📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ

ದಾವಣಗೆರೆ ಉಪಚುನಾವಣೆಯ ರಿಸಲ್ಟ್ ಇನ್ನೂ ಬಂದಿಲ್ಲ. ಆದರೆ ಅದಕ್ಕೂ ಮೊದಲೇ ಇಬ್ಬರು ನಾಯಕರ ತಲೆದಂಡವಾಗಿದೆ. ಇನ್ನೊಬ್ಬ ಸಚಿವರ ತಲೆದಂಡಕ್ಕೆ ಕ್ಷಣಗಣನೆಯ ಕೌಂಟ್ ಶುರುವಾಗಿದೆ.

ಸಚಿವ ಜಮೀರ್ ಅಹ್ಮದ್ ಖಾನ್ ನಾಳೆ ಸಂಜೆಯ ಹೊತ್ತಿಗೆ ಸಚಿವ ಸ್ಥಾನದಿಂದ ಹೊರದಬ್ಬಲ್ಪಡಬಹುದು ಎಂಬ ಮೆಸೇಜ್ ಅಧಿಕೃತವಾಗಿ ಬರುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಜಯಮೀರ್ ಅಹ್ಮದ್ ರವರನ್ನು ಬಚಾವ್ ಮಾಡುವ ಪ್ರಯತ್ನ ಮಾಡುತ್ತಿದ್ದರೂ, ಅದು ವರ್ಕ್ ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಜಮೀರ್ ಅಹ್ಮದ್ ಖಾನ್, ತೇಪೆ ಹಾಕುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಖುದ್ದು  ಪಕ್ಷವೇ ಜಮೀರ್ ಅಹ್ಮದ್ ಗೆ ಒಂದು ಜವಾಬ್ದಾರಿಯನ್ನು ವಹಿಸಿತ್ತು. ತಪ್ಪು ಅವರಿಂದ ಏನೇ ಆಗಿದ್ದರು, ಅದನ್ನು ಸರಿಪಡಿಸಲು ಒಂದು ಅವಕಾಶವನ್ನು ನೀಡಿತ್ತು. ಆದರೆ ಜಮೀರ್ ಅಹ್ಮದ್ ಖಾನ್ ಅವಕಾಶವನ್ನು ಬಳಸಿಕೊಳ್ಳಲಿಲ್ಲ. ತಾನು ಮಾಡಿರುವ ತಪ್ಪನ್ನು ಸರಿಪಡಿಸಬೇಕಾದ ಸಮಯದಲ್ಲಿ ಸರಿಪಡಿಸಲು ಹೋಗಲಿಲ್ಲ. ಪರಿಣಾಮ, ಉಪಚುನಾವಣೆಯ ಮೇಲೆ ದೊಡ್ಡ ಪರಿಣಾಮವನ್ನೇ ಬೀರಿದೆ. ಪಕ್ಷದ ಅಭ್ಯರ್ಥಿಯು ಗೆಲ್ಲಬೇಕಾದ ಸಂದರ್ಭದಲ್ಲಿ ಸೋಲಿನ ಸುಳಿಗೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ರೊಚ್ಚಿಗೆಗೆದ್ದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವಂತಹ ನಾಯಕರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪಕ್ಷವನ್ನು ಉಳಿಸಿಕೊಳ್ಳುವುದು ಕಷ್ಟ ಎಂದು ಖಡಕ್ಕಾಗಿ ಹೈಕಮಾಂಡ್ಗೆ ಸಂದೇಶ ಕಳುಹಿಸುತ್ತಾರೆ. ಹೈಕಮಾಂಡ್ ಆ ಸಂದೇಶವನ್ನು ಸೀರಿಯಸ್ಸಾಗಿ ತೆಗೆದುಕೊಳ್ಳುವುದರ ಜೊತೆಗೆ, ಸಂಪೂರ್ಣ ವರದಿಯನ್ನು ಕೇಳುತ್ತದೆ. ಹಾಗೆಯೇ ದಾವಣಗೆರೆಯ ವಿಚಾರದಲ್ಲಿ ಏನೆಲ್ಲಾ ನಡೆದಿದೆ ಯಾವ ಯಾವ ನಾಯಕರಿಂದ ತಪ್ಪಾಗಿದೆ ಎನ್ನುವುದರ ಬಗ್ಗೆ ಒಂದು ತನಿಖಾ ವರದಿಯನ್ನು ಹೈಕಮಾಂಡ್ ತರಿಸಿಕೊಳ್ಳುತ್ತದೆ. ವರದಿಯ ಆಧಾರದ ಮೇಲೆಯೇ ಇಬ್ಬರು ವಿಧಾನ ಪರಿಷತ್ ಸದಸ್ಯರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಲಾಗಿದೆ. ಈಗ ಉಳಿದದ್ದು ಸಚಿವ ಜಮೀರ್ ಅಹಮದ್ ಖಾನ್ ಒಬ್ಬರೇ.

ಮಂಗಳವಾರ  ಸಂಜೆಯ ಒಳಗೆನೇ ಜಮೀರ್ ಅಹ್ಮದ್ ರನ್ನ ಸಚಿವ ಸ್ಥಾನದಿಂದ ಹೊರಗಟ್ಟಿ ಎಂಬ ಸಂದೇಶ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರದ ತಡರಾತ್ರಿಯೇ  ದೆಹಲಿಯಿಂದ ಬಂದಾಗಿದೆ. ಹಾಗಾಗಿಯೇ ಮಂಗಳವಾರ ಬೆಳಿಗ್ಗೆ ಜಮೀರ್ ಅಹ್ಮದ್ ಖಾನ್ ಗೆ ಫೋನ್ ಮಾಡಿ ಕರೆಸಿಕೊಳ್ಳುತ್ತಾರೆ ಮುಖ್ಯಮಂತ್ರಿಗಳು. ಮಂತ್ರಿಗಳು,  ನಿನ್ನನ್ನು ಬಚಾವ್ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಮೆಸೇಜನ್ನು ಕೊಡುತ್ತಿರುವಂತೆಯೇ, ಜಮೀರ್ ಅಹಮದ್ ಖಾನ್ ಒಂದಷ್ಟು ಸ್ಪಷ್ಟನೆ ಕೊಡಲು ಮುಂದಾಗುತ್ತಾರೆ. ಹಾಗೆ ಮುಂದಾಗುತ್ತಿದ್ದಂತೆಯೇ ಈಗ ಅದ್ಯಾವುದೂ ವರ್ಕ್ ಆಗುವುದಿಲ್ಲ. ಸ್ಪಷ್ಟನೆ ಏನೇ ಕೊಡುವುದಿದ್ದರೂ ದೆಹಲಿಗೆ ಹೋಗಿ ಕೊಡಿ. ಈಗ ನಾನು ಕಾರ್ಯಕ್ರಮಕ್ಕೆ ಹೊರಟಿದ್ದೇನೆ ಎಂದು ಹೇಳಿ, ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಹೊರಡುತ್ತಾರೆ. ಇದರ ಅರ್ಥ ಸ್ಪಷ್ಟವಾಗಿದೆ , ಸಚಿವ ಜಮೀರ್ ಅಹ್ಮದ್ ಖಾನ್ ನಾಳೆ ಸಚಿವ ಸ್ಥಾನದಲ್ಲಿ ಮುಂದುವರೆಯಬೇಕು ಎಂದರೆ ದೊಡ್ಡ ಮ್ಯಾಜಿಕ್  ಆಗಬೇಕು ಅಷ್ಟೇ.

COMMENTS

Login with Gmail to comment

ಇನ್ನಷ್ಟು ಸುದ್ದಿ

“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.