📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು

ಬಂಟ್ವಾಳ, ಮೇ 24: ಪಾರ್ಸೆಲ್ ಡೆಲಿವರಿಗೆ ತೆರಳುತ್ತಿದ್ದ E-Cart ಕಂಪನಿಯ ಹಬ್ ಅಸಿಸ್ಟೆಂಟ್‌ಗೆ ದಾರಿ ಮಧ್ಯೆ ಅಡ್ಡಗಟ್ಟಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರುದಾರರಾದ ಮಹಮ್ಮದ್ ಆರೀಸ್ (20), ಅರಳ ಗ್ರಾಮ, ಬಂಟ್ವಾಳ, ಇವರು E-Cart ಕಂಪನಿಯಲ್ಲಿ ಡೆಲಿವರಿ ಮತ್ತು ಹಬ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.
ದಿನಾಂಕ 23-05-2026 ರಂದು ಮಧ್ಯಾಹ್ನ 3:00 ಗಂಟೆಗೆ ದೂರುದಾರರು ಲೊರೆಟ್ಟೋದಿಂದ ಕಂಪನಿಯ TATA Inst ಟೆಂಪೊದಲ್ಲಿ ಪಾರ್ಸೆಲ್ ಡೆಲಿವರಿಗೆ ತೆರಳುತ್ತಿದ್ದರು. ಸಂಗಬೆಟ್ಟು ಗ್ರಾಮದ ಮಂಚಕಲ್ಲು ಎಂಬಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿದಾಗ, ಸಿದ್ದಕಟ್ಟೆ ಕಡೆಯಿಂದ ಬುಲೆಟ್ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿ ಮಧು ಎಂಬಾತನು ಉಡಾಫೆಯಿಂದ ಮಾತನಾಡಿದ್ದಾನೆ. ಪಿರ್ಯಾದಿದಾರರು ಇದಕ್ಕೆ ಆಕ್ಷೇಪಿಸಿದಾಗ ವಾಗ್ವಾದ ನಡೆದಿದೆ.

ನಂತರ ಮಧ್ಯಾಹ್ನ 3:10ಕ್ಕೆ ಪಿರ್ಯಾದಿದಾರರು ಎಳಿಯನಡುಗೋಡು ಗ್ರಾಮದ ಉಪ್ಪಿರಾ ಎಂಬಲ್ಲಿಗೆ ತಲುಪಿದಾಗ, ಅದೇ ಬುಲೆಟ್ ಸವಾರ ಮಧು ಅಲ್ಲಿಗೆ ಬಂದು ಟೆಂಪೊವನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾನೆ. “ನೀನು ಇಲ್ಲಿಂದ ಹೋಗಬಾರದು, ನಿನ್ನ ಬಗ್ಗೆ ಕಂಪನಿಗೆ ಕಂಪ್ಲೇಂಟ್ ಮಾಡಬೇಕು, ಗಾಡಿ ತೆಗೆಯಬೇಡ” ಎಂದು ತಡೆದಿದ್ದಾನೆ.

ಈ ವೇಳೆ ಪಿರ್ಯಾದಿದಾರರು ಮೊಬೈಲ್‌ನಲ್ಲಿ ವಿಡಿಯೋ ಮಾಡಲು ಯತ್ನಿಸಿದಾಗ, ಅಲ್ಲಿಗೆ ಬಂದ ಪಿರ್ಯಾದಿಗೆ ಪರಿಚಯವಿರುವ ಸಂದೀಪ, ನವೀನ ಹೆಗ್ಡೆ, ಯಶವಂತ ಆಚಾರ್ಯ ಮತ್ತು ಇತರರು ಮಧು ಜೊತೆ ಸೇರಿಕೊಂಡಿದ್ದಾರೆ. ಎಲ್ಲರೂ ಸೇರಿ ಪಿರ್ಯಾದಿದಾರರನ್ನು ತಡೆದು ಎಳೆದಾಡಿ, “ನೀನು ಬಾರೀ ವಿಡಿಯೋ ಮಾಡುತ್ತೀಯಾ” ಎಂದು ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ನೋವುಂಟಾಗಿ ಪಿರ್ಯಾದಿದಾರರು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಸಾರ್ವಜನಿಕರಲ್ಲಿ ವಿನಂತಿ …!
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಡಾನ್ -3 ಸಿನಿಮಾ ಕಥೆ ಗೋವಿಂದ….!
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