📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ

    ದಾವಣಗೆರೆ ಉಪಚುನಾವಣೆಯ ರಿಸಲ್ಟ್ ಇನ್ನೂ ಬಂದಿಲ್ಲ. ಆದರೆ ಅದಕ್ಕೂ ಮೊದಲೇ ಇಬ್ಬರು ನಾಯಕರ ತಲೆದಂಡವಾಗಿದೆ. ಇನ್ನೊಬ್ಬ ಸಚಿವರ ತಲೆದಂಡಕ್ಕೆ ಕ್ಷಣಗಣನೆಯ ಕೌಂಟ್ ಶುರುವಾಗಿದೆ.

    ಸಚಿವ ಜಮೀರ್ ಅಹ್ಮದ್ ಖಾನ್ ನಾಳೆ ಸಂಜೆಯ ಹೊತ್ತಿಗೆ ಸಚಿವ ಸ್ಥಾನದಿಂದ ಹೊರದಬ್ಬಲ್ಪಡಬಹುದು ಎಂಬ ಮೆಸೇಜ್ ಅಧಿಕೃತವಾಗಿ ಬರುತ್ತಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಜಯಮೀರ್ ಅಹ್ಮದ್ ರವರನ್ನು ಬಚಾವ್ ಮಾಡುವ ಪ್ರಯತ್ನ ಮಾಡುತ್ತಿದ್ದರೂ, ಅದು ವರ್ಕ್ ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಜಮೀರ್ ಅಹ್ಮದ್ ಖಾನ್, ತೇಪೆ ಹಾಕುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಖುದ್ದು  ಪಕ್ಷವೇ ಜಮೀರ್ ಅಹ್ಮದ್ ಗೆ ಒಂದು ಜವಾಬ್ದಾರಿಯನ್ನು ವಹಿಸಿತ್ತು. ತಪ್ಪು ಅವರಿಂದ ಏನೇ ಆಗಿದ್ದರು, ಅದನ್ನು ಸರಿಪಡಿಸಲು ಒಂದು ಅವಕಾಶವನ್ನು ನೀಡಿತ್ತು. ಆದರೆ ಜಮೀರ್ ಅಹ್ಮದ್ ಖಾನ್ ಅವಕಾಶವನ್ನು ಬಳಸಿಕೊಳ್ಳಲಿಲ್ಲ. ತಾನು ಮಾಡಿರುವ ತಪ್ಪನ್ನು ಸರಿಪಡಿಸಬೇಕಾದ ಸಮಯದಲ್ಲಿ ಸರಿಪಡಿಸಲು ಹೋಗಲಿಲ್ಲ. ಪರಿಣಾಮ, ಉಪಚುನಾವಣೆಯ ಮೇಲೆ ದೊಡ್ಡ ಪರಿಣಾಮವನ್ನೇ ಬೀರಿದೆ. ಪಕ್ಷದ ಅಭ್ಯರ್ಥಿಯು ಗೆಲ್ಲಬೇಕಾದ ಸಂದರ್ಭದಲ್ಲಿ ಸೋಲಿನ ಸುಳಿಗೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ರೊಚ್ಚಿಗೆಗೆದ್ದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವಂತಹ ನಾಯಕರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪಕ್ಷವನ್ನು ಉಳಿಸಿಕೊಳ್ಳುವುದು ಕಷ್ಟ ಎಂದು ಖಡಕ್ಕಾಗಿ ಹೈಕಮಾಂಡ್ಗೆ ಸಂದೇಶ ಕಳುಹಿಸುತ್ತಾರೆ. ಹೈಕಮಾಂಡ್ ಆ ಸಂದೇಶವನ್ನು ಸೀರಿಯಸ್ಸಾಗಿ ತೆಗೆದುಕೊಳ್ಳುವುದರ ಜೊತೆಗೆ, ಸಂಪೂರ್ಣ ವರದಿಯನ್ನು ಕೇಳುತ್ತದೆ. ಹಾಗೆಯೇ ದಾವಣಗೆರೆಯ ವಿಚಾರದಲ್ಲಿ ಏನೆಲ್ಲಾ ನಡೆದಿದೆ ಯಾವ ಯಾವ ನಾಯಕರಿಂದ ತಪ್ಪಾಗಿದೆ ಎನ್ನುವುದರ ಬಗ್ಗೆ ಒಂದು ತನಿಖಾ ವರದಿಯನ್ನು ಹೈಕಮಾಂಡ್ ತರಿಸಿಕೊಳ್ಳುತ್ತದೆ. ವರದಿಯ ಆಧಾರದ ಮೇಲೆಯೇ ಇಬ್ಬರು ವಿಧಾನ ಪರಿಷತ್ ಸದಸ್ಯರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಲಾಗಿದೆ. ಈಗ ಉಳಿದದ್ದು ಸಚಿವ ಜಮೀರ್ ಅಹಮದ್ ಖಾನ್ ಒಬ್ಬರೇ.

