿಕರು ತಮಗೆ ಬೇಕಾದ ಹಾಗೆ ನಡೆದುಕೊಳ್ಳುತ್ತಾರೆ. ಬಹುಶಹ ಅಲ್ಲಿ ಆದದ್ದು ಅದೇ ಇರಬೇಕು.

ಹಾಗೆಯೇ, ಹವಾಮಾನ ವೈಪರಿತ್ಯದಿಂದಾಗಿ, ಇದ್ದಕ್ಕಿದ್ದಂತೆ ಬಿರುಬೀಸಾದ ಗಾಳಿ ಬೀಸಲು ಪ್ರಾರಂಭಿಸಿದ್ದರಿಂದ, ಬೋಟ್ ಮಗುಚಿ ಬಿತ್ತು ಅನ್ನೋದು ಸರಿಯೇ. ಆದರೆ ಹವಾಮಾನ ಇಲಾಖೆಗೆ ಇದರ ಅರಿವು ಇರಬೇಕಿತ್ತು ತಾನೆ? ಇಲಾಖೆಯು ತತಕ್ಷಣವೇ ಎಲ್ಲಾ ಕಡೆಯೂ ಮೆಸೇಜನ್ನು ಕಳುಹಿಸಿರಬೇಕಿತ್ತು. ಆ ಮೆಸೇಜನ್ನು ಆ ಇಲಾಖೆಯು ಕಳಿಸಿದೀಯೋ ಇಲ್ಲವೋ ಅದು  ಮುಖ್ಯ ಅನ್ನಿಸಿಕೊಳ್ಳುತ್ತದೆ. ಇಲಾಖೆಯ ವೈಪರಿತ್ಯದ ಮೆಸೇಜನ್ನು ಕಳುಹಿಸಿಲ್ಲ ಎಂದರೆ, ಹವಾಮಾನ ಇಲಾಖೆಯೇ ಈ ಎಲ್ಲಾ ಸಾವುಗಳಿಗೆ ಹೊಣೆ ಕೊರಬೇಕು.  ಹವಾಮಾನ ಇಲಾಖೆಯು ವೈಪರಿತ್ಯದ ಮೆಸೇಜನ್ನು ಕಳುಹಿಸಿದೆ ಅಂತಾದರೆ, ಆ ಮೆಸೇಜ್ ಯಾರಿಗೆ ಕಳುಹಿಸಿದ್ದು ಅನ್ನುವುದು ಇಲ್ಲಿ ಇಂಪಾರ್ಟೆಂಟ್ ಆಗುತ್ತದೆ.

ನೋ ಡೌಟ್, ಇದು ಪ್ರವಾಸೋದ್ಯಮ ಇಲಾಖೆಗೆ ಸಂಬಂಧಪಟ್ಟ ಮ್ಯಾಟರ್. ಅವರ ನಿಶಾರೆಯಲ್ಲಿ ಪ್ರವಾಸೋದ್ಯಮದ, ಇಂತಹ ಚಟುವಟಿಕೆಗಳು ನಡೆಯುತ್ತವೆ. ಇಲಾಖೆಯ ಪ್ರತಿನಿಧಿಗಳು ಇಂತಹ ಸ್ಥಳಗಳಲ್ಲಿ ಖುದ್ದಾಗಿ ಇರಬೇಕು, ಹಾಗೂ ಅವರು ಬೋಟ್ ಮಾಲಕರಿಗೆ ಅಥವಾ ನಾವಿಕರಿಗೆ, ಸಿಬ್ಬಂದಿಗಳಿಗೆ ಗೈಡ್ ಮಾಡಬೇಕು. ಹವಾಮಾನ ಇಲಾಖೆಯಿಂದ ಬರುವ ಮೆಸೇಜನ್ನು ಆಧರಿಸಿ ತತಕ್ಷಣದ ನಿರ್ಧಾರ ತೆಗೆದುಕೊಳ್ಳಬೇಕು. ಆ ಕೆಲಸ ಮಾಡಲು ಅಲ್ಲಿ ಅಧಿಕಾರಿಗಳನ್ನು ನೇಮಿಸಿದ್ದರಾ?

ಜನರು ಈ ದುರ್ಘಟನೆಯ ವಿಡಿಯೋ ಫೋಟೋಗಳನ್ನು ನೋಡಿ ಮನಸ್ಸು ಕೆಡಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಜನರು ಸಾಮಾನ್ಯವಾಗಿ , ಅಲ್ಲಿನ ಬೋಟ್ ಮಾಲೀಕ ಹಾಗೂ ನಾವಿಕರ ಬಗ್ಗೆ ಮಾತನಾಡುತ್ತಾರೆ ಎನ್ನುವುದು ತಿಳಿಯದ ವಿಚಾರವೇನಲ್ಲ. ಇದೇ ಕಾರಣಕ್ಕೆ ಅನೇಕ ಸತ್ಯಗಳು ಅಲ್ಲಿಯೇ ಹೂತು ಹೋಗುತ್ತವೆ. ತಪ್ಪಿತಸ್ಥರು ಬಚವಾಗುತ್ತಾರೆ ಕೂಡ. ಅದಕ್ಕೆ ಕಾರಣ, ವಿಷಯದ ಆಳಕ್ಕೆ ಹೋಗದೆ ಇರುವಂತದ್ದೇ ಆಗಿದೆ. ಮಧ್ಯಪ್ರದೇಶದ ಸರ್ಕಾರ, ಈ ವಿಚಾರದಲ್ಲಿ ಆಳವಾದ ತನಿಖೆಗೆ ಇಳಿಯಲೇಬೇಕು. ಹವಾಮಾನ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಇವೆರಡನ್ನೂ ಅಪರಾಧಿ ಸ್ಥಾನದಲ್ಲಿ ಕೂರಿಸಲೇಬೇಕಾಗುತ್ತದೆ. ಹಾಗೆಯೇ ಅವರು ತನಿಖೆಯನ್ನೂ ಎದುರಿಸಬೇಕು. ಅವರು ತನಿಖೆ ಎದುರಿಸಲು ರಾಜಕಾರಣಿಗಳು ಮತ್ತು ಸರ್ಕಾರ ಬಿಡುತ್ತದ?

COMMENTS

Login with Gmail to comment

ಇನ್ನಷ್ಟು ಸುದ್ದಿ

ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್