📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ

ಇದು ನಡೆದದ್ದು ಕರಾವಳಿಯಲ್ಲಲ್ಲ. ಕಲ್ಯಾಣ ಕರ್ನಾಟಕದಲ್ಲಿ ನಡೆದಂತಹ ಪ್ರಕರಣವಿದು. ಅವಳು ಮುಸ್ಲಿಂ ಸಂಪ್ರದಾಯದಂತೆ ಬೆಳೆದು ಬಂದ ಹುಡುಗಿಯಾಗಿದ್ದರೆ ಈತ ಹಿಂದೂ ಸಂಪ್ರದಾಯದಲ್ಲಿ ಬೆಳೆದು ಬಂದ ಹುಡುಗ. ಅವರಿಬ್ಬರ ನಡುವಿನ ಪ್ರೇಮ್ ಕಹಾನಿ ಧರ್ಮವನ್ನು ಮೀರಿ ನಿಂತಿತು. ಜಾತಿಯ ಬೇಲಿ ದಾಟಿ ಒಂದಾದರು. ಆದರೆ ಈಗ ಅವರಿಬ್ಬರ ಮನಸ್ಸಿನ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಧರ್ಮದ ಅಂಧಕಾರಕ್ಕೆ ತುತ್ತಾದವರು. ಶತಾಯಗತಾಯ ಅವರಿಬ್ಬರನ್ನು ಬೇರೆ ಮಾಡುವ ಪ್ರಯತ್ನ ನಡೆಸಿದ್ದಾರೆ.

ವನ ಹೆಸರು ಕೇಶವ, ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ನಿವಾಸಿ. ಅವಳೂ ಸಹ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ ಹೆಣ್ಣು ಮಗಳು. ಕಟ್ಟರ್ ಮುಸ್ಲಿಂ ಸಂಪ್ರದಾಯಸ್ಥ ಮನೆತನದ ಹುಡುಗಿ ಅವಳು. ಇವತ್ತು ಅವರಿಬ್ಬರೇ ಕನಕಗಿರಿಯ ಶ್ರೀ ಲಕ್ಷ್ಮಿ ದೇವಿಯ ದೇವಸ್ಥಾನದಲ್ಲಿ ದೇವಿಯ ಸನ್ನಿಧಿಯಲ್ಲಿ ಅರಿಶಿನ ಕೊಂಬನ್ನು ಕಟ್ಟಿಸಿಕೊಳ್ಳುವ  ಮೂಲಕ  ತಸ್ಲೀಮಾ ಕೇಶವನ ಸಂಗಾತಿಯಾಗಿದ್ದಾಳೆ.

ಇವರಿಬ್ಬರ ನಡುವಿನ ಪ್ರೇಮ ಕಹಾನಿ ನಾಲ್ಕು ದಿನದ ಹಿಂದಿನದ್ದಲ್ಲ ಬರೋಬ್ಬರಿ ಎರಡು ವರ್ಷದಿಂದ ನಡಿತಾ ಇರುವಂತಹ ಸಂಬಂಧವದು. ಇಬ್ಬರೂ ಕಾಲೇಜಿಗೆ ಹೋಗುತ್ತಿರುವಾಗ ಬಸ್ಸಿನಲ್ಲಿ ಕಣ್ಣು ಕಣ್ಣು ಬೆರೆತಾಗ ಆದ ಪರಿಚಯ, ಇವತ್ತು ದಾಂಪತ್ಯದವರೆಗೆ ಬಂದು ನಿಂತಿದೆ. ಎರಡು ವರ್ಷದ ಪ್ರೇಮವು ಒಡೆದು ಹೋಗುವ ಭಯದಲ್ಲಿ, ಪ್ರೇಮಿಗಳಿಬ್ಬರೂ ಮದುವೆಯಾಗುವ ಘಟ್ಟಿ ನಿರ್ಧಾರ ಮಾಡಿದ್ದಾರೆ.

ಹೌದು, ತಸ್ಲಿಮಾಳ ಮನೆಯಲ್ಲಿ, ಅವಳಿಗೆ ಮದುವೆ ಮಾಡಲು ಹುಡುಗನ ಹುಡುಕಲು ಪ್ರಾರಂಭಿಸಿದರು. ಆಗ ಭಯಕ್ಕೆ ಬಿದ್ದ  ತಸ್ಲೀಮ್, ಕೇಶವದಲ್ಲಿ ತಕ್ಷಣವೇ ಮದುವೆಯಾಗಲು ದುಂಬಾಲು ಬೀಳುತ್ತಾಳೆ. ಯಾವುದೇ ಕಾರಣಕ್ಕೂ ಇನ್ನೊಬ್ಬನ ಹೆಂಡತಿ ಆಗಲು ಅವಳು ಸಿದ್ದಲಿರಲಿಲ್ಲ. ಅಷ್ಟೇ ಅಲ್ಲ, ಧರ್ಮದ ಕಟ್ಟುಪಾಡು ಮತ್ತು ಆಚಾರ ವಿಚಾರಗಳನ್ನ ಬದಲಾಯಿಸಿಕೊಳ್ಳಲು ಅವಳು ರೆಡಿ ಇದ್ದಳು. ಅದಕ್ಕೆಲ್ಲ ಸಿದ್ದಳಾಗಿಯೇ ಕೇಶವನ ಜೊತೆಗೆ ಹೆಜ್ಜೆ ಹಾಕಿಯೇ ಬಿಟ್ಟಳು.

ಮದುವೆಯ ಸಂದರ್ಭದಲ್ಲಿ ಹುಡುಗಿಯ ಸಂಬಂಧಿಕರು ಯಾರು ಇರಲಿಲ್ಲ. ಹುಡುಗನ ಸಂಬಂಧಿಕರು ಕೆಲವರು ಭಾಗಿಯಾಗಿದ್ದರು. ಹಾಗೆ ಮದುವೆ ಮುಗಿಯುತ್ತಿದ್ದಂತೆಯೇ ತಮ್ಮ ವಕೀಲರ ಜೊತೆ ಸೀದಾ ಕೊಪ್ಪಳ ಜಿಲ್ಲಾ ಎಸ್ ಪಿ ಅವರನ್ನು ನವದಂಪತಿಗಳು ಭೇಟಿಯಾಗುತ್ತಾರೆ. ನಾವಿಬ್ಬರೂ ವಯಸ್ಕರರಾಗಿದ್ದೇವೆ. ಇಬ್ಬರು ಮನಪೂರ್ವಕವಾಗಿ ಇಷ್ಟಪಟ್ಟು ಮದುವೆಯಾಗಿದ್ದೇವೆ ಕೂಡ. ಮದುವೆಗೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ. ನಾವಿಬ್ಬರು ಭಯಮುಕ್ತವಾಗಿ ಜೀವನ ನಡೆಸಲು ಅವಕಾಶ ಮಾಡಿಕೊಡುವಂತಹ ವಾತಾವರಣವನ್ನ ಕ್ರಿಯೇಟ್ ಮಾಡಿಕೊಡಿ, ನಮಗೆ ರಕ್ಷಣೆ ಕೊಡಿ ಎಂದು ಅಧಿಕೃತವಾಗಿಯೇ ಮನವಿ ಮಾಡಿಕೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಎಸ್ ಪಿ ಅವರು ಅವರ ಮನವಿಯನ್ನು ಪುರಸ್ಕರಿಸಿದ್ದು ಸಂಬಂಧಪಟ್ಟ ಪೊಲೀಸ್ ಠಾಣೆಯ ಮೂಲಕ ಯಾರೆಲ್ಲಾ ಬೆದರಿಕೆ ಹಾಕುತ್ತಾರೋ ಅವರಿಗೆ ಎಚ್ಚರಿಕೆ ಕೊಡುವ ಮೂಲಕ ನವ ದಂಪತಿಗಳಿಗೆ ಶುಭ ಕೋರಿದರು ಎನ್ನಲಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು