📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?

    ತಮಿಳುನಾಡು ರಾಜಕೀಯದಲ್ಲಿ ಭಾರೀ ತಿರುವು ಮೂಡಿಸಿರುವ ವಿಶ್ವಾಸ ಮತ ಪರೀಕ್ಷೆಯಲ್ಲಿ, ನಟರಿಂದ ರಾಜಕಾರಣಿಯಾಗಿ ಹೊರಹೊಮ್ಮಿದ C. Joseph Vijay ನೇತೃತ್ವದ ಟಿವಿಕೆ (TVK) ಸರ್ಕಾರ ಭರ್ಜರಿ ಗೆಲುವು ಸಾಧಿಸಿದೆ. ಬುಧವಾರ ನಡೆದ ತಮಿಳುನಾಡು ವಿಧಾನಸಭೆಯ ವಿಶ್ವಾಸ ಮತದಲ್ಲಿ ವಿಜಯ್ ಸರ್ಕಾರಕ್ಕೆ 144 ಶಾಸಕರ ಬೆಂಬಲ ದೊರೆತು ಸರ್ಕಾರ ತನ್ನ ಬಹುಮತವನ್ನು ಸಾಬೀತುಪಡಿಸಿದೆ.

    ವಿಧಾನಸಭೆಯ ವಾತಾವರಣ ಬೆಳಗ್ಗಿನಿಂದಲೇ ತೀವ್ರ ರಾಜಕೀಯ ಉದ್ವಿಗ್ನತೆಯಿಂದ ಕಂಗೊಳಿಸಿತು. ಪ್ರತಿಪಕ್ಷ ನಾಯಕ Udhayanidhi Stalin ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಇದು ಬದಲಾವಣೆಯಾ ಅಥವಾ ರಾಜಕೀಯ ವಿನಿಮಯವಾ?” ಎಂದು ಪ್ರಶ್ನಿಸಿದರು. ವಿಶೇಷವಾಗಿ, ವಿಜಯ್ ಅವರು AIADMK ಬಂಡಾಯ ಶಾಸಕರನ್ನು ಭೇಟಿ ಮಾಡಿರುವುದನ್ನು ಉಲ್ಲೇಖಿಸಿ, ಟಿವಿಕೆ ಸರ್ಕಾರದ ನೈತಿಕತೆಯ ಮೇಲೆಯೇ ಪ್ರಶ್ನೆ ಎತ್ತಿದರು.

    ಭಾಷಣದ ನಂತರ DMK ಶಾಸಕರು ಒಟ್ಟಾಗಿ ಸಭಾತ್ಯಾಗ ನಡೆಸಿದರು. ಇದರಿಂದ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಆದರೆ ಇದರ ನಡುವೆಯೇ, AIADMK ಬಂಡಾಯ ಶಾಖೆಯ ನಾಯಕ S.P. Velumani ತಮ್ಮ ಬೆಂಬಲಿಗ ಶಾಸಕರೊಂದಿಗೆ ವಿಜಯ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

    ವಿಶ್ವಾಸ ಮತದ ಸಂಪೂರ್ಣ ಲೆಕ್ಕಾಚಾರ

    ಒಟ್ಟು 171 ಶಾಸಕರು ಮತದಾನದಲ್ಲಿ ಪಾಲ್ಗೊಂಡಿದ್ದರು.

    ವಿಶ್ವಾಸ ಮತ ಪರವಾಗಿ – 144 ಮತಗಳು
    ಇವುಗಳಲ್ಲಿ:

    • TVK – 105
    • ಕಾಂಗ್ರೆಸ್ – 5
    • CPI – 2
    • CPI(M) – 2
    • VCK – 2
    • IUML – 2
    • AIADMK (ಎಸ್.ಪಿ. ವೆಲುಮನಿ ಬಣ) – 25
    • AMMK ನೊಬ್ಬ ಹೊರಹಾಕಲ್ಪಟ್ಟ ಶಾಸಕ – 1

    ವಿರೋಧವಾಗಿ – 22 ಮತಗಳು

    • AIADMK ಯ Edappadi K. Palaniswami ಬಣ

    ತಟಸ್ಥ – 5 ಮತಗಳು

    • PMK – 4
    • BJP – 1

    ಈ ವಿಶ್ವಾಸ ಮತದ ಫಲಿತಾಂಶದಿಂದ ವಿಜಯ್ ಸರ್ಕಾರ ತಾತ್ಕಾಲಿಕ ರಾಜಕೀಯ ಸಂಕಷ್ಟದಿಂದ ಪಾರಾದರೂ, ತಮಿಳುನಾಡಿನ ರಾಜಕೀಯ ಸಮೀಕರಣಗಳು ಸಂಪೂರ್ಣವಾಗಿ ಬದಲಾಗುತ್ತಿರುವ ಸೂಚನೆಗಳು ಸ್ಪಷ್ಟವಾಗಿವೆ. AIADMK ಒಳಗಿನ ಭಿನ್ನಮತಗಳು ಈಗ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಸಂಘರ್ಷ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

    ಇನ್ನೊಂದೆಡೆ, DMK ಸಭಾತ್ಯಾಗ ಮಾಡಿರುವುದು ಕೂಡ ರಾಜಕೀಯವಾಗಿ ಲೆಕ್ಕಾಚಾರದ ನಡೆ ಎನ್ನಲಾಗುತ್ತಿದೆ. ನೇರ ಮತದಾನದಲ್ಲಿ ಸೋಲು ಕಂಡರೆ ಅದರ ಪರಿಣಾಮ ಹೆಚ್ಚು ಎನ್ನುವ ಕಾರಣಕ್ಕೆ ಅವರು ಪ್ರತಿಭಟನೆಯ ಮಾರ್ಗ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

    ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನಕ್ಕೇರಿದ ವಿಜಯ್ ಅವರಿಗೆ ಇದು ಕೇವಲ ಸಂಖ್ಯೆಗಳ ಗೆಲುವಲ್ಲ; ರಾಜಕೀಯವಾಗಿ ತಾವು “ಸ್ಥಿರ ನಾಯಕ” ಎಂಬ ಸಂದೇಶವನ್ನು ರಾಜ್ಯದ ಜನತೆಗೆ ನೀಡುವ ಮಹತ್ವದ ಕ್ಷಣವಾಗಿದೆ. ತಮಿಳುನಾಡಿನ ರಾಜಕೀಯದಲ್ಲಿ ಸಿನಿಮಾ ಪ್ರಭಾವ ಮತ್ತೆ ಗಟ್ಟಿಯಾಗಿ ಮರಳಿದೆಯೇ ಎಂಬ ಪ್ರಶ್ನೆ ಈಗ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

    ##TVK #VijayCM #TamilNaduPolitics #TrustVote #UdhayanidhiStalin #AIADMK #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಸರಸಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ  ಭೀಕರ ದಾಳಿ: ಗುಜರಾತ್‌ನಲ್ಲಿ 21 ವರ್ಷದ ಯುವಕ ಬಲಿ
    ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!