    ಮಂಗಳವಾರ  ಸಂಜೆಯ ಒಳಗೆನೇ ಜಮೀರ್ ಅಹ್ಮದ್ ರನ್ನ ಸಚಿವ ಸ್ಥಾನದಿಂದ ಹೊರಗಟ್ಟಿ ಎಂಬ ಸಂದೇಶ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರದ ತಡರಾತ್ರಿಯೇ  ದೆಹಲಿಯಿಂದ ಬಂದಾಗಿದೆ. ಹಾಗಾಗಿಯೇ ಮಂಗಳವಾರ ಬೆಳಿಗ್ಗೆ ಜಮೀರ್ ಅಹ್ಮದ್ ಖಾನ್ ಗೆ ಫೋನ್ ಮಾಡಿ ಕರೆಸಿಕೊಳ್ಳುತ್ತಾರೆ ಮುಖ್ಯಮಂತ್ರಿಗಳು. ಮಂತ್ರಿಗಳು,  ನಿನ್ನನ್ನು ಬಚಾವ್ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಮೆಸೇಜನ್ನು ಕೊಡುತ್ತಿರುವಂತೆಯೇ, ಜಮೀರ್ ಅಹಮದ್ ಖಾನ್ ಒಂದಷ್ಟು ಸ್ಪಷ್ಟನೆ ಕೊಡಲು ಮುಂದಾಗುತ್ತಾರೆ. ಹಾಗೆ ಮುಂದಾಗುತ್ತಿದ್ದಂತೆಯೇ ಈಗ ಅದ್ಯಾವುದೂ ವರ್ಕ್ ಆಗುವುದಿಲ್ಲ. ಸ್ಪಷ್ಟನೆ ಏನೇ ಕೊಡುವುದಿದ್ದರೂ ದೆಹಲಿಗೆ ಹೋಗಿ ಕೊಡಿ. ಈಗ ನಾನು ಕಾರ್ಯಕ್ರಮಕ್ಕೆ ಹೊರಟಿದ್ದೇನೆ ಎಂದು ಹೇಳಿ, ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಹೊರಡುತ್ತಾರೆ. ಇದರ ಅರ್ಥ ಸ್ಪಷ್ಟವಾಗಿದೆ , ಸಚಿವ ಜಮೀರ್ ಅಹ್ಮದ್ ಖಾನ್ ನಾಳೆ ಸಚಿವ ಸ್ಥಾನದಲ್ಲಿ ಮುಂದುವರೆಯಬೇಕು ಎಂದರೆ ದೊಡ್ಡ ಮ್ಯಾಜಿಕ್  ಆಗಬೇಕು ಅಷ್ಟೇ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಇ.ಡಿ. ಶಾಕ್: 21 ಕಡೆ ಏಕಕಾಲದ ದಾಳಿ
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    “ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!