📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ

30 ವರ್ಷ ದನದ ಕೊಟ್ಟಿಗೆಯಲ್ಲಿ ಬದುಕಿದ ನಾಗ!! ಒಂದು ನಯಾ ಪೈಸೆಯೂ ಸಂಬಳ ಕೊಡದೆ ಮೂರು ದಶಕದಿಂದ ದುಡಿಸಿ ಕೊಳ್ಳಲಾಗುತ್ತಿದ್ದ ಪ್ರಕರಣ.. ಉಡುಪಿಯಲ್ಲಿ ಶಾಕ್… ಆರೋಪಿ –ಮಹಿಳೆ ಬಂಧನ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪದ ಕಬೈಲು ಗ್ರಾಮದಲ್ಲಿ ಅಮಾನವೀಯತೆಯನ್ನು ಕಂಗೊಳಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು ಸುಮಾರು 30 ವರ್ಷಗಳಿಂದ ಜೀತದಾಳಾಗಿ ಮನೆಯಲ್ಲಿ ಕೆಲಸ ಮಾಡಿಸಿಕೊಂಡು ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ಇದೀಗ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು,  ದಾಸ್ಯ ವ್ಯವಸ್ಥೆಯಂತಹ ಪರಿಸ್ಥಿತಿ ಇನ್ನೂ ಸಮಾಜದಲ್ಲಿ ಇರುವುದನ್ನು ಈ ಪ್ರಕರಣ ಮತ್ತೆ ನೆನಪಿಸಿದೆ.

30 ವರ್ಷ ಕೆಲಸ ಮಾಡಿದರೂ ಸಂಬಳ ಇಲ್ಲ. ದನದ ಕೊಟ್ಟಿಗೆಯಲ್ಲೇ ವಾಸ – ಮಾನವೀಯತೆ ಮರೆತ ವರ್ತನೆ, ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಜೀತದಾಳು ಪದ್ಧತಿ, ಜೀತಕ್ಕೆ ಇಟ್ಟುಕೊಂಡವರು ಪುಗಸಟ್ಟೆ ಕೆಲಸ ಮಾಡಿಸಿಕೊಂಡು  ದರ್ಬಾರ್ ನಡೆಸುತ್ತಿದ್ದರು.

65 ವರ್ಷದ ನಾಗನಿಗೆ ಅವನ ಹರೆಯದ ಕಾಲದಲ್ಲೇ ಕೆಲಸ ಕೊಡುತ್ತೇವೆ ಎಂದು ಕರೆದುಕೊಂಡು ಹೋಗಿ ಬಂಧನದ ಬದುಕು ಕೊಟ್ಟ ಕುಟುಂಬವೇ ಈ ರಜನಿ ಶೆಟ್ಟಿಯ ಕುಟುಂಬ ನೋಡಿ , ದನ ಕಾಯುವುದು, ತೋಟದ ಕೆಲಸ – ವಿಶ್ರಾಂತಿ ಇಲ್ಲದ ದಿನಗಳು ಆ ನಾಗನದ್ದಾಗಿತ್ತು

ಮೂಲತಃ ಕನ್ಯಾನ ಗ್ರಾಮದ ನಿವಾಸಿಯಾದ ನಾಗ (65) ಅವರು ಸುಮಾರು 30 ವರ್ಷಗಳ ಹಿಂದೆ ಕೆಲಸದ ಹುಡುಕಾಟದಲ್ಲಿದ್ದಾಗ ಹೆಮ್ಮಾಡಿಯ ನಿವಾಸಿ ಸುಬ್ಬಣ್ಣ ಶೆಟ್ಟಿ ಅವರು ಅವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಕೆಲಸಕ್ಕೆ ಇಟ್ಟಿದ್ದರು. ಆದರೆ ಕೆಲಸದ ಹೆಸರಿನಲ್ಲಿ ಆರಂಭವಾದುದು ನಾಗನಿಗೆ ಬದುಕಿನ ಬಂಧನವಾಗಿಯೇ ಮಾರ್ಪಟ್ಟಿತು ಎಂದು ಆರೋಪಿಸಲಾಗಿದೆ.

ದನ ಕಾಯುವುದು, ತೋಟದ ಕೆಲಸ – ವಿಶ್ರಾಂತಿ ಇಲ್ಲದ ದಿನಗಳು
ನಾಗ ಅವರಿಗೆ ಪ್ರತಿದಿನ ವಿವಿಧ ಕಠಿಣ ಕೆಲಸಗಳನ್ನು ಮಾಡಿಸಲಾಗುತ್ತಿತ್ತು.ಅವರಿಂದ ಮಾಡಿಸಲಾದ ಕೆಲಸಗಳು,ದನ ಹಾಗೂ ಎಮ್ಮೆಗಳನ್ನು ಕಾಯುವುದು,ಗದ್ದೆ ಮತ್ತು ತೋಟದ ಕೆಲಸ ದನದ ಸೆಗಣಿ ತೆಗೆದು ಸ್ವಚ್ಛಗೊಳಿಸುವುದು
ಮನೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು.ಈ ಎಲ್ಲಾ ಕೆಲಸಗಳನ್ನು ದಿನವೂ ನಿರಂತರವಾಗಿ ಮಾಡಬೇಕಾಗುತ್ತಿತ್ತು ಎಂದು ಹೇಳಲಾಗಿದೆ.

ದನದ ಕೊಟ್ಟಿಗೆಯಲ್ಲೇ ವಾಸ – ಮಾನವೀಯತೆ ಮರೆತ ವರ್ತನೆ
ನಾಗ ಅವರಿಗೆ ಮನೆಯೊಳಗೆ ವಾಸಿಸಲು ಅವಕಾಶ ನೀಡಲಾಗಲಿಲ್ಲ ಎಂದು ದೂರಲಾಗಿದೆ. ಅವರಿಗೆ ದನದ ಕೊಟ್ಟಿಗೆಯಲ್ಲೇ ವಾಸ ಮಾಡಲು ಬಲವಂತ ಮಾಡಲಾಗಿತ್ತು.

ಅವರ ಪರಿಸ್ಥಿತಿ ಹೇಗಿತ್ತೆಂದರೆ
ಮಲಗುವ ಸ್ಥಳ – ದನದ ಕೊಟ್ಟಿಗೆ
ಊಟ – ಕೊಟ್ಟಿಗೆಯಲ್ಲೇ
ಬಟ್ಟೆ ಮತ್ತು ಪಾತ್ರೆಗಳು – ಕೊಟ್ಟಿಗೆಯಲ್ಲೇ ಇಡಬೇಕು
ಊಟವನ್ನು ಬಾಳೆ ಎಲೆಯಲ್ಲಿ ನೀಡಲಾಗುತ್ತಿತ್ತು.ಇದು ಮನುಷ್ಯನಿಗಿಂತ ಕಡಿಮೆ ಗೌರವದ ಜೀವನ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

30 ವರ್ಷ ಕೆಲಸ ಮಾಡಿದರೂ ಸಂಬಳ ಇಲ್ಲ. …ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ನಾಗ ಅವರು ಸುಮಾರು ಮೂರು ದಶಕಗಳ ಕಾಲ ಕೆಲಸ ಮಾಡಿದರೂ ಅವರಿಗೆ ಯಾವುದೇ ಸಂಬಳ ನೀಡಲಾಗಲಿಲ್ಲ.
ಅದರ ಜೊತೆಗೆ,ಮನೆಯಿಂದ ಹೊರಗೆ ಹೋಗಲು ಅವಕಾಶ ನೀಡಲಾಗಲಿಲ್ಲ
ಸ್ವತಂತ್ರವಾಗಿ ಬದುಕಲು ಅವಕಾಶ ಇರಲಿಲ್ಲ. ಇದು ಜೀತದಾಳು ಪದ್ಧತಿಯ ಗಂಭೀರ ಉದಾಹರಣೆ ಎಂದು ಸಾಮಾಜಿಕ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆ ಬಂಧನ – ಪೊಲೀಸ್ ತನಿಖೆ ಮುಂದುವರಿಕೆ

ಸುಬ್ಬಣ್ಣ ಶೆಟ್ಟಿ ಮೃತಪಟ್ಟ ನಂತರ ಅವರ ಮಗಳು ರಜನಿ ಶೆಟ್ಟಿ ಮತ್ತು ಅಳಿಯ ಕರುಣಾಕರ ಶೆಟ್ಟಿ ನಾಗ ಅವರಿಂದ ಕೆಲಸ ಮಾಡಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಪ್ರಕರಣದ ಸಂಬಂಧ ಪೊಲೀಸರು ರಜನಿ ಶೆಟ್ಟಿಯನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಜೀತದಾಳು ಪದ್ಧತಿ

ಈ ಘಟನೆ ಮತ್ತೊಮ್ಮೆ ಸಮಾಜದಲ್ಲಿ ಇನ್ನೂ ಕೆಲವೆಡೆ ಜೀತದಾಳು ಪದ್ಧತಿ ಮತ್ತು ಸಮುದಾಯದ ಮೇಲೆ ನಡೆಯುವ ಅನ್ಯಾಯಗಳು ಮುಂದುವರಿಯುತ್ತಿರುವುದನ್ನು ಸ್ಪಷ್ಟಪಡಿಸಿದೆ.

ನಾಗ ಅವರಂತಹ ಅನೇಕ ಜನರ ಕಥೆಗಳು ಇನ್ನೂ ಹೊರಬರದೇ ಇರುವ ಸಾಧ್ಯತೆಯೂ ಇದೆ ಎಂದು ಸಾಮಾಜಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸುತ್ತಿವೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
“ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು