📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ

    ಇದು ನಡೆದದ್ದು ಕರಾವಳಿಯಲ್ಲಲ್ಲ. ಕಲ್ಯಾಣ ಕರ್ನಾಟಕದಲ್ಲಿ ನಡೆದಂತಹ ಪ್ರಕರಣವಿದು. ಅವಳು ಮುಸ್ಲಿಂ ಸಂಪ್ರದಾಯದಂತೆ ಬೆಳೆದು ಬಂದ ಹುಡುಗಿಯಾಗಿದ್ದರೆ ಈತ ಹಿಂದೂ ಸಂಪ್ರದಾಯದಲ್ಲಿ ಬೆಳೆದು ಬಂದ ಹುಡುಗ. ಅವರಿಬ್ಬರ ನಡುವಿನ ಪ್ರೇಮ್ ಕಹಾನಿ ಧರ್ಮವನ್ನು ಮೀರಿ ನಿಂತಿತು. ಜಾತಿಯ ಬೇಲಿ ದಾಟಿ ಒಂದಾದರು. ಆದರೆ ಈಗ ಅವರಿಬ್ಬರ ಮನಸ್ಸಿನ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಧರ್ಮದ ಅಂಧಕಾರಕ್ಕೆ ತುತ್ತಾದವರು. ಶತಾಯಗತಾಯ ಅವರಿಬ್ಬರನ್ನು ಬೇರೆ ಮಾಡುವ ಪ್ರಯತ್ನ ನಡೆಸಿದ್ದಾರೆ.

    ವನ ಹೆಸರು ಕೇಶವ, ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ನಿವಾಸಿ. ಅವಳೂ ಸಹ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ ಹೆಣ್ಣು ಮಗಳು. ಕಟ್ಟರ್ ಮುಸ್ಲಿಂ ಸಂಪ್ರದಾಯಸ್ಥ ಮನೆತನದ ಹುಡುಗಿ ಅವಳು. ಇವತ್ತು ಅವರಿಬ್ಬರೇ ಕನಕಗಿರಿಯ ಶ್ರೀ ಲಕ್ಷ್ಮಿ ದೇವಿಯ ದೇವಸ್ಥಾನದಲ್ಲಿ ದೇವಿಯ ಸನ್ನಿಧಿಯಲ್ಲಿ ಅರಿಶಿನ ಕೊಂಬನ್ನು ಕಟ್ಟಿಸಿಕೊಳ್ಳುವ  ಮೂಲಕ  ತಸ್ಲೀಮಾ ಕೇಶವನ ಸಂಗಾತಿಯಾಗಿದ್ದಾಳೆ.

    ಇವರಿಬ್ಬರ ನಡುವಿನ ಪ್ರೇಮ ಕಹಾನಿ ನಾಲ್ಕು ದಿನದ ಹಿಂದಿನದ್ದಲ್ಲ ಬರೋಬ್ಬರಿ ಎರಡು ವರ್ಷದಿಂದ ನಡಿತಾ ಇರುವಂತಹ ಸಂಬಂಧವದು. ಇಬ್ಬರೂ ಕಾಲೇಜಿಗೆ ಹೋಗುತ್ತಿರುವಾಗ ಬಸ್ಸಿನಲ್ಲಿ ಕಣ್ಣು ಕಣ್ಣು ಬೆರೆತಾಗ ಆದ ಪರಿಚಯ, ಇವತ್ತು ದಾಂಪತ್ಯದವರೆಗೆ ಬಂದು ನಿಂತಿದೆ. ಎರಡು ವರ್ಷದ ಪ್ರೇಮವು ಒಡೆದು ಹೋಗುವ ಭಯದಲ್ಲಿ, ಪ್ರೇಮಿಗಳಿಬ್ಬರೂ ಮದುವೆಯಾಗುವ ಘಟ್ಟಿ ನಿರ್ಧಾರ ಮಾಡಿದ್ದಾರೆ.

    ಹೌದು, ತಸ್ಲಿಮಾಳ ಮನೆಯಲ್ಲಿ, ಅವಳಿಗೆ ಮದುವೆ ಮಾಡಲು ಹುಡುಗನ ಹುಡುಕಲು ಪ್ರಾರಂಭಿಸಿದರು. ಆಗ ಭಯಕ್ಕೆ ಬಿದ್ದ  ತಸ್ಲೀಮ್, ಕೇಶವದಲ್ಲಿ ತಕ್ಷಣವೇ ಮದುವೆಯಾಗಲು ದುಂಬಾಲು ಬೀಳುತ್ತಾಳೆ. ಯಾವುದೇ ಕಾರಣಕ್ಕೂ ಇನ್ನೊಬ್ಬನ ಹೆಂಡತಿ ಆಗಲು ಅವಳು ಸಿದ್ದಲಿರಲಿಲ್ಲ. ಅಷ್ಟೇ ಅಲ್ಲ, ಧರ್ಮದ ಕಟ್ಟುಪಾಡು ಮತ್ತು ಆಚಾರ ವಿಚಾರಗಳನ್ನ ಬದಲಾಯಿಸಿಕೊಳ್ಳಲು ಅವಳು ರೆಡಿ ಇದ್ದಳು. ಅದಕ್ಕೆಲ್ಲ ಸಿದ್ದಳಾಗಿಯೇ ಕೇಶವನ ಜೊತೆಗೆ ಹೆಜ್ಜೆ ಹಾಕಿಯೇ ಬಿಟ್ಟಳು.

    ಮದುವೆಯ ಸಂದರ್ಭದಲ್ಲಿ ಹುಡುಗಿಯ ಸಂಬಂಧಿಕರು ಯಾರು ಇರಲಿಲ್ಲ. ಹುಡುಗನ ಸಂಬಂಧಿಕರು ಕೆಲವರು ಭಾಗಿಯಾಗಿದ್ದರು. ಹಾಗೆ ಮದುವೆ ಮುಗಿಯುತ್ತಿದ್ದಂತೆಯೇ ತಮ್ಮ ವಕೀಲರ ಜೊತೆ ಸೀದಾ ಕೊಪ್ಪಳ ಜಿಲ್ಲಾ ಎಸ್ ಪಿ ಅವರನ್ನು ನವದಂಪತಿಗಳು ಭೇಟಿಯಾಗುತ್ತಾರೆ. ನಾವಿಬ್ಬರೂ ವಯಸ್ಕರರಾಗಿದ್ದೇವೆ. ಇಬ್ಬರು ಮನಪೂರ್ವಕವಾಗಿ ಇಷ್ಟಪಟ್ಟು ಮದುವೆಯಾಗಿದ್ದೇವೆ ಕೂಡ. ಮದುವೆಗೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ. ನಾವಿಬ್ಬರು ಭಯಮುಕ್ತವಾಗಿ ಜೀವನ ನಡೆಸಲು ಅವಕಾಶ ಮಾಡಿಕೊಡುವಂತಹ ವಾತಾವರಣವನ್ನ ಕ್ರಿಯೇಟ್ ಮಾಡಿಕೊಡಿ, ನಮಗೆ ರಕ್ಷಣೆ ಕೊಡಿ ಎಂದು ಅಧಿಕೃತವಾಗಿಯೇ ಮನವಿ ಮಾಡಿಕೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಎಸ್ ಪಿ ಅವರು ಅವರ ಮನವಿಯನ್ನು ಪುರಸ್ಕರಿಸಿದ್ದು ಸಂಬಂಧಪಟ್ಟ ಪೊಲೀಸ್ ಠಾಣೆಯ ಮೂಲಕ ಯಾರೆಲ್ಲಾ ಬೆದರಿಕೆ ಹಾಕುತ್ತಾರೋ ಅವರಿಗೆ ಎಚ್ಚರಿಕೆ ಕೊಡುವ ಮೂಲಕ ನವ ದಂಪತಿಗಳಿಗೆ ಶುಭ ಕೋರಿದರು ಎನ್ನಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    RSS ಕಾರ್ಯಕ್ರಮಕ್ಕೆ ಹೋದದ್ದಕ್ಕೆ ಅಮಾನತು: ಸರ್ಕಾರಿ ನೌಕರನ ಪರ ನಿಂತ KAT
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು