📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!

    ಅದು ಪವಿತ್ರವಾದಂತಹ ತಿರುಪತಿ ಕ್ಷೇತ್ರ. ಶ್ರೀಮನ್ನಾರಾಯಣನ ವಾಸಸ್ಥಾನ. ಅಂತಹ ಒಂದು ಕ್ಷೇತ್ರದ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ, ಸುಖ ಸಂಸಾರ ನಡೆಸುತ್ತಿದ್ದ ಕುಟುಂಬವೊಂದು ಪೂರ್ತಿಯಾಗಿ ನಾಶಗೊಂಡಿರುವಂತಹ ಆಘಾತಕಾರಿ ಘಟನೆ ಮೊನ್ನೆ ಮಧ್ಯಾಹ್ನ ನಡೆದಿದೆ.

    ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ನಾರಾಯಣವನಂ ಮಂಡಲದ ವೆಂಕಟ ಕೃಷ್ಣ ಪಾಳ್ಯದಲ್ಲಿ ಇಂತಹುದೊಂದು ಭೀಬತ್ಸ ಘಟನೆ ನಡೆದಿದೆ. ಈ ಒಂದು ಘಟನೆಯ ಹಿಂದೆ ಯಾರ ಕೈವಾಡವಿದೆ? ಎಂಬುವುದರ ಬಗ್ಗೆ ಅಲ್ಲಿನ ಪೊಲೀಸರು ವಿಪರೀತವಾಗಿ ತಲೆಕೆಡಿಸಿಕೊಳ್ಳುತ್ತಿದ್ದಾರೆ. ಒಂದೇ ಕುಟುಂಬದ ಐದು ಜನರು ಆಘಾತಕಾರಿ ರೀತಿಯಲ್ಲಿ ಸತ್ತು ಬಿದ್ದಿದ್ದಾರೆ.

    ವೆಂಕಟ ಕೃಷ್ಣ ಪಾಳ್ಯದ ನಿವಾಸಿಯಾದ ಮೋಹನ್ ಹಾಗೂ ಅವರ ತಾಯಿ ಚಂದ್ರಕಲಾ  ಮತ್ತು ಹೆಂಡತಿ ಹರಿತ, ಮಗ ಕೌಶಿಕ್ ಹಾಗೂ ಮಗಳು ಹರಿಣಿ ಇವಿಷ್ಟು ಜನರು ಅನುಮಾನಾಸ್ಪದ ರೀತಿಯಲ್ಲಿ ಹಾಡ ಹಗಲೇ ಸತ್ತು ಬಿದ್ದಿದ್ದರು.

    ಮೋಹನ್ ಕುಮಾರ್, ಇವರು ಇದೇ ವೆಂಕಟಪ್ಪ ಕೃಷ್ಣ ಪಾಳ್ಯದಲ್ಲಿ ಸಿಮೆಂಟ್ ಅಂಗಡಿಯೊಂದನ್ನು ನಡೆಸುತ್ತಿದ್ದರು. ಆರ್ಥಿಕವಾಗಿ ಆಗಲಿ, ಕುಟುಂಬದ ವಿಚಾರದಲ್ಲಾಗಲಿ ಎಲ್ಲೂ ಕೂಡ ಒಂದು ಸಣ್ಣ ವ್ಯತ್ಯಾಸವು ಇರಲಿಲ್ಲ ಎನ್ನುವುದು ಆ ಕುಟುಂಬಕ್ಕೆ ತೀರಾ ಹತ್ತಿರದವರ ಹೇಳಿಕೆ. ಸಂತೋಷದಿಂದ ಇಡೀ ಕುಟುಂಬವು ಇದ್ದಂತಹ ಸಂದರ್ಭದಲ್ಲೇ, ಇದ್ದಕ್ಕಿದ್ದಂತೆಯೇ ಕುಟುಂಬಕ್ಕೆ ಕುಟುಂಬವೇ ನಾಶವಾಗುತ್ತದೆ ಅಂದರೆ ಇಡೀ ಊರು ದಿಗ್ಗಬ್ರಾಂತಗೊಳ್ಳದೆ ಇರುತ್ತದ?

