📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಮುಲ್) 2025-26ನೇ ಸಾಲಿನಲ್ಲಿ ₹1,270 ಕೋಟಿ ವ್ಯವಹಾರ ನಡೆಸಿದ್ದು, ಹಿಂದಿನ ಸಾಲಿನ ಹೋಲಿಕೆಯಲ್ಲಿ ಶೇ.8.18ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಅವರು ತಿಳಿಸಿದ್ದಾರೆ.

ಈ ಅವಧಿಯಲ್ಲಿ ದಿನನಿತ್ಯ ಸರಾಸರಿ ಹಾಲು ಶೇಖರಣೆ 4.07 ಲಕ್ಷ ಲೀಟರ್ ಆಗಿದ್ದು, ಶೇ.19ರಷ್ಟು ಹೆಚ್ಚಳವಾಗಿದೆ. ಒಟ್ಟು 51,693 ಸಕ್ರಿಯ ಸದಸ್ಯರು ಒಕ್ಕೂಟದಲ್ಲಿ ಇದ್ದಾರೆ. ಈ ಸಾಲಿನಲ್ಲಿ ಅಂದಾಜು ₹10.61 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಅವರು ತಿಳಿಸಿದರು.

ಹೈನುಗಾರರಿಗೆ ಪ್ರೋತ್ಸಾಹಧನವಾಗಿ ಒಟ್ಟು ₹23.99 ಕೋಟಿ ನೀಡಲಾಗಿದ್ದು, ಪ್ರತೀ ಲೀಟರ್‌ಗೆ ₹2.50 ವರೆಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಜೊತೆಗೆ ಹೈನುಗಾರಿಕೆ ಉತ್ತೇಜನಕ್ಕಾಗಿ ಮಿನಿ ಡೈರಿ, ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್, ರಾಸು ಖರೀದಿ ಸೇರಿದಂತೆ ವಿವಿಧ ಯೋಜನೆಗಳಡಿ ₹6.64 ಕೋಟಿ ಅನುದಾನ ನೀಡಲಾಗಿದೆ.

.ಮೂಲಸೌಕರ್ಯ ಅಭಿವೃದ್ಧಿ ಭಾಗವಾಗಿ ಹೊಸ ಗೋಡೌನ್, ಐಸ್ ಕ್ರೀಂ ಕೋಲ್ಡ್ ಸ್ಟೋರೇಜ್ ಮತ್ತು ರೆಫ್ರಿಜರೇಶನ್ ಘಟಕ ನಿರ್ಮಾಣವಾಗಿದ್ದು, ಕೇಂದ್ರ ಕಚೇರಿ ಮತ್ತು ಉಡುಪಿನ ಡೇರಿಯಲ್ಲಿ ಹೊಸ ಆಡಳಿತ ಕಟ್ಟಡಗಳ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಅವರು ವಿವರಿಸಿದರು.

ಒಕ್ಕೂಟದ ವ್ಯಾಪ್ತಿಯಲ್ಲಿ 1,781 ಡೀಲರ್‌ಗಳು, ಪಾರ್ಲರ್‌ಗಳು ಮತ್ತು ಫ್ರಾಂಚೈಸಿಗಳ ಮೂಲಕ ಮಾರಾಟ ಜಾಲವನ್ನು ವಿಸ್ತರಿಸಲಾಗಿದ್ದು, ಮಂಗಳೂರು ಮಾರುಕಟ್ಟೆಯಲ್ಲಿ ಕೆಎಂಎಫ್ ಉತ್ಪನ್ನಗಳಿಗೆ ಬಲವಾದ ಬೇಡಿಕೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

##DKMUL * #DairyDevelopment * #MilkCooperative * #KarnatakaMilkFederation * #DairyIndustry * #AgricultureGrowth

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