📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ

    ಜೈ ಜವಾನ್ ಜೈ ಕಿಸಾನ್ ಎಂಬ ಘೋಷ ವಾಕ್ಯ ನಮ್ಮ ದೇಶದ ಪವರ್ಫುಲ್ ಘೋಷಣೆಯಾಗಿದೆ. ಹೀಗಿರುವಾಗ ಸೈನಿಕ ಹಾಗೂ ರೈತ ಇವರಿಬ್ಬರಿಗೂ ಇಡೀ ದೇಶವು ಗೌರವ ಕೊಡಲೇಬೇಕು. ಆದರೆ ಇಲ್ಲಿ ಒಂದು ಕಂಪನಿಯು ಅತ್ಯಂತ ಅಗೌರವಯುತವಾಗಿ ಮತ್ತು ದಬ್ಬಾಳಿಕೆ ನಡೆಯನ್ನು ತೋರಿಸಿ ತನ್ನ ಹೀನಾತಿ ಹೀನ ನಡವಳಿಕೆಯನ್ನು ತೋರ್ಪಡಿಸಿದೆ. ಅಂತಹ ಕಂಪನಿಯ ವಿರುದ್ಧ ರಾಜ್ಯ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಆ ಸಂಸ್ಥೆಯ ಜೊತೆಗಿನ ಒಪ್ಪಂದವನ್ನು ಮುರಿದು ಹಾಕುವುದರತ್ತ ಗಮನ ಹರಿಸ ಬೇಕಿದ್ದ ಜಿಲ್ಲಾ ಆಡಳಿತ ಇನ್ನೂ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ

    ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ನಿಡ್ಡೋಡಿ ಪರಿಸರದ ವ್ಯಾಪ್ತಿಯಲ್ಲಿ ಸ್ಟೇರ್ ಲೈಟ್ ಕಂಪನಿಯು ಪೈಪ್ ಲೈನ್ ಜೋಡಣೆಯನ್ನು ಮಾಡುತ್ತಿದೆ ಈ ಒಂದು ಪೈಪ್ಲೈನ್ ಹಾಕುವ ಕಾರ್ಯವು ಏಕಾಏಕಿ ನಡೆಯಬಾರದು ತಾನೇ? ಮೊದಲನೆಯದಾಗಿ ಪೈಪ್ಲೈನ್ ಹಾದು ಹೋಗುವ ಜಾಗದಲ್ಲಿನ ಮಾಲೀಕರಲ್ಲಿ ಮಾತುಕತೆಯನ್ನು ನಡೆಸಬೇಕು ಅವರನ್ನು ಕನ್ವಿನ್ಸ್ ಮಾಡಿ ಅವರ ಒಪ್ಪಿಗೆಯನ್ನು ಪಡೆದು ಆನಂತರ ಪೈಪ್ ಲೈನ್ ಹಾಕುವ ಕಾಮಗಾರಿಯನ್ನು ಪ್ರಾರಂಭಿಸಬೇಕು. ಅದು ನಿಯಮವು ಹೌದು. ಆದರೆ ಇಲ್ಲಿ ಆ ನಿಯಮ ಪಾಲನೆ ಯಾಗಿಲ್ಲ ಸ್ಥಳೀಯ ರೈತ ಕಿಸಾನ್ ಸಂಘದ ಕಾರ್ಯಕರ್ತ ಅಲ್ಫೋನ್ ಡಿಸೋಜ ಎಂಬ ವ್ಯಕ್ತಿಯ ಜಾಗದಲ್ಲಿ ಬೆಳೆದು ನಿಂತಿರುವ ಭತ್ತ ಇರುವಾಗಲೂ ಮೊನ್ನೆ ಏಕಾಏಕಿ ಪೊಲೀಸರನ್ನು ಕರೆದುಕೊಂಡು ಬಂದು ಯಾವುದೇ ನೋಟಿಸು ಕೊಡದೆ ಗದ್ದೆಗೆ ನುಗ್ಗಿ ಮರಗಳನ್ನು ಕಡಿದು ಬತ್ತದ ಗದ್ದೆಯಲ್ಲಿನ ನನ್ನ ನಾಶ ಮಾಡಿ ಹಾಕುವ ಮೂಲಕ ಬತ್ತದ ಬೆಳೆಗೆ ಹಾನಿಯನ್ನು ಉಂಟು ಮಾಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಲಾಗಿದೆ. ಪ್ರಕರಣ ದಾಖಲಾಗುತ್ತದೆ..

