📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು

ಉಡುಪಿ: “ನಮ್ಮ ಸಂಸ್ಥೆಯಲ್ಲಿ ಹಣ ಹೂಡಿದರೆ ದ್ವಿಗುಣವಾಗುತ್ತದೆ” ಎಂದು ನಂಬಿಸಿ ಮಲ್ಪೆಯ ಶೇರ್ ಮಾರ್ಕೆಟಿಂಗ್ ಕಂಪನಿಯ 4 ಜನರು, 30 ಲಕ್ಷ 90 ಸಾವಿರ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರ
ದಿನಾಂಕ 19/06/2026 ರಂದು ಆಪಾದಿತರಾದ ಪ್ರದೀಪ ಆಚಾರ್ಯ, ಜ್ಯೋತಿ ಜತ್ತನ್, ದಮಯಂತಿ.ಎ, ರೋಹಿಣಿ ಇವರುಗಳು ದೂರುದಾರರಾದ ಇಂದಿರಾ ಬಂಗೇರ (51), ಕೋಡಿ ಗ್ರಾಮ, ಉಡುಪಿ ಇವರ ಮನೆಗೆ ಬಂದು, ಬಿ.ಜಿ. ವೆಲ್ತ್ ಶೇರಿಂಗ್ ಎಂಬ ಶೇರ್ ಮಾರ್ಕೆಟಿಂಗ್ ಕಂಪನಿಗೆ ಮಲ್ಪೆಯ ಕಾರ್ತಿಕ್ ಸಹಜ್ ಕಟ್ಟಡದಲ್ಲಿ ಕಛೇರಿ ಇದೆ ಎಂದೂ, ನಮ್ಮ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತದೆ ಎಂದು ದೂರುದಾರರನ್ನು ಪುಸಲಾಯಿಸಿದ್ದಾರೆ.

ಇದೊಂದು ವಿದೇಶಿ ಕಂಪನಿ, ಒಮ್ಮೆ ಮಾತ್ರ ಹಣ ಹೂಡಿಕೆ ಮಾಡಿದರೆ ಸಾಕು. ಡಾಲರ್ ರೂಪದಲ್ಲಿ ಐಡಿ ಓಪನ್ ಆಗುತ್ತದೆ ಎಂದು ನಂಬಿಸಿ ದೂರುದಾರರು ಮತ್ತು ಅವರ ಕುಟುಂಬದವರು ಹಾಗೂ ಇತರರಿಂದ ಸೇರಿ ಒಟ್ಟು 30,90,000 ರೂ. ಹಣವನ್ನು ಆರೋಪಿತರು ಪಡೆದಿದ್ದಾರೆ.

ವಂಚನೆ ಬಯಲು
ನಂತರದಲ್ಲಿ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡದೆ ಕಛೇರಿಯನ್ನು ಬಂದ್ ಮಾಡಿ ಆರೋಪಿತರು ಪರಾರಿಯಾಗಿದ್ದಾರೆ. ಇದರಿಂದ ದೂರುದಾರರಿಗೆ ಹಾಗೂ ಇತರರಿಗೆ ನಂಬಿಕೆ ದ್ರೋಹ ಹಾಗೂ ವಂಚನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲು
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 76/2026 ರಂತೆ ಕಲಂ: 316(2), 318(4) ಜೊತೆಗೆ 3(5) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವರದಿ: ಉಡುಪಿ ಅಪರಾಧ ವಿಭಾಗ

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್