📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!

    ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಮೂರ್ತಿ ಭಗ್ನ – ಕಿಡಿಗೇಡಿ ಅಟ್ಟಹಾಸ, ಭಕ್ತರಲ್ಲಿ ಆಘಾತ.ರಾತ್ರಿ ವೇಳೆ ಥಾರ್ ವಾಹನದಲ್ಲಿ ಬಂದ ವ್ಯಕ್ತಿಯಿಂದ ದೇವಸ್ಥಾನದಲ್ಲಿ ಅಸಭ್ಯ ಕೃತ್ಯ – ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ

    ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಗಂಭೀರ ಘಟನೆ ಸಂಭವಿಸಿದೆ. ಕಪ್ಪು ಬಣ್ಣದ ಥಾರ್ ವಾಹನದಲ್ಲಿ ಬಂದ ಅಜೇಯ್ ಎಂಬ ವ್ಯಕ್ತಿ ದೇವಸ್ಥಾನದೊಳಗೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಕ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    ರಾತ್ರಿ ಸುಮಾರು 2 ಗಂಟೆಗೆ ಆರೋಪಿ ಮೊದಲು ದೇವಸ್ಥಾನದ ಸಮೀಪದ ಮನೆಯೊಂದಕ್ಕೆ ತೆರಳಿ “ನನ್ನನ್ನು ರಕ್ಷಿಸಿ” ಎಂದು ಕೂಗಾಡಿ ಒಳನುಗ್ಗಲು ಯತ್ನಿಸಿದ್ದಾನೆ. ನಂತರ ಆತ ದೇವಸ್ಥಾನದ ಕೆರೆಗೆ ಹಾರಿ, ಅಲ್ಲಿಂದ ಮೇಲ್ಭಾಗಕ್ಕೆ ಏರಿ ಹೆಂಚು ತೆಗೆದು ಒಳನುಗ್ಗಿದ್ದಾನೆ.

    ದೇವಸ್ಥಾನದೊಳಗೆ ಕೊಡಮಣಿತ್ತಾಯ ದೈವದ ಗುಡಿಗೆ ಪ್ರವೇಶಿಸಿ ಅಲ್ಲಿ ಅಶಾಂತಿ ಉಂಟುಮಾಡಿದ ಬಳಿಕ ತೀರ್ಥ ಮಂಟಪದ ದೊಡ್ಡ ಗಂಟೆಯನ್ನು ಬಾರಿಸಿದ್ದಾನೆ. ನಂತರ ಗೋಪಾಲಕೃಷ್ಣ ದೇವರ ಗುಡಿಗೆ ನುಗ್ಗಿ ದೇವರ ಮೂರ್ತಿಯನ್ನು ನೆಲಕ್ಕೆ ಎಸೆದು ಭಗ್ನಗೊಳಿಸಿದ್ದಾನೆ.

    ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರೋಶ ಮತ್ತು ನೋವು ಉಂಟಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಾನಸಿಕ ಅಸ್ಥಿರತೆ, ಮದ್ಯದ ಪ್ರಭಾವ ಅಥವಾ ವೈಯಕ್ತಿಕ ಸಮಸ್ಯೆಗಳ ಸಾಧ್ಯತೆಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ##Awareness #KarnatakaNews#balanja temple#BelthangadyNews #TempleIncident#dakshina Kannada news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಸಾರ್ವಜನಿಕರಲ್ಲಿ ವಿನಂತಿ …!
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?