    ವಿಚಾರ ಅದಲ್ಲ, ಒಂದು ಕಂಪನಿಯು ತನ್ನ ಕೆಲಸವನ್ನು ಸ್ಥಳೀಯ ಜನರ ಸಹಕಾರ ಅವರ ವಿಶ್ವಾಸವನ್ನು ಗಳಿಸಿ ಮಾಡಿದರೆ ಅದಕ್ಕೊಂದು ಅರ್ಥ ಇರುತ್ತದೆ ಅದು ಬಿಟ್ಟು ದಬ್ಬಾಳಿಕೆಯ ಮೂಲಕ ಹಣದ ಪವರ್ ತೋರಿಸಲು ಹೋದರೆ ಅದರಿಂದ ಸಮಾಜದಲ್ಲಿ  ಗೊಂದಲಕ್ಕೆ ಕಾರಣವಾಗುತ್ತದೆ. ಗೊಂದಲವನ್ನು ಉಂಟುಮಾಡಿದ ಶ್ರೇಯಸ್ಸು ಆ ಕಂಪನಿಗೆ ದಕ್ಕುತ್ತದೆ. ಅದು ಶ್ರೇಯಸ್ ಅಲ್ಲ ಕಪ್ಪು ಚುಕ್ಕೆ ಅನ್ನೋದು ನೆನಪಿಡಬೇಕು.

    ಜಿಲ್ಲಾಡಳಿತವು ಈ ವಿಚಾರವನ್ನು ನಿರ್ಲಕ್ಷ್ಯ ಮಾಡದೆ ಕೇವಲ ಒಬ್ಬ ರೈತನಿಗೆ ತೊಂದರೆಯಾಗಿದೆ ಎಂಬ ಕಾರಣಕ್ಕೆ ಗಪ್ ಚುಪ್ ಆಗಿ ಕೂರದೆ ಟೇರ್ಲೈಟ್ ಕಂಪನಿಯ ದಬ್ಬಾಳಿಕೆಗೆ ಮುಟ್ಟಿ ನೋಡಿಕೊಳ್ಳುವಂತಹ ಪೆಟ್ಟನ್ನು ನೀಡದಿದ್ದರೆ ಜಿಲ್ಲಾಡಳಿತ ರೈತರ ಪರವಾಗಿ ಇಲ್ಲ ಎಂಬ ಮೆಸೇಜ್ ಹೋಗಲು ಕಾರಣವಾಗುತ್ತದೆ. ಇಲ್ಲಿ ಕಂಪನಿಯು ತನ್ನ ಇತಿಮಿತಿಯನ್ನು ಮೀರಿ ವರ್ತನೆ ನಡೆಸಿದೆ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ಭೂಮಿಯ ಮಾಲೀಕನ ಬಳಿ ಮಾತುಕತೆ ನಡೆಸದೆ ಅವನ ಬೆಳೆಯನ್ನು ನಾಶ ಮಾಡಿದ್ದು ಗೋರಾತಿ ಘೋರ ಅಪರಾಧವೇ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವೂ ತಕ್ಷಣ ರೈತನ ಪರವಾಗಿ ನಿಲ್ಲುವ ಸಾಹಸ ಮಾಡಬೇಕಿತ್ತು , ಆ ಕೆಲಸವನ್ನು ಜಿಲ್ಲಾಡಳಿತ ಮಾಡಿಲ್ಲ ಆದರೆ ಸ್ಥಳೀಯ ಪೊಲೀಸರು ಮಾತ್ರ ಕಂಪನಿಗೆ ನಿಮ್ಮ ಕಾಮಗಾರಿಯನ್ನು ನಿಲ್ಲಿಸಿ ಮಾತುಕತೆ ಮಾಡಿ ವ್ಯವಹಾರ ಬಗೆಹರಿದ ನಂತರ ಕೆಲಸ ಮುಂದುವರಿಸಿ ಎಂಬ ಮೆಸೇಜ್ ನೀಡುತ್ತಾರೆ. ಆದರೆ ಕಂಪನಿಯು ಆ ಮೆಸೇಜಿಗೆ ಕ್ಯಾರೆ ಎನ್ನದೆ ತನ್ನ ಕೆಲಸ ಮಾಡುತ್ತದೆ ಮತ್ತು ದಬ್ಬಾಳಿಕೆ ಪ್ರದರ್ಶನ ಮಾಡುತ್ತದೆ. ಕಂಪನಿಯು ಸ್ಥಳೀಯ ಮಸಲ್ ಪವರ್ ಇರುವಂತಹ ವ್ಯಕ್ತಿಗಳ ಮೂಲಕವೇ ಈ ಕೆಲಸ ಮಾಡಿಸುತ್ತದೆ. ಇದನ್ನು ಜಿಲ್ಲಾಡಳಿತ ಅರ್ಥಮಾಡಿಕೊಳ್ಳಬೇಕು ಅಂತಹ ವ್ಯಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಜಿಲ್ಲಾಡಳಿತದಿಂದ ಆಗದಿದ್ದರೆ ಈ ಜಿಲ್ಲಾಡಳಿತಕ್ಕೆ ಶ್ಯೆಮ್ ಸರ್ಟಿಫಿಕೇಟ್ ಸಿಗುವುದಂತೂ ನಿಶ್ಚಿತ. ರೈತ ಕೂಡ ಈ ಕಾಮಗಾರಿಗೆ ಜಾಗ ಕೊಡುವುದಿಲ್ಲ ಅಂದಿಲ್ಲ ಯೋಗ್ಯ ದರವನ್ನು ನೀಡಿದರೆ ಜಾಗ ಕೊಡುತ್ತೇನೆ ಅಂತಾನೆ ಹೇಳಿದ್ದಾನೆ. ಅಷ್ಟೇ ಅಲ್ಲ, ಇನ್ನು ಒಂದುವರೆ ತಿಂಗಳಿನಲ್ಲಿ ಭತ್ತದ ಕಟಾವು ಬರುತ್ತದೆ ಅದು ಮುಗಿದ ನಂತರ ಕಾಮಗಾರಿ ಮಾಡಿ ಅಂತನು ಮನವಿ ಮಾಡಿಕೊಂಡಿರುತ್ತಾನೆ . ಯಾವುದನ್ನು ಕೇಳದ ಕಂಪನಿಯು ತನ್ನ ತಾಕತ್ತನ್ನು ತೋರಿಸಲು ಹೋಗಿದ್ದು ಈ ಬಡ ರೈತನ ಮೇಲೆ. ಈತನ ಮೇಲೆ ತಾಕತ್ತು ತೋರಿಸಲು ಹೋಗಿದ್ದಕ್ಕೆ ಏನು ಮಾಡಬೇಕು ಅದನ್ನು ಜಿಲ್ಲಾಡಳಿತ ಮಾಡುತ್ತದೆ ಎಂಬ ನಿರೀಕ್ಷೆ ಇತ್ತು ಆ ನಿರೀಕ್ಷೆಗೆ ತಕ್ಕಂತೆ ಜಿಲ್ಲಾಡಳಿತ ನಡೆದುಕೊಂಡಿಲ್ಲ ಅನ್ನುವುದಂತೂ ಸುಸ್ಪಷ್ಟ. ಸ್ಥಳೀಯ ಶಾಸಕರು ಸಹ ಆ ಬಗ್ಗೆ ಧ್ವನಿ ಎತ್ತಬೇಕಿತ್ತು, ಧ್ವನಿಯನ್ನು ಎತ್ತಲಿಲ್ಲ ಪ್ರತಿಕ್ರಿಯೆಯನ್ನು ನೀಡಲಿಲ್ಲ ಎಂಬ ಅಸಮಾಧಾನದ ಮಾತುಗಳು ಕೇಳಿ ಬರುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಒಂದು iPhoneಗಾಗಿ ಆರಂಭವಾದ ಮಗನ ಹಠ… ಕೊನೆಗೆ ಒಂದೇ ಕುಟುಂಬದ ಮೂವರ ಜೀವವೇ ಹೋಯ್ತು!
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    “ಪತ್ನಿ ಮನೆಗೆಲಸದ ಸೇವಕಿ ಅಲ್ಲ!” — ಮದುವೆ ಎಂದರೆ ಹೆಂಡತಿಯ ಸ್ವಾತಂತ್ರ್ಯ ಕಸಿಯುವ ಪರವಾನಗಿ ಅಲ್ಲ: ಹೈಕೋರ್ಟ್
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..