📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ

ಇದು ನಡೆದದ್ದು ಕರಾವಳಿಯಲ್ಲಲ್ಲ. ಕಲ್ಯಾಣ ಕರ್ನಾಟಕದಲ್ಲಿ ನಡೆದಂತಹ ಪ್ರಕರಣವಿದು. ಅವಳು ಮುಸ್ಲಿಂ ಸಂಪ್ರದಾಯದಂತೆ ಬೆಳೆದು ಬಂದ ಹುಡುಗಿಯಾಗಿದ್ದರೆ ಈತ ಹಿಂದೂ ಸಂಪ್ರದಾಯದಲ್ಲಿ ಬೆಳೆದು ಬಂದ ಹುಡುಗ. ಅವರಿಬ್ಬರ ನಡುವಿನ ಪ್ರೇಮ್ ಕಹಾನಿ ಧರ್ಮವನ್ನು ಮೀರಿ ನಿಂತಿತು. ಜಾತಿಯ ಬೇಲಿ ದಾಟಿ ಒಂದಾದರು. ಆದರೆ ಈಗ ಅವರಿಬ್ಬರ ಮನಸ್ಸಿನ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಧರ್ಮದ ಅಂಧಕಾರಕ್ಕೆ ತುತ್ತಾದವರು. ಶತಾಯಗತಾಯ ಅವರಿಬ್ಬರನ್ನು ಬೇರೆ ಮಾಡುವ ಪ್ರಯತ್ನ ನಡೆಸಿದ್ದಾರೆ.

ವನ ಹೆಸರು ಕೇಶವ, ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ನಿವಾಸಿ. ಅವಳೂ ಸಹ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ ಹೆಣ್ಣು ಮಗಳು. ಕಟ್ಟರ್ ಮುಸ್ಲಿಂ ಸಂಪ್ರದಾಯಸ್ಥ ಮನೆತನದ ಹುಡುಗಿ ಅವಳು. ಇವತ್ತು ಅವರಿಬ್ಬರೇ ಕನಕಗಿರಿಯ ಶ್ರೀ ಲಕ್ಷ್ಮಿ ದೇವಿಯ ದೇವಸ್ಥಾನದಲ್ಲಿ ದೇವಿಯ ಸನ್ನಿಧಿಯಲ್ಲಿ ಅರಿಶಿನ ಕೊಂಬನ್ನು ಕಟ್ಟಿಸಿಕೊಳ್ಳುವ  ಮೂಲಕ  ತಸ್ಲೀಮಾ ಕೇಶವನ ಸಂಗಾತಿಯಾಗಿದ್ದಾಳೆ.

ಇವರಿಬ್ಬರ ನಡುವಿನ ಪ್ರೇಮ ಕಹಾನಿ ನಾಲ್ಕು ದಿನದ ಹಿಂದಿನದ್ದಲ್ಲ ಬರೋಬ್ಬರಿ ಎರಡು ವರ್ಷದಿಂದ ನಡಿತಾ ಇರುವಂತಹ ಸಂಬಂಧವದು. ಇಬ್ಬರೂ ಕಾಲೇಜಿಗೆ ಹೋಗುತ್ತಿರುವಾಗ ಬಸ್ಸಿನಲ್ಲಿ ಕಣ್ಣು ಕಣ್ಣು ಬೆರೆತಾಗ ಆದ ಪರಿಚಯ, ಇವತ್ತು ದಾಂಪತ್ಯದವರೆಗೆ ಬಂದು ನಿಂತಿದೆ. ಎರಡು ವರ್ಷದ ಪ್ರೇಮವು ಒಡೆದು ಹೋಗುವ ಭಯದಲ್ಲಿ, ಪ್ರೇಮಿಗಳಿಬ್ಬರೂ ಮದುವೆಯಾಗುವ ಘಟ್ಟಿ ನಿರ್ಧಾರ ಮಾಡಿದ್ದಾರೆ.

ಹೌದು, ತಸ್ಲಿಮಾಳ ಮನೆಯಲ್ಲಿ, ಅವಳಿಗೆ ಮದುವೆ ಮಾಡಲು ಹುಡುಗನ ಹುಡುಕಲು ಪ್ರಾರಂಭಿಸಿದರು. ಆಗ ಭಯಕ್ಕೆ ಬಿದ್ದ  ತಸ್ಲೀಮ್, ಕೇಶವದಲ್ಲಿ ತಕ್ಷಣವೇ ಮದುವೆಯಾಗಲು ದುಂಬಾಲು ಬೀಳುತ್ತಾಳೆ. ಯಾವುದೇ ಕಾರಣಕ್ಕೂ ಇನ್ನೊಬ್ಬನ ಹೆಂಡತಿ ಆಗಲು ಅವಳು ಸಿದ್ದಲಿರಲಿಲ್ಲ. ಅಷ್ಟೇ ಅಲ್ಲ, ಧರ್ಮದ ಕಟ್ಟುಪಾಡು ಮತ್ತು ಆಚಾರ ವಿಚಾರಗಳನ್ನ ಬದಲಾಯಿಸಿಕೊಳ್ಳಲು ಅವಳು ರೆಡಿ ಇದ್ದಳು. ಅದಕ್ಕೆಲ್ಲ ಸಿದ್ದಳಾಗಿಯೇ ಕೇಶವನ ಜೊತೆಗೆ ಹೆಜ್ಜೆ ಹಾಕಿಯೇ ಬಿಟ್ಟಳು.

ಮದುವೆಯ ಸಂದರ್ಭದಲ್ಲಿ ಹುಡುಗಿಯ ಸಂಬಂಧಿಕರು ಯಾರು ಇರಲಿಲ್ಲ. ಹುಡುಗನ ಸಂಬಂಧಿಕರು ಕೆಲವರು ಭಾಗಿಯಾಗಿದ್ದರು. ಹಾಗೆ ಮದುವೆ ಮುಗಿಯುತ್ತಿದ್ದಂತೆಯೇ ತಮ್ಮ ವಕೀಲರ ಜೊತೆ ಸೀದಾ ಕೊಪ್ಪಳ ಜಿಲ್ಲಾ ಎಸ್ ಪಿ ಅವರನ್ನು ನವದಂಪತಿಗಳು ಭೇಟಿಯಾಗುತ್ತಾರೆ. ನಾವಿಬ್ಬರೂ ವಯಸ್ಕರರಾಗಿದ್ದೇವೆ. ಇಬ್ಬರು ಮನಪೂರ್ವಕವಾಗಿ ಇಷ್ಟಪಟ್ಟು ಮದುವೆಯಾಗಿದ್ದೇವೆ ಕೂಡ. ಮದುವೆಗೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ. ನಾವಿಬ್ಬರು ಭಯಮುಕ್ತವಾಗಿ ಜೀವನ ನಡೆಸಲು ಅವಕಾಶ ಮಾಡಿಕೊಡುವಂತಹ ವಾತಾವರಣವನ್ನ ಕ್ರಿಯೇಟ್ ಮಾಡಿಕೊಡಿ, ನಮಗೆ ರಕ್ಷಣೆ ಕೊಡಿ ಎಂದು ಅಧಿಕೃತವಾಗಿಯೇ ಮನವಿ ಮಾಡಿಕೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಎಸ್ ಪಿ ಅವರು ಅವರ ಮನವಿಯನ್ನು ಪುರಸ್ಕರಿಸಿದ್ದು ಸಂಬಂಧಪಟ್ಟ ಪೊಲೀಸ್ ಠಾಣೆಯ ಮೂಲಕ ಯಾರೆಲ್ಲಾ ಬೆದರಿಕೆ ಹಾಕುತ್ತಾರೋ ಅವರಿಗೆ ಎಚ್ಚರಿಕೆ ಕೊಡುವ ಮೂಲಕ ನವ ದಂಪತಿಗಳಿಗೆ ಶುಭ ಕೋರಿದರು ಎನ್ನಲಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..