    ಮೊನ್ನೆ ಮಧ್ಯಾಹ್ನ ಮೋಹನ್, ಮಧ್ಯಾಹ್ನದ ಊಟಕ್ಕೆ ಯಾವತ್ತು ಹೋಗುವಂತೆ ಮನೆಗೆ ಹೋಗುತ್ತಾರೆ. ಆ ಸಂದರ್ಭದಲ್ಲಿ ಅಂಗಡಿಯನ್ನು ಅವರ ಭಾಮೈದ ನೋಡಿಕೊಳ್ಳುತ್ತಿದ್ದ. ಹಾಗೆ ಮನೆಗೆ ಹೋದ ವ್ಯಕ್ತಿ ತುಂಬಾ ಸಮಯವಾದರೂ ವಾಪಸ್ ಬರದ್ದನ್ನು ಗಮನಿಸಿ ಆ ಬಾಮೈದ ಸನಿಹದಲ್ಲೇ ಇರುವ ಮನೆಗೆ ಬಂದು ನೋಡಿದರೆ, ಮನೆಯ ಒಳಗೆ ಮೋಹನ್ ಕುಮಾರ್ ಅವರ ತಾಯಿ ಚಂದ್ರಕಲಾ ಮತ್ತು ಅವರ ಹೆಂಡತಿ ಹರಿತ ಅವರ ಬಾಡಿ ಬಿದ್ದಿರೋದನ್ನು ನೋಡಿ ಅಘಾತಗೊಳ್ಳುತ್ತಾನೆ . ತಕ್ಷಣವೇ ಪೊಲೀಸರಿಗೆ ಸುದ್ದಿ ಹೋಗುತ್ತದೆ. ಪೊಲೀಸರು ಬಂದು ಹುಡುಕಲು ಪ್ರಾರಂಭಿಸುತ್ತಿದ್ದಂತೆಯೇ, ಮೋಹನ್ ಕುಮಾರ್ ಹಾಗೂ ಅವರ ಮಕ್ಕಳಾದ ಕೌಶಿಕ್ ಮತ್ತು ಹರಿಣಿಈ ಮೂವರ ಮೂವರ ಬಾಡಿಯೂ ಹತ್ತಿರದಲ್ಲಿಯೇ ಇರುವ ರೈಲ್ವೆ ಟ್ರ್ಯಾಕಿನಲ್ಲಿ ಸಿಗುತ್ತದೆ. ಕನಿಷ್ಠ ಎರಡು ರೈಲು ಆಗಲೇ ಪಾಸಾದ ಕಾರಣ ಬಹುತೇಕ ಅವರ ಬಾಡಿ ನುಜ್ಜಂಗುಜ್ಜಾಗಿತ್ತು.

    ಮೋಹನ್ ಕುಮಾರ್ ಅವರ ಬಾಮೈದ ಹೇಳುವ ಪ್ರಕಾರ ಅವರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿರಲಿಲ್ಲ, ಸಂತೋಷಕರವಾಗಿರುವಂತಹ ಕುಟುಂಬ ಅದಾಗಿತ್ತು. ವ್ಯವಹಾರಿಕವಾಗಿಯೂ, ಆರ್ಥಿಕ ಸಂಕಷ್ಟಕ್ಕೆನು ಈಡಾಗಿರಲಿಲ್ಲ. ಮೋಹನ್ ಕುಮಾರ್ ಯಾವುದೇ ಒತ್ತಡಕ್ಕೂ ಒಳಗಾದಂತಹ ವ್ಯಕ್ತಿಯಲ್ಲ. ಹೀಗಿರುವಾಗ ಅವರು ಇಡೀ ಕುಟುಂಬದ ಜೊತೆಗೆಅವರು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಕುಟುಂಬದ ಸದಸ್ಯರನ್ನು ಸಾಯಿಸಿ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಲ್ಲಿ ಅತ್ಯಂತ ಗುಪ್ತ ಕಾರ್ಯಾಚರಣೆ ನಡೆದಂತೆ ಕಾಣುತ್ತದೆ. ಇಡೀ ಕುಟುಂಬವನ್ನು ನಾಶ ಮಾಡಲಾಗಿದೆ ಎಂಬ ವಿಚಾರವನ್ನು ಸ್ಥಳೀಯರು ಸ್ಪಷ್ಟವಾಗಿ ಹೇಳುತ್ತಿದ್ದಾರೆ.

    ಒಂದೊಮ್ಮೆ ಇದು ಮೋಹನ್ ಕುಮಾರ್ ಅವರ ಆತ್ಮಹತ್ಯೆ ಅಂತನೇ ಇಟ್ಟುಕೊಳ್ಳುವ, ಮನೆಗೆ ಊಟಕ್ಕೆ ಬಂದವ ಹೆಂಡತಿ ಮತ್ತು ತಾಯಿಯನ್ನು ಬಲವಂತವಾಗಿ ಸಾಯಿಸಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ರೈಲ್ವೆ ಹಳಿಗೆ ಹಾಕಿ ಅವರನ್ನು ಸಾಯಿಸಿ ಸ್ವತಃ ಮೋಹನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಅಂದರೆ, ನಂಬುವುದಾದರೂ ಹೇಗೆ? ಆತ ಮಕ್ಕಳನ್ನು ಸಹ, ಮನೆಯ ಒಳಗಡೆಯೇ ಸಾಯಿಸಬಹುದಿತ್ತು. ಮನೆಯಲ್ಲಿ ತಾಯಿ ಮತ್ತು ಅಜ್ಜಿಯ ಸಾವನ್ನು ನೋಡಿದಮೇಲೆ ಅವರು ಹೇಗೆ ಅಪ್ಪನ ಜೊತೆ ನಾರ್ಮಲ್ಲಾಗಿ ಹೊರಹೋಗಲು ಸಾಧ್ಯ? ಇಲ್ಲಿ ಕಾಣದ ಕೈ ಯಾವುದೋ  ಈ ಕೆಲಸ ಮಾಡಿದಂತಿದೆ ಅನ್ನುವುದು ಬಾಮೈದನ ಮತ್ತು ಊರಿನವರ ಸ್ಟೇಟ್ಮೆಂಟ್.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.