📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 

    ತೀವ್ರ ರಕ್ತಸ್ರಾವ ವಾಗುತ್ತಿದ್ದರೂ ,ಶಕ್ತಿಹೀನನಾಗಿದ್ದರೂ ಮಾನವೀಯತೆ ಮರೆತಿಲ್ಲ: ಐವರು ಗೆಳೆಯರನ್ನು ಕಾಪಾಡಿದ 9ನೇ ತರಗತಿಯ ಬಾಲಕನ ಸಾಹಸ
    ಬಳ್ಳಾರಿ ಖಾಸಗಿ ವಸತಿ ಶಾಲೆಯ ಸಹಪಾಠಿಗಳ ಮೇಲಿನ ಕೊಲೆ ಮತ್ತು ಮಾರಣಾಂತಿಕ ಹಲ್ಲೆಗಳ ಆರೋಪಿ ಬಾಲಕನ ಸುಳಿವು ನೀಡಿದ ಪರಿಸರದ సిసిటివి ಕ್ಯಾಮೆರಾ, ಘಟನೆ ಬಳಿಕ ನಾಪತ್ತೆಯಾಗಿದ್ದ
    ಬಾಲಕ ಸೈಕಲ್ ನಲ್ಲಿ ತೆರಳಿ ,ಫೋನ್‌ನಲ್ಲಿ
    ಮಾತನಾಡುತ್ತಿರುವ ದೃಶ್ಯಗಳ ಜಾಡು ಹಿಡಿದು
    ಕೂಲಂಕಷವಾಗಿ ದೃಶ್ಯಾವಳಿಗಳನ್ನು ಪರಿಶೀಲಿಸಿ
    ಅಂತಿಮವಾಗಿ ಬಾಲಕನನ್ನು ಪತ್ತೆಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದೆ.
    ತಲೆಯಲ್ಲೂ ಎದೆಯಲ್ಲೂ ಗಂಭೀರ ಗಾಯಗಳಾಗಿದ್ದರೂ, ರಕ್ತಸ್ರಾವದಿಂದ ನಲುಗುತ್ತಿದ್ದರೂ ಸಹ ತನ್ನ ಗೆಳೆಯರ ಜೀವವನ್ನು ಉಳಿಸಲು ಹೋರಾಡಿದ ಒಬ್ಬ ಬಾಲಕನ ಧೈರ್ಯ ಮತ್ತು ಮಾನವೀಯತೆ ಬಳ್ಳಾರಿ ಜಿಲ್ಲೆಯ ಖಾಸಗಿ ವಸತಿ ಶಾಲೆಯ ಘಟನೆಯಲ್ಲಿ ಬೆಳಕಿಗೆ ಬಂದಿದೆ.
    ಮಾರ್ಚ್ 7ರ ರಾತ್ರಿ ನಡೆದ ಈ ಆತಂಕಕಾರಿ ಘಟನೆಯಲ್ಲಿ, ವಸತಿ ನಿಲಯದಲ್ಲಿ ಇದ್ದ ಒಟ್ಟು 12 ವಿದ್ಯಾರ್ಥಿಗಳ ಪೈಕಿ ಏಳು ಮಂದಿ ಒಂದೇ ಕೊಠಡಿಯಲ್ಲಿ ಮತ್ತು ಇನ್ನೂ ಐವರು ಮೇಲಿನ ಕೊಠಡಿಯಲ್ಲಿ ತಂಗಿದ್ದರು. ಇದೇ ವೇಳೆ, ಏಕಾಏಕಿ ಒಬ್ಬ ವಿದ್ಯಾರ್ಥಿ ಸಮೀಪದಲ್ಲಿದ್ದ ಏಳು ಸಹಪಾಠಿಗಳ ಮೇಲೆ ದಾಳಿ ನಡೆಸಿದನು.

    ಈ ದಾಳಿಯಲ್ಲಿ 9ನೇ ತರಗತಿಯ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದನು. ತಲೆಯಲ್ಲೂ ಎದೆಯಲ್ಲೂ ಬಿದ್ದ ಪೆಟ್ಟಿನಿಂದ ರಕ್ತಸ್ರಾವವಾಗುತ್ತಿದ್ದರೂ, ಆತ ತನ್ನ ನೋವನ್ನು ಮರೆತು ಮೇಲಿನ ಕೊಠಡಿಯಲ್ಲಿ ಮಲಗಿದ್ದ ಐವರು ಸಹಪಾಠಿಗಳತ್ತ ತೆವಳುತ್ತ ಸಾಗಿದನು.

    ಬಲಹೀನಗೊಂಡಿದ್ದರೂ ಆತ ಬಾಗಿಲು ತಟ್ಟಿ, “ಬಾಗಿಲು ತೆರೆಯಬೇಡಿ” ಎಂದು ಎಚ್ಚರಿಸಿದನು. ಅವನ ಸಮಯೋಚಿತ ಎಚ್ಚರಿಕೆಯಿಂದ ಐವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾದರು.

    ಪ್ರಸ್ತುತ ಗಾಯಗೊಂಡ ಬಾಲಕನಿಗೆ ಬಿಎಂಸಿಆರ್‌ಸಿ ಟ್ರಾಮಾ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿಗಳೊಂದಿಗೆ ಮಾತನಾಡಿದ ಬಾಲಕ, ಆ ರಾತ್ರಿ ನಡೆದ ಘಟನೆಯ ವಿವರವನ್ನು ಹಂಚಿಕೊಂಡಿದ್ದಾನೆ.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹ್ಮದ್ ಹ್ಯಾರಿಸ್ ಸುಮೇರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ, “ತೀವ್ರ ಗಾಯಗೊಂಡಿದ್ದರೂ ಸಹ ತನ್ನ ಗೆಳೆಯರನ್ನು ಎಚ್ಚರಿಸಿ ದಾಳಿಯಿಂದ ರಕ್ಷಿಸಿದ ಬಾಲಕನ ಧೈರ್ಯ ಮತ್ತು ಮಾನವೀಯತೆ ಶ್ಲಾಘನೀಯ,” ಎಂದು ಅವರು ಹೇಳಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

    ಶಾಲೆಯ ಆಡಳಿತ ಮಂಡಳಿಯ ಹೊಣೆಗಾರಿಕೆ, ಮಕ್ಕಳ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳು, ವಸತಿ ನಿಲಯದ ಪರವಾನಗಿ ಹಾಗೂ ಘಟನೆಯ ಹಿನ್ನೆಲೆ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

    ಗಾಯಗೊಂಡಿದ್ದರೂ ಸಹ ತನ್ನ ನೋವನ್ನು ಮರೆತು ಇತರರ ಜೀವ ಉಳಿಸಲು ಜೀವ ಪಣ ತೊಟ್ಟು ಗೆಳೆಯರಿಗಾಗಿಸಹಾಯ ಮಾಡಲು ಮುಂದಾದ ಈ ಬಾಲಕನ ಸಾಹಸ ಎಲ್ಲರಿಗೂ ಪ್ರೇರಣೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