📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 

ತೀವ್ರ ರಕ್ತಸ್ರಾವ ವಾಗುತ್ತಿದ್ದರೂ ,ಶಕ್ತಿಹೀನನಾಗಿದ್ದರೂ ಮಾನವೀಯತೆ ಮರೆತಿಲ್ಲ: ಐವರು ಗೆಳೆಯರನ್ನು ಕಾಪಾಡಿದ 9ನೇ ತರಗತಿಯ ಬಾಲಕನ ಸಾಹಸ
ಬಳ್ಳಾರಿ ಖಾಸಗಿ ವಸತಿ ಶಾಲೆಯ ಸಹಪಾಠಿಗಳ ಮೇಲಿನ ಕೊಲೆ ಮತ್ತು ಮಾರಣಾಂತಿಕ ಹಲ್ಲೆಗಳ ಆರೋಪಿ ಬಾಲಕನ ಸುಳಿವು ನೀಡಿದ ಪರಿಸರದ సిసిటివి ಕ್ಯಾಮೆರಾ, ಘಟನೆ ಬಳಿಕ ನಾಪತ್ತೆಯಾಗಿದ್ದ
ಬಾಲಕ ಸೈಕಲ್ ನಲ್ಲಿ ತೆರಳಿ ,ಫೋನ್‌ನಲ್ಲಿ
ಮಾತನಾಡುತ್ತಿರುವ ದೃಶ್ಯಗಳ ಜಾಡು ಹಿಡಿದು
ಕೂಲಂಕಷವಾಗಿ ದೃಶ್ಯಾವಳಿಗಳನ್ನು ಪರಿಶೀಲಿಸಿ
ಅಂತಿಮವಾಗಿ ಬಾಲಕನನ್ನು ಪತ್ತೆಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದೆ.
ತಲೆಯಲ್ಲೂ ಎದೆಯಲ್ಲೂ ಗಂಭೀರ ಗಾಯಗಳಾಗಿದ್ದರೂ, ರಕ್ತಸ್ರಾವದಿಂದ ನಲುಗುತ್ತಿದ್ದರೂ ಸಹ ತನ್ನ ಗೆಳೆಯರ ಜೀವವನ್ನು ಉಳಿಸಲು ಹೋರಾಡಿದ ಒಬ್ಬ ಬಾಲಕನ ಧೈರ್ಯ ಮತ್ತು ಮಾನವೀಯತೆ ಬಳ್ಳಾರಿ ಜಿಲ್ಲೆಯ ಖಾಸಗಿ ವಸತಿ ಶಾಲೆಯ ಘಟನೆಯಲ್ಲಿ ಬೆಳಕಿಗೆ ಬಂದಿದೆ.
ಮಾರ್ಚ್ 7ರ ರಾತ್ರಿ ನಡೆದ ಈ ಆತಂಕಕಾರಿ ಘಟನೆಯಲ್ಲಿ, ವಸತಿ ನಿಲಯದಲ್ಲಿ ಇದ್ದ ಒಟ್ಟು 12 ವಿದ್ಯಾರ್ಥಿಗಳ ಪೈಕಿ ಏಳು ಮಂದಿ ಒಂದೇ ಕೊಠಡಿಯಲ್ಲಿ ಮತ್ತು ಇನ್ನೂ ಐವರು ಮೇಲಿನ ಕೊಠಡಿಯಲ್ಲಿ ತಂಗಿದ್ದರು. ಇದೇ ವೇಳೆ, ಏಕಾಏಕಿ ಒಬ್ಬ ವಿದ್ಯಾರ್ಥಿ ಸಮೀಪದಲ್ಲಿದ್ದ ಏಳು ಸಹಪಾಠಿಗಳ ಮೇಲೆ ದಾಳಿ ನಡೆಸಿದನು.

ಈ ದಾಳಿಯಲ್ಲಿ 9ನೇ ತರಗತಿಯ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದನು. ತಲೆಯಲ್ಲೂ ಎದೆಯಲ್ಲೂ ಬಿದ್ದ ಪೆಟ್ಟಿನಿಂದ ರಕ್ತಸ್ರಾವವಾಗುತ್ತಿದ್ದರೂ, ಆತ ತನ್ನ ನೋವನ್ನು ಮರೆತು ಮೇಲಿನ ಕೊಠಡಿಯಲ್ಲಿ ಮಲಗಿದ್ದ ಐವರು ಸಹಪಾಠಿಗಳತ್ತ ತೆವಳುತ್ತ ಸಾಗಿದನು.

ಬಲಹೀನಗೊಂಡಿದ್ದರೂ ಆತ ಬಾಗಿಲು ತಟ್ಟಿ, “ಬಾಗಿಲು ತೆರೆಯಬೇಡಿ” ಎಂದು ಎಚ್ಚರಿಸಿದನು. ಅವನ ಸಮಯೋಚಿತ ಎಚ್ಚರಿಕೆಯಿಂದ ಐವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾದರು.

ಪ್ರಸ್ತುತ ಗಾಯಗೊಂಡ ಬಾಲಕನಿಗೆ ಬಿಎಂಸಿಆರ್‌ಸಿ ಟ್ರಾಮಾ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿಗಳೊಂದಿಗೆ ಮಾತನಾಡಿದ ಬಾಲಕ, ಆ ರಾತ್ರಿ ನಡೆದ ಘಟನೆಯ ವಿವರವನ್ನು ಹಂಚಿಕೊಂಡಿದ್ದಾನೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹ್ಮದ್ ಹ್ಯಾರಿಸ್ ಸುಮೇರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ, “ತೀವ್ರ ಗಾಯಗೊಂಡಿದ್ದರೂ ಸಹ ತನ್ನ ಗೆಳೆಯರನ್ನು ಎಚ್ಚರಿಸಿ ದಾಳಿಯಿಂದ ರಕ್ಷಿಸಿದ ಬಾಲಕನ ಧೈರ್ಯ ಮತ್ತು ಮಾನವೀಯತೆ ಶ್ಲಾಘನೀಯ,” ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಶಾಲೆಯ ಆಡಳಿತ ಮಂಡಳಿಯ ಹೊಣೆಗಾರಿಕೆ, ಮಕ್ಕಳ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳು, ವಸತಿ ನಿಲಯದ ಪರವಾನಗಿ ಹಾಗೂ ಘಟನೆಯ ಹಿನ್ನೆಲೆ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ಗಾಯಗೊಂಡಿದ್ದರೂ ಸಹ ತನ್ನ ನೋವನ್ನು ಮರೆತು ಇತರರ ಜೀವ ಉಳಿಸಲು ಜೀವ ಪಣ ತೊಟ್ಟು ಗೆಳೆಯರಿಗಾಗಿಸಹಾಯ ಮಾಡಲು ಮುಂದಾದ ಈ ಬಾಲಕನ ಸಾಹಸ ಎಲ್ಲರಿಗೂ ಪ್ರೇರಣೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
“ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
“ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!