📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ

    30 ವರ್ಷ ದನದ ಕೊಟ್ಟಿಗೆಯಲ್ಲಿ ಬದುಕಿದ ನಾಗ!! ಒಂದು ನಯಾ ಪೈಸೆಯೂ ಸಂಬಳ ಕೊಡದೆ ಮೂರು ದಶಕದಿಂದ ದುಡಿಸಿ ಕೊಳ್ಳಲಾಗುತ್ತಿದ್ದ ಪ್ರಕರಣ.. ಉಡುಪಿಯಲ್ಲಿ ಶಾಕ್… ಆರೋಪಿ –ಮಹಿಳೆ ಬಂಧನ

    ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪದ ಕಬೈಲು ಗ್ರಾಮದಲ್ಲಿ ಅಮಾನವೀಯತೆಯನ್ನು ಕಂಗೊಳಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು ಸುಮಾರು 30 ವರ್ಷಗಳಿಂದ ಜೀತದಾಳಾಗಿ ಮನೆಯಲ್ಲಿ ಕೆಲಸ ಮಾಡಿಸಿಕೊಂಡು ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಇದೀಗ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು,  ದಾಸ್ಯ ವ್ಯವಸ್ಥೆಯಂತಹ ಪರಿಸ್ಥಿತಿ ಇನ್ನೂ ಸಮಾಜದಲ್ಲಿ ಇರುವುದನ್ನು ಈ ಪ್ರಕರಣ ಮತ್ತೆ ನೆನಪಿಸಿದೆ.

    30 ವರ್ಷ ಕೆಲಸ ಮಾಡಿದರೂ ಸಂಬಳ ಇಲ್ಲ. ದನದ ಕೊಟ್ಟಿಗೆಯಲ್ಲೇ ವಾಸ – ಮಾನವೀಯತೆ ಮರೆತ ವರ್ತನೆ, ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಜೀತದಾಳು ಪದ್ಧತಿ, ಜೀತಕ್ಕೆ ಇಟ್ಟುಕೊಂಡವರು ಪುಗಸಟ್ಟೆ ಕೆಲಸ ಮಾಡಿಸಿಕೊಂಡು  ದರ್ಬಾರ್ ನಡೆಸುತ್ತಿದ್ದರು.

    65 ವರ್ಷದ ನಾಗನಿಗೆ ಅವನ ಹರೆಯದ ಕಾಲದಲ್ಲೇ ಕೆಲಸ ಕೊಡುತ್ತೇವೆ ಎಂದು ಕರೆದುಕೊಂಡು ಹೋಗಿ ಬಂಧನದ ಬದುಕು ಕೊಟ್ಟ ಕುಟುಂಬವೇ ಈ ರಜನಿ ಶೆಟ್ಟಿಯ ಕುಟುಂಬ ನೋಡಿ , ದನ ಕಾಯುವುದು, ತೋಟದ ಕೆಲಸ – ವಿಶ್ರಾಂತಿ ಇಲ್ಲದ ದಿನಗಳು ಆ ನಾಗನದ್ದಾಗಿತ್ತು

    ಮೂಲತಃ ಕನ್ಯಾನ ಗ್ರಾಮದ ನಿವಾಸಿಯಾದ ನಾಗ (65) ಅವರು ಸುಮಾರು 30 ವರ್ಷಗಳ ಹಿಂದೆ ಕೆಲಸದ ಹುಡುಕಾಟದಲ್ಲಿದ್ದಾಗ ಹೆಮ್ಮಾಡಿಯ ನಿವಾಸಿ ಸುಬ್ಬಣ್ಣ ಶೆಟ್ಟಿ ಅವರು ಅವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಕೆಲಸಕ್ಕೆ ಇಟ್ಟಿದ್ದರು. ಆದರೆ ಕೆಲಸದ ಹೆಸರಿನಲ್ಲಿ ಆರಂಭವಾದುದು ನಾಗನಿಗೆ ಬದುಕಿನ ಬಂಧನವಾಗಿಯೇ ಮಾರ್ಪಟ್ಟಿತು ಎಂದು ಆರೋಪಿಸಲಾಗಿದೆ.

    ದನ ಕಾಯುವುದು, ತೋಟದ ಕೆಲಸ – ವಿಶ್ರಾಂತಿ ಇಲ್ಲದ ದಿನಗಳು
    ನಾಗ ಅವರಿಗೆ ಪ್ರತಿದಿನ ವಿವಿಧ ಕಠಿಣ ಕೆಲಸಗಳನ್ನು ಮಾಡಿಸಲಾಗುತ್ತಿತ್ತು.ಅವರಿಂದ ಮಾಡಿಸಲಾದ ಕೆಲಸಗಳು,ದನ ಹಾಗೂ ಎಮ್ಮೆಗಳನ್ನು ಕಾಯುವುದು,ಗದ್ದೆ ಮತ್ತು ತೋಟದ ಕೆಲಸ ದನದ ಸೆಗಣಿ ತೆಗೆದು ಸ್ವಚ್ಛಗೊಳಿಸುವುದು
    ಮನೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು.ಈ ಎಲ್ಲಾ ಕೆಲಸಗಳನ್ನು ದಿನವೂ ನಿರಂತರವಾಗಿ ಮಾಡಬೇಕಾಗುತ್ತಿತ್ತು ಎಂದು ಹೇಳಲಾಗಿದೆ.

    ದನದ ಕೊಟ್ಟಿಗೆಯಲ್ಲೇ ವಾಸ – ಮಾನವೀಯತೆ ಮರೆತ ವರ್ತನೆ
    ನಾಗ ಅವರಿಗೆ ಮನೆಯೊಳಗೆ ವಾಸಿಸಲು ಅವಕಾಶ ನೀಡಲಾಗಲಿಲ್ಲ ಎಂದು ದೂರಲಾಗಿದೆ. ಅವರಿಗೆ ದನದ ಕೊಟ್ಟಿಗೆಯಲ್ಲೇ ವಾಸ ಮಾಡಲು ಬಲವಂತ ಮಾಡಲಾಗಿತ್ತು.

    ಅವರ ಪರಿಸ್ಥಿತಿ ಹೇಗಿತ್ತೆಂದರೆ
    ಮಲಗುವ ಸ್ಥಳ – ದನದ ಕೊಟ್ಟಿಗೆ
    ಊಟ – ಕೊಟ್ಟಿಗೆಯಲ್ಲೇ
    ಬಟ್ಟೆ ಮತ್ತು ಪಾತ್ರೆಗಳು – ಕೊಟ್ಟಿಗೆಯಲ್ಲೇ ಇಡಬೇಕು
    ಊಟವನ್ನು ಬಾಳೆ ಎಲೆಯಲ್ಲಿ ನೀಡಲಾಗುತ್ತಿತ್ತು.ಇದು ಮನುಷ್ಯನಿಗಿಂತ ಕಡಿಮೆ ಗೌರವದ ಜೀವನ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    30 ವರ್ಷ ಕೆಲಸ ಮಾಡಿದರೂ ಸಂಬಳ ಇಲ್ಲ. …ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ನಾಗ ಅವರು ಸುಮಾರು ಮೂರು ದಶಕಗಳ ಕಾಲ ಕೆಲಸ ಮಾಡಿದರೂ ಅವರಿಗೆ ಯಾವುದೇ ಸಂಬಳ ನೀಡಲಾಗಲಿಲ್ಲ.
    ಅದರ ಜೊತೆಗೆ,ಮನೆಯಿಂದ ಹೊರಗೆ ಹೋಗಲು ಅವಕಾಶ ನೀಡಲಾಗಲಿಲ್ಲ
    ಸ್ವತಂತ್ರವಾಗಿ ಬದುಕಲು ಅವಕಾಶ ಇರಲಿಲ್ಲ. ಇದು ಜೀತದಾಳು ಪದ್ಧತಿಯ ಗಂಭೀರ ಉದಾಹರಣೆ ಎಂದು ಸಾಮಾಜಿಕ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

    ಮಹಿಳೆ ಬಂಧನ – ಪೊಲೀಸ್ ತನಿಖೆ ಮುಂದುವರಿಕೆ

    ಸುಬ್ಬಣ್ಣ ಶೆಟ್ಟಿ ಮೃತಪಟ್ಟ ನಂತರ ಅವರ ಮಗಳು ರಜನಿ ಶೆಟ್ಟಿ ಮತ್ತು ಅಳಿಯ ಕರುಣಾಕರ ಶೆಟ್ಟಿ ನಾಗ ಅವರಿಂದ ಕೆಲಸ ಮಾಡಿಸುತ್ತಿದ್ದರು ಎಂದು ಹೇಳಲಾಗಿದೆ.

    ಈ ಪ್ರಕರಣದ ಸಂಬಂಧ ಪೊಲೀಸರು ರಜನಿ ಶೆಟ್ಟಿಯನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಿದ್ದಾರೆ.

    ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಜೀತದಾಳು ಪದ್ಧತಿ

    ಈ ಘಟನೆ ಮತ್ತೊಮ್ಮೆ ಸಮಾಜದಲ್ಲಿ ಇನ್ನೂ ಕೆಲವೆಡೆ ಜೀತದಾಳು ಪದ್ಧತಿ ಮತ್ತು ಸಮುದಾಯದ ಮೇಲೆ ನಡೆಯುವ ಅನ್ಯಾಯಗಳು ಮುಂದುವರಿಯುತ್ತಿರುವುದನ್ನು ಸ್ಪಷ್ಟಪಡಿಸಿದೆ.

    ನಾಗ ಅವರಂತಹ ಅನೇಕ ಜನರ ಕಥೆಗಳು ಇನ್ನೂ ಹೊರಬರದೇ ಇರುವ ಸಾಧ್ಯತೆಯೂ ಇದೆ ಎಂದು ಸಾಮಾಜಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸುತ್ತಿವೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …